ಜೂ.13: ಬಿಜೆಪಿ ವಿಜೇತ ಸದಸ್ಯರ ಅಭಿನಂದನಾ ಸಭೆ

Call us

Call us

Call us

ಕುಂದಾಪುರ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ ಬೈಂದೂರು ಕ್ಷೇತ್ರ ವ್ಯಾಪ್ತಿಯ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೂ.13 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಅಭಿನಂದನೆ ಮಾಡಲಾಗುವುದು ಎಂದು ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ಎಂ ಸುಕುಮಾರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Click Here

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ಎಸ್ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ್ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply