Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಎ.1ರಿಂದ ಸಾಧನ ಕಿಶೋರ ವಿಕಾಸ ಶಿಬಿರ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಎ.1ರಿಂದ ಸಾಧನ ಕಿಶೋರ ವಿಕಾಸ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಸಾಧನ ಕಲಾಸಂಗಮ ಸಂಸ್ಥೆಯು ಕಲಾಸಕ್ತರ ಆಸಕ್ತಿಗಳಿಗನುಗುಣವಾಗಿ ಹೊಸತನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಹೊಸ ವಿಷಯಗಳೊಂದಿಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಏಪ್ರಿಲ್ 1 ರಿಂದ ಮೇ4 ರವರೆಗೆ ನಾಲ್ಕು ಹಂತಗಳಲ್ಲಿ ವಿಶೇಷ ಸಾಧನ ಕಿಶೋರ ವಿಕಾಸ ಶಿಬಿರಗಳನ್ನು ಹಮ್ಮಿಕೊಂಡಿದೆ.

    Click Here

    Call us

    Click Here

    ಮೊದಲ ಬಾರಿಗೆ ‘ರಂಗಾಂತರಂಗ’ ನಾಟಕ ತರಬೇತಿ ಶಿಬಿರವು ಹಮ್ಮಿಕೊಂಡಿದ್ದು, ಎಪ್ರಿಲ್ 1ರಿಂದ ಎಪ್ರಿಲ್ 9ರವರೆಗೆ 9 ದಿನಗಳ ಕಾಲ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 3ರ ವರೆಗೆ ಶಿಬಿರ ನಡೆಯಲಿದೆ. 9 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಹಾಡು, ಹರಟೆ, ರಂಗದ ಒಳ ಮತ್ತು ಹೊರಗಣ ಮಾಹಿತಿ, ಸಂಭಾಷಣೆ, ನಿರೂಪಣೆಗಳ ಜೊತೆಗೆ ನಾಟಕ ಸಿದ್ಧಪಡಿಸಿ ಪ್ರದರ್ಶನ ನೀಡಲಾಗುತ್ತದೆ. ಗರಿಷ್ಟ 30 ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ರಂಗ ತಜ್ಞ ಸಂತೋಷ್ ಕುಮಾರ್ ನಾಯಕ್ ಪಟ್ಲ ಹಾಗೂ ಸಂಯೋಜಕಿಯಾಗಿ ಮಧುಸ್ಮಿತಾ ಜಯಶೇಖರ್ ಭಾಗವಹಿಸಲಿದ್ದಾರೆ.

    ಎಪ್ರಿಲ್ 12ರಿಂದ 23ರ ವರೆಗೆ ‘ವ್ಯಕ್ತಿತ್ವ ವಿಕಸನ, ಆರ್ಟ್ ಮತ್ತು ಕ್ರಾಪ್ಟ್ ಶಿಬಿರ’ ನಡೆಯಲಿದ್ದು, ಬೆಳಿಗ್ಗೆ 9:30ರಿಂದ 12:30ರ ವರೆಗೆ ಭಾನುವಾರ ಹೊರತುಪಡಿಸಿ 10 ದಿನಗಳ ಕಾಲ ನಡೆಯಲಿದೆ. 5ವರ್ಷದಿಂದ 15 ವರ್ಷದವರೆಗಿನ ವಯೋಮಿತಿಯನ್ನು ನಿಗಧಿಪಡಿಸಲಾಗಿದ್ದು, ಗರಿಷ್ಟ 40 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ದೈನಂದಿನ ಶ್ಲೋಕಗಳು, ಹಾಡು, ಹರಟೆ, ವಿವಿಧ ಚಿತ್ರಕಲೆಗಳ ಪ್ರಾತ್ಯಕ್ಷಿಕೆ, ವರ್ಲಿ, ಜಲವರ್ಣ, ಪೆನ್ಸಿಲ್, ಕಾರ್ಟೂನ್, ವಿವಿಧ ಶೈಲಿಯ ಕ್ರಾಪ್ಟ್, ಟೀ ಶರ್ಟ್ ಪೈಂಟಿಂಗ್, ಬಲೂನ್ ಆರ್ಟ್, ಟ್ಯಾಟೂ, ಮೆಹಂದಿ, ಮುಖವರ್ಣಿಕೆ, ಪ್ರತಿಭಾನ್ವೇಷಣೆ, ಕಥಾ ರಚನೆ ಮೊದಲಾದ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಈ ಶಿಬಿರದಲ್ಲಿ ಅವಕಾಶವಿದ್ದು, ಕು. ಅವ್ಯಕ್ತ ಹಾಗೂ ಕು. ಮೇಘನಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

    ಎಪ್ರಿಲ್ 15ರಿಂದ ಮೇ ೪ರವರೆಗೆ ಏಳು ವರ್ಷದಿಂದ ಮೇಲ್ಪಟ್ಟ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗಾಗಿ ಯೋಗಾಸನ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪ್ರತೀ ದಿನವೂ ಬೆಳಿಗ್ಗೆ 6:30ರಿಂದ 8:30ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ 20 ಶಿಬಿರಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕು. ರಾಧಿಕಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುತ್ತಾರೆ.

    ಎಪ್ರಿಲ್ 29ರಿಂದ ಮೇ 4ರವರೆಗೆ ಸಂಜೆ 4ರಿಂದ 6:30ರವರೆಗೆ ಎಲ್ಲಾ ವಯೋಮಾನದವರಿಗೆ ಅನುಕೂಲವಾಗುವಂತೆ ಪಾಶ್ಚಾತ್ಯ ಸಂಗೀತ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಅನಜ್ ಹಾಗೂ ಸಂಗಡಿಗರು ಭಾಗವಹಿಸಲಿದ್ದು. ಗಿಟಾರ್, ಪಿಯಾನೋ, ಪಾಶ್ಚಾತ್ಯ ಹಾಡುಗಾರಿಕೆ, ಪ್ರಾತ್ಯಕ್ಷಿಕೆ ಹಾಗೂ ಪ್ರಾಥಮಿಕ ತರಬೇತಿ ನೀಡಲಾಗುತ್ತದೆ. ಶಿಬಿರಗಳಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಸಾಧನ ಕಲಾ ಸಂಗಮ (ರಿ) ಕುಂದಾಪುರ, ಸಾಧನ ಕಲಾ ಮತ್ತು ಸಾಂಸ್ಕೃತಿಕ ಕೇಂದ್ರ, ೩ನೇ ಮಹಡಿ, ಶ್ರೀ ಕೃಷ್ಣ ಭವನ, ಕಾರ್ಪೋರೇಷನ್ ಬ್ಯಾಂಕಿನ ಮೇಲಿನ ಮಹಡಿ, ಪುರಸಭೆ ರಸ್ತೆ, ಕುಂದಾಪುರ 576201 ವಿಳಾಸವನ್ನು ಸಂಪರ್ಕಿಸಬಹುದು. ಅಥವಾ 08254234950 ಅಥವಾ 9448121950 ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋದಾಯಿಸಿಕೊಳ್ಳಬಹುದು ಎಂದು ಸಾಧನ ಕಲಾ ಸಂಗಮದ ಕಾರ್ಯನಿರ್ವಾಹಕ ವಿಶ್ವಸ್ಥ ನಾರಾಯಣ ಐತಾಳ್ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.