Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ಸಂಸ್ಥೆಗಳು ಗ್ರಾಹಕ ಸ್ನೇಹಿಯಾಗಿ ಬೆಳೆದಿವೆ: ಎಸ್. ಜನಾರ್ದನ ಮರವಂತೆ
    ಊರ್ಮನೆ ಸಮಾಚಾರ

    ಸಹಕಾರಿ ಸಂಸ್ಥೆಗಳು ಗ್ರಾಹಕ ಸ್ನೇಹಿಯಾಗಿ ಬೆಳೆದಿವೆ: ಎಸ್. ಜನಾರ್ದನ ಮರವಂತೆ

    Updated:26/02/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಹಕಾರಿ ಸಂಸ್ಥೆಗಳು ತನ್ನ ಸದಸ್ಯರಿಗೆ ಕ್ಲಪ್ತ ಸಮಯದಲ್ಲಿ ಸಾಲ ಸೌಲಭ್ಯ, ಠೇವಣಿಗೆ ಉತ್ತಮ ಬಡ್ಡಿದರ ಹಾಗೂ ಇನ್ನಿತರ ಸೇವೆಗಳನ್ನು ಸಸೂತ್ರವಾಗಿ ನೀಡುತ್ತಿರುವುದರಿಂದ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಹಕ ಸ್ನೇಹಿಯಾಗಿ ಮಾರ್ಪಟ್ಟಿವೆ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಇದರ ನಾವುಂದ ಶಾಖೆ ಒಂದು ವರ್ಷ ಪೂರೈಸಿದ ಅಂಗವಾಗಿ ಶಾಖೆಯ ಆವರಣದಲ್ಲಿ ಆಯೋಜಿಸಲಾದ ಗ್ರಾಹಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವಂತೆ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಹೆಚ್ಚು ತ್ರಾಸ ಪಡದೇ, ಸರಕಾರಿಗಳ ಸದಸ್ಯರು ಸರಳವಾಗಿ ಸಾಲ ಪಡೆಯುತ್ತಿದ್ದಾರೆ. ಸಹಕಾರಿಗಳ ಅಧ್ಯಕ್ಷ ಹಾಗೂ ನಿರ್ದೇಶಕರುಗಳೂ ಕೂಡ ಸ್ಥಳೀಯರೇ ಆಗುವುದರಿಂದಾಗಿ ಗ್ರಾಹಕರ ಮನೋಧರ್ಮ ಸುಲಭವಾಗಿ ಸಂಸ್ಥೆಗೆ ತಿಳಿಯುವುದಲ್ಲದೇ ಅವರೊಂದಿಗೆ ಉತ್ತಮವಾಗಿ ವ್ಯವಹರಿಸಲು ಸಾಧ್ಯವಾಗುತ್ತಿದೆ ಎಂದವರು ವಿಶ್ಲೇಷಿಸಿದರು.

    ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ಥಳೀಯರ ಸಹಕಾರ ಹಾಗೂ ಸಂಸ್ಥೆಯೊಂದಿಗಿನ ಒಡನಾಟದಿಂದ ಒಂದು ವರ್ಷದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಸಂಘದ ಸದಸ್ಯರು ಕೂಡ ಸಕ್ರಿಯವಾಗಿ ಕೈಜೊಡಿಸಿದರೆ ಸಂಸ್ಥೆಯ ಏಳಿಗೆ ಕಷ್ಟಸಾಧ್ಯವಲ್ಲ ಎಂದರು.

    Click here

    Click here

    Click here

    Call us

    Call us

    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಜಗದೀಶ್ ಅವಭೃತ್, ಸಾಗರ್ ಕ್ರೆಡಿಟ್ ಕೋ ಆಪರೇಟಿವ್‌ನ ನಿರ್ದೇಶಕ ಪುಟ್ಟಯ್ಯ ಪೂಜಾರಿ, ನಾವುಂದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಉದ್ಯಮಿ ತೌಫಿಕ್ ಸಾಹೇಬ್, ಆಂತರಿಕ ಲೆಕ್ಕ ಪರಿಶೋಧಕರ ಸೀತಾರಾಮ ಮಡಿವಾಳ, ಸಹಕಾರಿಯ ನಿರ್ದೇಶಕರುಗಳಾದ ಮಂಜು ಪೂಜಾರಿ, ರಾಮಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

    ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಸ್ವಾಗತಿಸಿ, ನಾವುಂದ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಪೂಜಾರಿ ವಂದಿಸಿದರು. ನಿರ್ದೇಶಕ ಶಿವರಾಮ ಪೂಜಾರಿ ಯಡ್ತರೆ ಸಹಕರಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d