Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್-2019 ಉದ್ಘಾಟನೆ
    Uncategorized

    ಬೈಂದೂರಿನಲ್ಲಿ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್-2019 ಉದ್ಘಾಟನೆ

    Updated:21/01/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಶಾಲಾ ಕಾಲೇಜುಗಳಲ್ಲಿ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿ ಮಕ್ಕಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಳೆಸಬೇಕು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ಪಡುವರಿ ಗ್ರಾಮದ ಸೋಮೇಶ್ವರ ಕಡಲ ತೀರದಲ್ಲಿ ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಬೆಸುಗೆ ಫೌಂಡೇಶನ್ ಬಂದೂರು, ಗ್ರಾಪಂ ಪಡುವರಿ, ಜಿಲ್ಲಾಡಳಿತ ಉಡುಪಿ ಮತ್ತು ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುವ ೬ನೇ ಕರ್ನಾಟಕ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್-೨೦೧೯ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯ ಹಾಗೂ ಸುಪ್ತ ಪ್ರತಿಭೆಯನ್ನು ಸ್ಪರ್ಧೆಯ ಮೂಲಕ ಹೊರಹೊಮ್ಮಿಸುವುದರ ಜತೆಗೆ ಅವರ ಅಭಿವೃದ್ಧಿಗಾಗಿ ಮತ್ತು ಗುಣಾತ್ಮಕ ಕಲಿಕೆಯನ್ನು ಪ್ರೋತ್ಸಾಹಿಸುವ ನೆಲೆಯಲ್ಲಿ ಇಂತಹ ಕಾರ್ಯಕ್ರಮಗಳು ಸಹಕರಿಯಾಗಬಲ್ಲದು. ಮುಂದಿನ ದಿನಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದರು.

    ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಜಿಪಂ ಸದಸ್ಯ ಸುರೇಶ ಬಟವಾಡಿ, ತಾಪಂ ಸದಸ್ಯರಾದ ಗಿರೀಜಾ ಖಾರ್ವಿ, ಪುಷ್ಪರಾಜ್ ಶೆಟ್ಟಿ, ಪಡುವರಿ ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ನಿವೃತ್ತ ಐಎಫ್‌ಎಸ್‌ಬಿ. ಜಗನ್ನಾಥ ಶೆಟ್ಟಿ, ಬೆಂಗಳೂರು ಕೋಚ್ ಬಿ. ಸಿ ರವೀಂದ್ರ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಶಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ, ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಮುನಿರಾಜ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ಎನ್. ದೀಪಕ್ ಕುಮಾರ ಶೆಟ್ಟಿ, ಜಿಲ್ಲಾ, ರಾಜ್ಯ ಕಬಡ್ಡಿ ಅಸೋಸಿಯೇಶನ್ ಪದಾಧಿಕಾರಿಗಳು, ವಿವಿಧ ತಂಡಗಳ ಪ್ರಾಯೋಜಕರು ಉಪಸ್ಥಿತರಿದ್ದರು.

    ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಜಯಾನಂದ ಹೋಬಳಿದಾರ್ ಸ್ವಾಗತಿಸಿ, ಬೆಸುಗೆ ಫೌಂಡೇಶನ್ ಅಧ್ಯಕ್ಷ ಕುಂಜಾಲು ವೆಂಕಟೇಶ ಕಿಣಿ ಪ್ರಾಸ್ತಾವಿಸಿದರು. ಗಣಪತಿ ಹೋಬಳಿದಾರ್ ಮತ್ತು ರಾಘವೇಂದ್ರ ದಡ್ಡು ನಿರೂಪಿಸಿದರು. ಸತ್ಯನಾರಾಯಣ ಬಾಡ ವಂದಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ೨೩ ಬಾಲಕರ ಹಾಗೂ ೧೬ ಬಾಲಕಿಯರ ತಂಡ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

     

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    2 × two =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.