Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಎಸ್ಪಿಯಿಂದ ಅಹವಾಲು ಸ್ವೀಕಾರ
    ಉಡುಪಿ ಜಿಲ್ಲೆ

    ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಎಸ್ಪಿಯಿಂದ ಅಹವಾಲು ಸ್ವೀಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ರತ್ನಾ ಕೊಠಾರಿ ಪ್ರಕರಣ, ಮಹಿಳೆಯ ಸುರಕ್ಷೆ, ಊರಿನ ಸಮಸ್ಯೆಗಳ ಬಗ್ಗೆ ಚರ್ಚೆ

    Click Here

    Call us

    Click Here

    ಬೈಂದೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಜನಸಂಪರ್ಕ ಸಭೆಯು ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ಬುಧವಾರ ಜರುಗಿತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಣ್ಣಾಮಲೈ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಶಿರೂರು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರತ್ನಾ ಕೊಠಾರಿ ಅಸಹಜ ಸಾವಿನ ಪ್ರಕರಣದ ಮರಣೋತ್ತರ ಪರೀಕ್ಷೆಯ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದೆ, ಆದರೆ ವರದಿಯಲ್ಲಿ ಅತ್ಯಾಚಾರ, ಕೊಲೆ ಹಾಗೂ ವಿಷ ಜಂತುಗಳ ಕಡಿತದಿಂದ ಸಾವನ್ನಪ್ಪಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಇದೊಂದು ಸಹಜ ಸಾವು ಎಂದು ದಾಖಲಾಗಿದೆ. ಆದರೆ ಇಲಾಖೆ ಈ ಪ್ರಕರಣದ ಬಗ್ಗೆ ಸಂಶಯಾಸ್ಪದವಾಗಿ ಕಂಡು ಬಂದ 77 ಜನರನ್ನು ವಿಚಾರಣೆ ನಡೆಸಿದ್ದು, ಕೆಲವರು ಪೊಲೀಸರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೂ ಈ ಪ್ರಕರಣವನ್ನು ಮುಚ್ಚಿ ಹಾಕಿಲ್ಲ, ಇನ್ನು ಒಂದು ತಿಂಗಳು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದ ಅವರು ರತ್ನಾ ಕೊಠಾರಿ ಬಡ ಕುಟುಬಂದ ವಿದ್ಯಾರ್ಥಿಯಾಗಿದ್ದು, ಆಕೆಯ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಇಲ್ಲಿನ ಶಾಸಕ ಗೋಪಾಲ ಪೂಜಾರಿ ಅವರು ಅಧಿವೇಶನದಲ್ಲಿ ಆಗ್ರಹಿಸಿದ ಹಿನ್ನೆಲೆಯಲ್ಲಿ ಸರ್ಕಾರ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ವರದಿ ಕಳುಹಿಸಿಕೊಡುವಂತೆ ಸರ್ಕಾರ ನಮಗೆ ಆದೇಶಿಸಿದೆ. ಆದರೆ ಆಕೆಯ ಪ್ರಕರಣದ ಬಗ್ಗೆ ಇದುವರೆಗೂ ಚಾರ್ಚ್‌ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಇದುವರೆಗೂ ವರದಿ ಕಳುಹಿಸಲು ಸಾಧ್ಯವಾಗಿಲ್ಲ, ಇನ್ನೂ ಒಂದು ತಿಂಗಳು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಕಳುಹಿಸಲಾಗುವುದು ಎಂದರು.
    ಶಿರೂರಿನಂತಹ ಗ್ರಾಮೀಣ ಭಾಗದ ಜನರು ತಮ್ಮ ಚಿಕ್ಕ ಪ್ರಕರಣ ಹೊತ್ತುಕೊಂಡು ಜಿಲ್ಲಾ ಪೋಲೀಸ್ ವರಿಷ್ಠಾಕಾರಿ ಕಛೇರಿ ಅಲೆಯುತ್ತಾರೆ, ಇದಕ್ಕಾಗಿ ಅವರು ಕನಿಷ್ಠ 500ರೂ. ಆದರೂ ವ್ಯಯಿಸಬೇಕಾಗುತ್ತದೆ, ಇದನ್ನು ತಪ್ಪಿಸಲು ಜಿಲ್ಲಾ ಪೋಲೀಸ್ ಇಲಾಖೆ ಗ್ರಾಮೀಣ ಭಾಗದಲ್ಲಿ ಜನಸಂಪರ್ಕ ಸಭೆಯನ್ನು ನಡೆಸಿ, ಜನತೆಯ ಸಮಸ್ಯೆ ಹೇಳಿಕೊಳ್ಳಲು ಸೂಕ್ತ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದರು.
    ಮಹಿಳೆಯರಿಗೆ ರಾತ್ರಿ ಸಮಯದಲ್ಲಿ ಯಾವುದಾದರೂ ಅಹಿತರ ಘಟನೆಯಿಂದ ತೊಂದರೆಯಾದರೂ ಅವರು ಉಡುಪಿ ಕಂಟ್ರೋಲ್ ರೂಮ್‌ನ 100 ಸಂಖ್ಯೆಗೆ ಉಚಿತ ಕರೆ ಮಾಡಿ, ಮಾಹಿತಿ ನೀಡಬಹುದು ಎಂದ ಅವರು, ಅಲ್ಲಿಯೇ ಮಹಿಳೆಯೊಬ್ಬರಿಂದ ಕಂಟ್ರೋಲ್ ರೂಮಿನ 100 ಸಂಖ್ಯೆ ಕರೆ ಮಾಡಿಸಿದರು. ಅಲ್ಲದೇ ತಮ್ಮ ಮೊಬೈಲ್‌ನಲ್ಲಿ ಸುರಕ್ಷಾ ಆಫ್ ಡೌನ್‌ಲೋಡ್ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದರು.
    ರಾಷ್ರೀಯ ಹೆದ್ದಾರಿ ಮೇಲೆಯೇ ಬಸ್ ನಿಲುಗಡೆ, ಕಿಡಿಗೇಡಿಗಳು ಸಂಜೆಯ ಸಮಯದಲ್ಲಿ ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕಟ್ಟಡ ಮೇಲೆ ಕಲ್ಲು ಏಸೆದು ಹೆಂಚುಗಳನ್ನು ಹೊಡೆಯುವುದು, ಅತಿವೇಗವಾಗಿ ಬೈಕ್ ಸವಾರಿ, ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿರುವುದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ, ಶಿರೂರಿನಲ್ಲಿ ಆಟೋಗಳ ಸಂಖ್ಯೆ ಹೆಚ್ಚಳ, ಮಟ್ಕಾ, ಅಕ್ರಮ ಸಾರಾಯಿ, ಕೋಳಿ ಅಂಕ, ಮೀಟರ್ ಬಡ್ಡಿ ವ್ಯವಹಾರ, ಹೆಚ್ಚಾಗಿ ಅಪಘಾತ ಸಂಭವಿಸುವ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸುವಂತೆ, ಭೂ ಮಾಫಿಯಾ, ಮೊದಲಾದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಎಸ್‌ಪಿಯವರ ಮುಂದೆ ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಮುಂದಿನ ದಿನಗಳಲ್ಲಿ ಪೋಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ, ಈ ಬಗ್ಗೆ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು, ಈಗ ಬ್ರಿಟಿಷರ ಕಾಲವಲ್ಲ, ಸಾರ್ವಜನಿಕರು ಯಾವುದೇ ಹಿಂಜರಿಕೆ ಠಾಣೆಗೆ ಬಂದು ಪ್ರಕರಣ ದಾಖಲಿಸಬಹುದು ಎಂದರು.
    ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಎಂ., ಉಪನಿರೀಕ್ಷಕ ಸಂತೋಷ್ ಕಾಯ್ಕಿಣಿ, ಶಿರೂರು ಗ್ರಾ.ಪಂ. ಸದಸ್ಯ ರಾಮ ಮೇಸ್ತ ಉಪಸ್ಥಿತರಿದ್ದರು. ಪತ್ರಕರ್ತ ಅರುಣಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d