Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಯುವಕರ ಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ
    ಊರ್ಮನೆ ಸಮಾಚಾರ

    ಕೋಟ ಯುವಕರ ಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

    Updated:03/02/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ,ಫೆ.3: ಮಣೂರಿನ ಚಿಕ್ಕನಕೆರೆಯಲ್ಲಿ ಜ. 26ರ ರಾತ್ರಿ ನಡೆದ ಅಮಾಯಕ ಯುವಕರಿಬ್ಬರ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕೋಟ ಬಸ್ ನಿಲ್ದಾಣ ಸಮೀಪದ ಸಂತೆ ಮಾರ್ಕೆಟ್ ಹತ್ತಿರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

    Click Here

    Call us

    Click Here

    ವಿಧಾನ ಪರಿಷತ್ ವಿಪಕ್ಷ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಇದುವರೆಗೂ ನಾನು ಏನು ಮಾತನಾಡಿಲ್ಲ. ನನ್ನೂರ ಇಬ್ಬರು ಹುಡುಗರ ಕೊಲೆ ನಡೆದಿದ್ದು ಬಹಳಷ್ಟು ನೋವು ನೀಡಿದೆ. ಪೊಲೀಸ್ ತನಿಖೆಗೆ ತೊಂದರೆಯಾಗಬಾರದೆಂದು ಯಾವುದೇ ಹೇಳಿಕೆ ನೀಡದೆ ಸುಮ್ಮನಿದ್ದೇನೆ. ಹೀಗಿದ್ದರೂ ಪೊಲೀಸರು ಇದುವರೆಗೂ ಆರೋಪಿಗಳನ್ನು ಹಿಡಿದಿಲ್ಲ. ಫೆ.೬ರವರೆಗೆ ನಾನು ಮಾತನಾಡಲ್ಲ. ಅಷ್ಟರವರೆಗೆ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ನಾನು ಮುಖಮಂತ್ರಿಗಳಲ್ಲಿ ಈ ಬಗ್ಗೆ ಚರ್ಚಿಸಲಿದ್ದೇನೆ ಎಂದರು.

    ರಾಕೇಶ್ ಮಲ್ಲಿ ಮಾತನಾಡಿ ಯತೀಶ್ ನನ್ನೊಂದಿಗಿದ್ದ ಒಳ್ಳೆಯ ಹುಡುಗ. ಇಬ್ಬರು ಹುಡುಗರ ಕೊಲೆ ಖಂಡನೀಯವಾದುದು. ಪೊಲೀಸರು ಆರೋಪಿಗಳನ್ನು ತಕ್ಷಣ ಹಿಡಿಯಬೇಕು. ನಾನು ಸರಕಾರದ ಮಟ್ಟದಲ್ಲಿ ಮಾತನಾಡಲಿದ್ದೇನೆ ಎಂದರು.

    ನ್ಯಾಯವಾದಿ ಶ್ಯಾಮ ಸುಂದರ ನಾರಿ, ಸಾಸ್ತಾನ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರತಾಪ್‌ಶೆಟ್ಟಿ, ಭಗತ್ ಸಿಂಗ್ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷ ಧನು, ದಿನೇಶ್ ಗಾಣಿಗ ಕೋಟ, ಶಿವರಾಂ, ಎಂ. ಸಂಜೀವ ಸಾಲಿಗ್ರಾಮ, ರಾಜೇಶ್ ಕಾವೇರಿ ಕೊಲೆ ಕೃತ್ಯ ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಮಾತನಾಡಿದರು.

    ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ, ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ, ರೋಟರಿ ಕ್ಲಬ್ ಕೋಟ ಸಿಟಿಯ ಸುಬ್ರಾಯ ಆಚಾರ್ಯ, ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶ್ರೀಧರ ಆಚಾರ್ಯ, ಕೋಟ್ತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಮೋದ್ ಹಂದೆ, ಕಿಶೋರ್ ಕುಂದಾಪುರ, ಅರುಣ ಕುಂದರ್ ಕಲ್ಗದ್ದೆ, ಐರೋಡಿ ವಿಠಲ ಪೂಜಾರಿ, ಸಂದೀಪ್ ಕುಂದರ್ ಕೋಡಿ, ಕೃಷ್ಣಮೂರ್ತಿ ಸಾಲಿಗ್ರಾಮ, ಲಿಯಾಖತ್ ಆಲಿ ಇನ್ನಿತರ ಪ್ರಮುಖರು ಭಾಗವಹಿಸಿದ್ದರು. ಕೊಲೆ ಆರೋಪಿಗಳಾದ ರೆಡ್ಡಿ ಸಹೋದರರನ್ನು ಶೀಘ್ರದಲ್ಲೇ ಬಂಧಿಸಬೇಕು. ಮತ್ತು ಅವರನ್ನು ಕುಟುಂಬ ಸಮೇತರಾಗಿ ಗಡಿಪಾರು ಮಾಡಬೇಕೆಂಬ ಎಂಬ ಒತ್ತಾಯ ಸಭೆಯಲ್ಲಿ ಕೇಳಿ ಬಂತು. ಇದೇ ಸಂದರ್ಭ ಕೊಲೆಗೀಡಾದ ಯುವಕರ ಕುಟುಂಬಕ್ಕೆ ರೂ. 48 ಸಾವಿರ ಮೊತ್ತ ಸಂಗ್ರಹವಾಯಿತು. 25 ಕ್ಕೂ ಅಧಿಕ ಸ್ಥಳೀಯ ಸಂಘ ಸಂಸ್ಥೆಗಳು ಭಾಗವಹಿಸಿದ್ದು ಸಾರ್ವಜನಿಕರು ಕೂಡ ಭಾಗವಹಿಸಿದ್ದರು.

    Click here

    Click here

    Click here

    Call us

    Call us

    ಪ್ರತಿಭಟನಾ ಸಭೆಯ ಕೊನೆಯಲ್ಲಿ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳು ಭಾಗವಹಿಸಿ ಮನವಿ ಸ್ವೀಕರಿಸಿದರು. ಅವರು ಮಾತನಾಡಿ ಆರೋಪಿಗಳ ಬಂಧನಕ್ಕೆ 4 ತಂಡವನ್ನು ರಚಿಸಿ ಪ್ರಯತ್ನ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರಿಗೆ ತಕ್ಕ ಶಿಕ್ಷೆ ಆಗುವಂತೆ ಮಾಡಲಾಗುವುದು ಎಂದರು.

    ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 .
    ► ಕೋಟದಲ್ಲಿ ಸ್ನೇಹಿತರಿಬ್ಬರ ಕೊಲೆ: ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ – https://kundapraa.com/?p=30976 .
    ► ಸಾವಿನಲ್ಲೂ ಒಂದಾದ ಆಪ್ತ ಸ್ನೇಹಿತರು. ಮರುಗಿದ ಕೋಟ ಜನತೆ – https://kundapraa.com/?p=30979 .

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.