Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕಿನಲ್ಲಿ 4 ಮಂಗಗಳ ಸಾವು. ಆತಂಕದಲ್ಲಿ ಜನತೆ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕಿನಲ್ಲಿ 4 ಮಂಗಗಳ ಸಾವು. ಆತಂಕದಲ್ಲಿ ಜನತೆ

    Updated:09/01/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜ.9: ಇತ್ತಿಚಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ಪರಿಸರದಲ್ಲಿ ಮಂಗನ ಕಾಯಿಲೆ ಹಬ್ಬಿರುವ ಬೆನ್ನಲ್ಲೇ ಇದೀಗ ಕುಂದಾಪುರ ತಾಲೂಕಿಗೂ ಖಾಯಿಲೆ ವ್ಯಾಪಿಸುವ ಭೀತಿ ಎದುರಾಗಿದೆ. ತಾಲೂಕಿನ ಸಿದ್ಧಾಪುರ, ಹಳ್ಳಿಹೊಳೆ ಹಾಗೂ ಹೊಸಂಗಡಿ ಪರಿಸರದಲ್ಲಿ ಒಟ್ಟು ನಾಲ್ಕು ಮಂಗಗಳ ಶವ ಪತ್ತೆಯಾಗಿದೆ. ಈ ಮಂಗಗಳ ಸ್ಯಾಂಪಲ್‌ಗಳನ್ನು ಶಿವಮೊಗ್ಗದಲ್ಲಿರುವ ವೈರಸ್ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ.

    Click Here

    Call us

    Click Here

    ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಸಿದ್ಧಾಪುರ ಗ್ರಾಮದ ಶಂಕರ ಯಡಿಯಾಳ ಎಂಬವರ ಮನೆಯ ಸಮೀಪ ನಿನ್ನೆ ಒಂದು ಮಂಗನ ಶವ ಪತ್ತೆಯಾಗಿದ್ದರೆ, ಇಂದು ಸಿದ್ಧಾಪುರ, ಹಳ್ಳಿಹೊಳೆ ಹಾಗೂ ಹೊಸಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಲಾ ಒಂದೊಂದು ಮಂಗಗಳ ಶವ ಪತ್ತೆಯಾಗಿದೆ ಎಂದು ಅವರು ವಿವರಿಸಿದರು. ಶಿವಮೊಗ್ಗದಲ್ಲಿರುವ ವಿಡಿಎಲ್ (ವೈರಸ್ ಪರೀಕ್ಷಾ ಪ್ರಯೋಗಾಲಯ)ನಿಂದ ವರದಿ ಬಂದ ಬಳಿಕ ಅವುಗಳ ಸಾವಿನ ನಿಜವಾದ ಕಾರಣಗಳನ್ನು ತಿಳಿಯಬಹುದಾಗಿದೆ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸಿದ್ಧಾಪುರ, ಹಳ್ಳಿಹೊಳೆ ಹಾಗೂ ಹೊಸಂಗಡಿ ಪರಿಸರದಲ್ಲಿ ಮಂಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದು ಕೊಳ್ಳಲಾಗುತ್ತಿದೆ. ಪರಿಸರದ ಜನರು ಕಾಡುಗಳಿಗೆ ತೆರಳುವುದನ್ನು ನಿಯಂತ್ರಿಸಬೇಕು. ಅನಗತ್ಯವಾಗಿ ಯಾರೂ ಕಾಡು ಪ್ರದೇಶಗಳಿಗೆ ಹೋಗಬೇಡಿ. ಅನಿವಾರ್ಯವಾದರೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಹೋಗಿ. ಸಾಕು ಪ್ರಾಣಿಗಳನ್ನು ಕಾಡಿನತ್ತ ಬಿಡಬೇಡಿ ಎಂದವರು ಜನರಲ್ಲಿ ಮನವಿ ಮಾಡಿದರು. ಇದಕ್ಕಾಗಿ ಪರಿಸರದಲ್ಲಿ ಕರಪತ್ರಗಳನ್ನು ಹಂಚಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕುಂದಾಪುರ, ಬೈಂದೂರು ಹಾಗೂ ಕಾರ್ಕಳಗಳ ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರುಗಳ ತುರ್ತು ಸಭೆಯನ್ನು ಕರೆಯಲಾಗಿದೆ. ಅವರಿಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ವಿವರಿಸಲಾಗುವುದು ಎಂದ ಡಾ.ರೋಹಿಣಿ, ಜ್ವರ ಬಂದರೆ ಕಡೆಗಣಿಸದೇ ತಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    11 − 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.