ಗೋವಿಂದ ಬಾಬು ಪೂಜಾರಿ ಅವರಿಗೆ ಆಹಾರೋದ್ಯಮ ಸಾಧನಾಶ್ರೀ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆಹಾರ ಮತ್ತು ಅತಿಥಿ ಸತ್ಕಾರ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡುತ್ತಿರುವ ಶೆಫ್‌ಟಾಕ್ ಸಂಸ್ಥೆಯ ಆಡಳಿತ ನಿರ್ದೆಶಕ ಗೋವಿಂದ ಬಾಬು ಪೂಜಾರಿ ಅವರಿಗೆ ’ಆಹಾರೋದ್ಯಮ ಸಾಧನಾಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

Call us

Click Here

ಮಂಗಳೂರು ಟೌನ್ ಹಾಲ್‌ನಲ್ಲಿ ಸೋಮವಾರ ಜರುಗಿದ ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಅಸೋಸಿಯೇಶನ್ ರಿ. ಇದರ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿ ಯೆನೆಪಪೋಯ ಅಬ್ದುಲ್ ಕುಂಞ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಎ.ಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಎ. ಜನಾರ್ದನ ಶೆಟ್ಟಿ, ಮುಂಬೈ ಕೆಇವೈಎಸ್ ಗ್ರೂಪ್ ಆಫ್ ಹೋಟೆಲ್ಸ್‌ನ ಹರೀಶ್ ಅಮೀನ್, ಮಂಗಳೂರು ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೋ, ಚಲನಚಿತ್ರ ನಿರ್ಮಾಪಕ, ನಟ ಡಾ. ರಾಜಶೇಖರ್ ಕೋಟ್ಯಾನ್, ದ.ಕ ಕ್ಯಾಟರಿಂಗ್ ಮಾಲಕರ ಎಸೋಸಿಯೇಶನ್ ರಿ. ಮಂಗಳೂರು ಇದರ ಗೌರವಾಧ್ಯಕ್ಷ ಸುಧಾಕರ ಕಾಮತ್, ವೆವಲ್ ಲಸ್ರಾದೋ, ಮೊಹಮದ ಇಕ್ಚಾಲ್, ಅಧ್ಯಕ್ಷ ಸತೀಶ್ ಬೋಳಾರ್, ಉಪಾಧ್ಯಕ್ಷ ರಾಜೇಶ್ ಕೆ., ಗೋಕುಲ್ ಕದ್ರಿ, ಪ್ರಧಾನ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ಗುರುಪುರ, ಸಂಘಟನಾ ಕಾಯದರ್ಶಿ ರಾಜಗೋಪಾಲ ರೈ, ವಿದ್ಯಾಧರ ವಿ, ನಾಗ್ವೇಕರ್, ಖಜಾಂಚಿ ಯಶವಂತ್ ಪೂಜಾರಿ ಮೊದಲಾದವರು ಇದ್ದರು.

ಗೋವಿಂದ ಬಾಬು ಪೂಜಾರಿ ಅವರು 2008ರಲ್ಲಿ ಮುಂಬೈಯಲ್ಲಿ ಶೆಫ್‌ಟಾಕ್ ಕೇಟರಿಂಗ್ ಸರ್ವಿಸಸ್ ಆರಂಭಿಸಿದ್ದರು. 2015ರಲ್ಲಿ ಅದನ್ನು ಶೆಫ್‌ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಪೈವೆಟ್ ಲಿಮಿಟೆಡ್ ಆಗಿ ಪರಿವರ್ತಿಸಿದರು. ಈಗ ಪೂನಾ, ಹೈದರಾಬಾದ್, ಬೆಂಗಳೂರು, ಛತ್ತಿಸ್‌ಗಡ ಹಾಗೂ ತಿರುಪತಿಯಲ್ಲಿ ಇದೇ ಉದ್ಯಮ ವಿಸ್ತರಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳಲ್ಲಿ ಕರ್ನಾಟಕ ಸರಕಾರದ ಹಸಿವು ಮುಕ್ತ ಯೋಜನೆ ಜಾರಿಗೊಳಿಸಿ ಇಂದಿರಾ ಕ್ಯಾಂಟಿನ್ ಆರಂಭಿಸಿದಾಗ ಶೆಫ್‌ಟಾಕ್ ಅದರ ನಿರ್ವಹಣೆ ಹೊಣೆ ಹೊತ್ತು ಸಾವಿರಾರು ಮಂದಿಗೆ ಆಹಾರ ಒದಗಿಸುತ್ತಿದೆ.

ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ತಮ್ಮ ಉದ್ಯಮದ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವಾಗುತ್ತಿದ್ದಾರೆ.

ಅವರ ಕಂಪೆನಿಗೆ ಇತ್ತಿಚಿಗೆ ಮುಂಬೈನ ಬಿಲ್ಲವ ಚೆಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಉದ್ಯಮ ಸಮಾವೇಶಲ್ಲಿ ’ಉದ್ಯಮ ಶ್ರೇಷ್ಠತಾ ಪ್ರಶಸ್ತಿ’, 2016ನೇ ಸಾಲಿನಲ್ಲಿ ಆಲ್ ಇಂಡಿಯ ಅಚೀವರ್ಸ್ ಫೌಂಡೇಶನ್‌ನಿಂದ ಶೆಫ್‌ಟಾಕ್ ಹಾಗೂ ಆಡಳಿತ ನಿರ್ದೇಶಕ ಗೋವಿಂದ ಪೂಜಾರಿ ಅವರಿಗೆ ’ನಾಯಕತ್ವ ಹಾಗೂ ಕ್ಷಿಪ್ರ ಬೆಳವಣಿಗೆಯ ಕಂಪೆನಿ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ದೊರೆತಿವೆ.

Click here

Click here

Click here

Click Here

Call us

Call us

Leave a Reply