ಕುಂದಾಪುರ: ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲಾಡಿ ಕ್ರಾಸ್ ಬಳಿ ಖಾಸಗಿ ಬಸ್ವೊಂದು ನಿಯಂತ್ರಣ ತಪ್ಪಿ ರಸ್ತೆಯ ಬಲ ಭಾಗಕ್ಕೆ ತಿರುಗಿ ಹಳ್ಳಕ್ಕಿಳಿದು ನಿಂತ ಘಟನೆ ನಡೆದಿದೆ.
ಕೊಲ್ಲೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಕುಂದಾಪುರಕ್ಕೆ ಬರುತ್ತಿದ್ದು, ಜಾಲಾಡಿ ಕ್ರಾಸ್ನಲ್ಲಿ ಹೆದ್ದಾರಿಯಲ್ಲಿ ವಾಹನವೊಂದು ಹಟಾತ್ನೆ ತಿರುಗಿದ್ದರಿಂದ ಅಪಘಾತವಾಗುವುದನ್ನು ತಪ್ಪಿಸಲು ಬಸ್ಸಿಗೆ ಬ್ರೇಕ್ ಹಾಕಿದ್ದರಿಂದ ಬಸ್ಸು ನಿಯಂತ್ರಣ ತಪ್ಪಿ ಸೀದಾ ರಸ್ತೆಯ ಬಲ ಭಾಗಕ್ಕೆ ತಿರುಗಿ ನಿಂತಿದೆ. ಈ ಸಮಯದಲ್ಲಿ ಮಳೆ ಸುರಿಯುತ್ತಿತ್ತು. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.