Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೋಣಿಮನೆ ಪ್ರವಾಸ: ಗಂಗೋತ್ರಿ ಹಾಲಿಡೇಸ್ ಕ್ರೂಸ್ ಉದ್ಘಾಟನೆ
    Uncategorized

    ದೋಣಿಮನೆ ಪ್ರವಾಸ: ಗಂಗೋತ್ರಿ ಹಾಲಿಡೇಸ್ ಕ್ರೂಸ್ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ರಾಜ್ಯದ ಕರಾವಳಿಯಲ್ಲಿ ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳು ಇಲ್ಲಿನ ಎಲ್ಲ ಉದೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲಾರವು. ಇಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಬಳಸಿಕೊಂಡು ನಡೆಸಬಹುದಾದ ಪ್ರವಾಸೋದ್ಯಮ ಆ ಕೊರತೆಯನ್ನು ಖಂಡಿತ ನೀಗಿಸಬಲ್ಲುದು ಎಂದು ಉಡುಪಿಯ ಕಡಲತೀರ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಬುಧವಾರ ಗುಜ್ಜಾಡಿಯ ಹೆಬ್ಬಾರ್‌ಬೈಲು ಎಂಬಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಸಾಂಪ್ರದಾಯಿಕ ದೋಣಿಮನೆ ’ಗಂಗೋತ್ರಿ ಹಾಲಿಡೇಸ್ ಕ್ರೂಸ್’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

    ರಾಜ್ಯ 98 ಕಿಲೋ ಮೀಟರ್ ಉದ್ದದ ಕರಾವಳಿಯನ್ನು ಹೊಂದಿದೆ. ಸುಂದರ ಕಡಲತೀರ ಮತ್ತು ಸಮೃದ್ಧವಾದ ಹಿನ್ನೀರುಗಳಿವೆ. ಇಲ್ಲಿ ಜಲಕ್ರೀಡೆ, ಜಲಯಾನ, ಜಲಸಾಹಸಕ್ಕೆ ವಿಫುಲ ಅವಕಾಶಗಳಿವೆ. ಇವನ್ನು ನಡೆಸಲು ವಿಶೇಷ ಶಿಕ್ಷಣದ ಅಗತ್ಯವಿಲ್ಲ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಯಾವುದೇ ತೊಂದರೆ ಆಗುದಿಲ್ಲ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಲು ಮುಂದಾಗುವವರಿಗೆ ಸರ್ಕಾರ ಸಹಾಯಧನ ನೀಡಬೇಕು ಎಂದು ಅವರು ಹೇಳಿದರು.

    ರಾಷ್ಟ್ರೀಯ ಕಬ್ಬಡಿ ಆಟಗಾರ ರಿಶಾಂಕ್ ದೇವಾಡಿಗ ಸಾಂಪ್ರದಾಯಿಕ ದೋಣಿಮನೆ ’ಗಂಗೋತ್ರಿ ಹಾಲಿಡೇಸ್ ಕ್ರೂಸ್’ನ್ನು ಉದ್ಘಾಟಿಸಿದರು. ಗುಜ್ಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಭಾಸ್ಕರ ಮಾತನಾಡಿ, ಕರಾವಳಿಯಲ್ಲಿ ಹಿಮಪಾತ ಬಿಟ್ಟು ಪ್ರವಾಸೋದ್ಯಮಕ್ಕೆ ಅಗತ್ಯವಾದ ಉಳಿದೆಲ್ಲ ಪ್ರಾಕೃತಿಕ ಸಂಪತ್ತು ಇದೆ. ಆದರೆ ಉದ್ಯಮ ಆರಂಭಿಸುವವರ ಕೊರತೆ ಇದೆ. ಪೂರಕ ಚಟುವಟಿಕೆಗಳು ಸಾಕಷ್ಟಿಲ್ಲ. ಕುಂದಾಪುರದಲ್ಲಿ ಐದು ನದಿಗಳು ಸೇರಿ ಆಗುವ ಪಂಚಾಗಂಗಾವಳಿ ನದಿ ಮತ್ತು ಅವುಗಳ ದಂಡೆಗಳು ಪ್ರವಾಸೋದ್ಯಮದ ಅಗಾಧ ಸಾಧ್ಯತೆಗಳಿಂದ ಕೂಡಿದ ಪ್ರದೇಶ. ಇಲ್ಲಿ ಪ್ರವಾಸೋದ್ಯಮ ನಡೆಸಲು ಮುಂದಾಗುವವರಿಗೆ ಇಲಾಖೆ ಸಾಧ್ಯವಿರುವ ಎಲ್ಲ ಬೆಂಬಲ ನೀಡಲು ಸಿದ್ಧ ಎಂದ ಅವರು ಇಲಾಖೆ ಈಗಾಗಲೆ ತ್ರಾಸಿ, ಮರವಂತೆ, ಸೋಮೇಶ್ವರ ಕಡಲ ತೀರಗಳಲ್ಲಿ ಜಲಕ್ರೀಡೆ ಸೇರಿದಂತೆ ಕೆಲವು ಸೌಲಭ್ಯಗಳನ್ನು ನೀಡಲು ಯೋಜನೆ ಸಿದ್ಧಪಡಿಸಿದೆ. ಸಾಂಪ್ರದಾಯಿಕ ಆಹಾರೋದ್ಯಮಕ್ಕೆ ಸಹಾಯಧನ ದೊರೆಯುತ್ತದೆ. ಇಲ್ಲಿನ ಸ್ಥಳೀಯರು ಉದ್ಯಮ ನಡೆಸಲು ಮುಂದಾಗುವವರಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದರು.

    ಪ್ರವಾಸೋದ್ಯಮ ಸಂಘಟನೆಯ ಉಪಾಧ್ಯಕ್ಷ ಮರವಂತೆ ನಾಗರಾಜ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಜಿ. ಪುತ್ರನ್, ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ತಾಪಂ. ಸದಸ್ಯ ರಾಜು ದೇವಾಡಿಗ, ಕೊಲ್ಲೂರು ಧರ್ಮಪೀಠದ ಮೈತ್ರಿ ಸಮಾಖ್ಯಾತ: ಮಹಸ್ಥಿತ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕುಂದಾಪುರ ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ನಂದನ್ ಪಿ., ಪೂರ್ಣಿಮಾ ವಾಸುದೇವ ದೇವಾಡಿಗ ಇದ್ದರು.

    Click here

    Click here

    Click here

    Click Here

    Call us

    Call us

    ಟಿ. ವಾಸುದೇವ ದೇವಾಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಶವಂತ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    eighteen + 15 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.