ಕುಂದಾಪ್ರ ಡಾಟ್ ಕಾಂ’ ಸುದ್ದಿ
ರತ್ನಾಕರ ಶೆಟ್ಟಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ). ಬಸ್ರೂರು ಕುಂದಾಪುರ ತಾಲೂಕಿನ ಸಾಧಕರಿಗೆ ನೀಡಲಾಗುತ್ತಿರುವ 2018-19ನೇ ಸಾಲಿನ ಕೊಳ್ಕೇರಿ ರತ್ನಾಕರ ಶೆಟ್ಟಿ ಸಾಧಕ ಪ್ರಶಸ್ತಿಗೆ ಕಂದಾವರ ಸತೀಶ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಂದಾವರ ಸತೀಶ ಶೆಟ್ಟಿಯವರ ವಿಭಿನ್ನವಾದ ಸಾಧನೆಗಾಗಿ ಯುಎಇ ಸರಕಾರದ 2017ರ ಎನೋಕ್ ಎನರ್ಜಿ ಅವಾರ್ಡನ್ನು ಕೊಟ್ಟು ಗೌರವಿಸಿದೆ. ಯುಎಇ ಫ್ಯುಯಲ್ ಸ್ಟೇಷನ್ನ ಡಿಸೈನ್ ಮತ್ತು ಇಂಜಿನಿಯರಿಂಗ್ ಎನರ್ಜಿ ಸ್ಟ್ಯಾಂಡರ್ಡ್ ತಯಾರಿ ಮಾಡಿದ್ದಕ್ಕಾಗಿ ದುಬೈ ರೋಟನನಲ್ಲಿ ನಡೆದ ಎಕ್ಸ್ಕ್ಲೂಸಿವ್ ಸಭೆಯಲ್ಲಿ ಅವರನ್ನು ಗೌರವಿಸಲಾಗಿದೆ. ಮದ್ಯಪ್ರಾಚ್ಯದ ಕೈಗಾರಿಕಾ ಕಂಪನಿಗಳಲ್ಲಿ ಪ್ರತಿಷ್ಟಿತವಾಗಿರುವ ಕ್ಲೈಮೇಟ್ ಕಂಟ್ರೋಲ್ ಅವಾರ್ಡ್ ೨೦೧೭ರ ಆಯ್ಕೆ ಸಮಿತಿಯ ಸದಸ್ಯರಾಗಿ ಯುಎಇ ಸರಕಾರದಿಂದ ನಾಮ ನಿರ್ದೇಶನ ಹೊಂದಿದ್ದಾರೆ.
ಸತೀಶ್ ಶೆಟ್ಟಿ ಅವರ ಈ ಸಾಧನೆಯನ್ನು ಪರಿಗಣಿಸಿ ಕೊಳ್ಕೇರಿ ರತ್ನಾಕರ ಶೆಟ್ಟಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ.) ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಪ್ರಶಸ್ತಿ ನೀಡುತ್ತಿದೆ.