Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಲ್ಲಾ ಆಯಾಮಗಳಲ್ಲಿ ತೊಡಗಿಸಿಕೊಂಡ ಬಿ. ಎಂ. ಸುಕುಮಾರ ಶೆಟ್ಟರದ್ದು ಅಸಾಧಾರಣ ವ್ಯಕ್ತಿತ್ವ
    ಊರ್ಮನೆ ಸಮಾಚಾರ

    ಎಲ್ಲಾ ಆಯಾಮಗಳಲ್ಲಿ ತೊಡಗಿಸಿಕೊಂಡ ಬಿ. ಎಂ. ಸುಕುಮಾರ ಶೆಟ್ಟರದ್ದು ಅಸಾಧಾರಣ ವ್ಯಕ್ತಿತ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಮಾಜದ ಏಳಿಗೆಗಾಗಿ ತೊಡಗಿಸಿಕೊಂಡ ಉತ್ಕೃಷ್ಟ ವ್ಯಕ್ತಿಗಳನ್ನು ಸನ್ಮಾನಿಸಿದರೆ ಅವರನ್ನು ಹುರಿದುಂಬಿಸಿದಂತಾಗುವುದಲ್ಲದೇ ಮತ್ತಷ್ಟು ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಎಲ್ಲಾ ಆಯಾಮಗಳಲ್ಲಿಯೂ ತೊಡಗಿಸಿಕೊಂಡ ಅಸಾಧಾರಣ ವ್ಯಕ್ತಿಯಾಗಿದ್ದು, ಶ್ರೇಷ್ಠ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಬೆಳೆದಿದ್ದಾರೆ. ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸಿ ಬಡ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವ ಅವರು ಭಗವಂತ ಮೆಚ್ಚುವ ಕೆಲಸ ಮಾಡಿದ್ದಾರೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ| ಎನ್. ವಿನಯ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಡಿ.15ರಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕುಂದಾಪುರ ಎಜುಕೇಶನ್ ಸೊಸೈರಿ ರಿ. ಹಾಗೂ ಅಭಿಮಾನಿ ಬಳಗದವರಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ ಅವರನ್ನು ಸನ್ಮಾನಿಸಿ ಮಾತನಾಡಿದರು.

    ಮಣಿಪಾಲ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಮಾತನಾಡಿ ಸುಕುಮಾರ ಶೆಟ್ಟರು ಬಹುಮುಖ ಪ್ರತಿಭೆ ವ್ಯಕ್ತಿ. ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡು ಯಶಸ್ವಿಯಾದವರು. ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡುತ್ತಿದ್ದಾರೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ ಪರಿಶ್ರಮ ಇದ್ದಾಗ ಮಾತ್ರ ಯಶಸ್ಸಿನ ಕಡೆಗೆ ಸಾಗಲು ಸಾಧ್ಯ ಎಂಬುದನ್ನು ಸುಕುಮಾರ ಶೆಟ್ಟಿ ಅವರು ತೋರಿಸಿಕೊಟ್ಟಿದ್ದಾರೆ. ಬದುಕಿನ ಹಸಿವು, ಶೈಕ್ಷಣಿಕ ಹಸಿವನ್ನು ನೀಗಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದರು.

    ಸನ್ಮಾನ ಸ್ವೀಕರಿಸಿದ ಬೈಂದೂರು ಶಾಸಕ, ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಉನ್ನತಿಕರಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದ್ದೇನೆ. ಶಾಸಕನಾದ ಬಳಿಕ ಕ್ಷೇತ್ರ ಜನರ ಮೂಲಭೂತ ಸೌಕರ್ಯಗಳನ್ನು ಪೂರೈಸಿಕೊಡುವ ನಿಟ್ಟಿನಲ್ಲಿ ನಿರಂತವಾಗಿ ತೊಡಗಿಸಿಕೊಂಡಿದ್ದೇನೆ. ಜಿಲ್ಲೆಯಲ್ಲಿರುವ ವಸತಿ ನಿಲಯಗಳ ಅನಾನುಕೂಲತೆ ಹಾಗೂ ಅಗತ್ಯತೆಯನ್ನು ಈಗಾಗಲೇ ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಿತ್ರಣವನ್ನು ಬಿಚ್ಚಿಟ್ಟಿದ್ದೇನೆ ಎಂದರು.

    Click here

    Click here

    Click here

    Click Here

    Call us

    Call us

    ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ, ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ. ಎಚ್. ಶಾಂತಾರಾಮ್, ಸಿಇಎಸ್ ಸದಸ್ಯೆ ವಿನತಾ ಪಿ. ರೈ ಮೊದಲಾದವರು ವೇದಿಕೆಯಲ್ಲಿದ್ದರು.

    ಕುಂದಾಪುರ ಎಜುಕೇಶನ್ ಸೊಸೈಟಿ ಮ್ಯಾನೇಜಿಂಗ್ ಕಮಿಟಿ ಸದಸ್ಯ ಡಾ. ಎಂ. ವಿ. ಕುಲಾಲ್ ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅತಿಥಿಗಳನ್ನು ಜೊತೆ ಕಾರ್ಯದರ್ಶಿ ಕೆ. ಸುಧಾಕರ ಶೆಟ್ಟಿ ಬಾಂಡ್ಯ, ಬಿ. ಅರುಣ್ ಕುಮಾರ್ ಶೆಟ್ಟಿ ಪರಿಚಯಿಸಿದರು. ಉಪಾಧ್ಯಕ್ಷ ಎ.ಪಿ. ಮಿತ್ತಂತಾಯ ಸನ್ಮಾನ ಪತ್ರ ವಾಚಿಸಿದರು. ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ನಿರ್ದೇಶಕ ದೋಮ ಚಂದ್ರಶೇಖರ್ ಧನ್ಯವಾದಗೈದರು. ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.