Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಣ ನೀಡದ್ದಕ್ಕೆ ವೃದ್ಧ ಅತ್ತೆಯನ್ನೇ ಕೊಂದ ಅಳಿಯ
    ಅಪಘಾತ-ಅಪರಾಧ ಸುದ್ದಿ

    ಹಣ ನೀಡದ್ದಕ್ಕೆ ವೃದ್ಧ ಅತ್ತೆಯನ್ನೇ ಕೊಂದ ಅಳಿಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತನಗೆ ಹಣ ನೀಡಲಿಲ್ಲವೆಂದು ಸಿಟ್ಟುಕೊಂಡ ಅಳಿಯ ವೃದ್ಧ ಅತ್ತೆಯನ್ನೇ ಹೊಡೆದು ಕೊಂದ ಘಟನೆ ತಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಪ್ಪಿನಕುದ್ರುವಿನಲ್ಲಿ ನಡೆದಿದೆ.

    Click Here

    Call us

    Click Here

    ಉಪ್ಪಿನಕುದ್ರು ರಾಮಮಂದಿರದ ಬಳಿಯ ಅಂಗಡಿಮನೆ ದಿ| ರಾಮಕೃಷ್ಣ ಶೇರೆಗಾರ್‌ ಅವರ ಪತ್ನಿ ಜಾನಕಿ(80) ಮೃತ ಮಹಿಳೆ. ಆಕೆಯ ಪುತ್ರಿಯ ಗಂಡ ಬೈಂದೂರಿನ ಮಯ್ಯಾಡಿ ನಿವಾಸಿ ಜನಾರ್ದನ ಶೇರೆಗಾರ್‌ (45) ಕೊಲೆ ಮಾಡಿದ ಆರೋಪಿ.

    ಜನಾರ್ದನ ಶೇರೆಗಾರ್‌ ಬೆಂಗಳೂರಿನಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದ. ಮೂರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಪತ್ನಿಯ ಮೃತಪಟ್ಟ ಬಳಿಕ ಪುತ್ರನೊಂದಿಗೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದ. ಆ ನಂತರ ಆತ ಪ‌ತ್ನಿಯ ಮನೆಗೆ ಬಂದಿರಲಿಲ್ಲ.

    ಒಂದು ವಾರದ ಹಿಂದೆ ಬೆಂಗಳೂರಿನಿಂದ ಮಯ್ಯಾಡಿಗೆ ಬಂದಿದ್ದ ಜನಾರ್ದನ ತನ್ನ ಸೋದರಳಿಯನ ಮದುವೆಯ ಕಾರಣವೊಡ್ಡಿ ಉಪ್ಪಿನಕುದ್ರುವಿನಲ್ಲಿಯೇ ನಿಂತಿದ್ದ ಎನ್ನಲಾಗಿದೆ. ಕಳೆದ ಒಂದು ವಾರದಿಂದ ಅತ್ತೆಯನ್ನು ಅಳಿಯ ಜನಾರ್ದನ ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನಲಾಗಿದ್ದು, ಆದರೆ ಅತ್ತೆ ಹಣ ನೀಡಿರಲಿಲ್ಲ. ಮಂಗಳವಾರ ರಾತ್ರಿ ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿದ್ದು ಜಗಳ ಮುಂದುವರಿದಾಗ ಅತ್ತೆಯ ಊರುಗೋಲಿನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಅವರು ಅಲ್ಲಿಯೇ ಬಿದ್ದು ಸಾವನ್ನಪ್ಪಿದ್ದಾರೆ.

    ಈ ಪ್ರದೇಶದಲ್ಲಿ ಮನೆಗಳು ಬಹಳಷ್ಟು ದೂರವಿದ್ದು, ಜೋರಾಗಿ ಬೊಬ್ಬೆ ಹಾಕುತ್ತಿರುವ ಶಬ್ದ ಕೇಳಿದ ಮಹಿಳೆಯೊಬ್ಬರು ವೃದ್ಧೆಯ ಎರಡನೇ ಮಗ ಗಣೇಶನಿಗೆ ಸುದ್ಧಿ ಮುಟ್ಟಿಸಿದರು. ಆದರೆ ಮಗ ಬರುವಷ್ಟರಲ್ಲಿ ವೃದ್ಧೆ ಮೃತಪಟ್ಟಿದ್ದರು.

    Click here

    Click here

    Click here

    Call us

    Call us

    ಬುಧವಾರ ಗಣೇಶ್‌ ಅವರ ಅಣ್ಣನ ಮಗಳ ವಿವಾಹ ಉಪ್ಪಿನಕುದ್ರು ರಾಮಮಂದಿರದ ಸಭಾಭವನದಲ್ಲಿ ನಡೆಯ ಬೇಕಾಗಿದ್ದು, ಈ ಕೊಲೆಯಿಂದಾಗಿ ಮದುವೆಯ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು.

    ಅತ್ತೆಯ ತಲೆಗೆ ಹೊಡೆದು ಆಕೆಯನ್ನು ಕೊಲೆ ಮಾಡಿದ ಆರೋಪಿ ಜನಾರ್ದನ ತನಗೆ ಏನೂ ತಿಳಿಯದವನಂತೆ ಮನೆಯೊಳಗೆ ಹೋಗಿ ನಿದ್ದೆ ಮಾಡಿದ್ದಾನೆ. ಸ್ಥಳಕ್ಕಾಗಮಿಸಿದ ಕುಂದಾಪುರ ವೃತ್ತ ನಿರೀಕ್ಷಕ ಪಿ.ಎಂ.ದಿವಾಕರ, ಡಿವೈಎಸ್‌ಪಿ ಎಂ. ಮಂಜುನಾಥ ಶೆಟ್ಟಿ, ಉಪನಿರೀಕ್ಷಕ ದೇವೇಂದ್ರ ಹಾಗೂ ಸಿಬಂದಿ ಮನೆಯ ಬಾಗಿಲನ್ನು ಒಡೆಯಿಸಿ ಆರೋಪಿಯನ್ನು ಬಂಧಿಧಿಸಿದ್ದಾರೆ.

    ಬುಧವಾರ ಸಂಜೆ ಭೇಟಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಧಿಕಾರಿ ಅಣ್ಣಾಮಲೈ ಸ್ಥಳ ಪರಿಶೀಲನೆ ನಡೆಸಿ ಮೃತರ ಸಂಬಂಧಿಧಿಕರೊಂದಿಗೆ ಮಾತುಕತೆ ನಡೆಸಿದರು.

    ಈ ವೇಳೆ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಅವರು, ಬಡ ಮಹಿಳೆಯ ಕುಟುಂಬಿಕರು ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್‌ ಕಾರ್ಡ್‌ನ್ನು ಹೊಂದಿದ್ದರೆ ಸರಕಾರದಿಂದ ದೊರಕುವ ಪರಿಹಾರ ದೊರೆಕಿಸಲು ಪೊಲೀಸ್‌ ಇಲಾಖೆಯಿಂದ ಸಹಕಾರ ನೀಡುವ ಕುರಿತು ಹಾಗೂ ಕೊಲೆ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಕುರಿತು ಭರವಸೆ ನೀಡಿದರು. ಇದೆ ಸಂದರ್ಭ ಮೃತರ ಪುತ್ರ ಗಣೇಶ್‌ ಅವರೊಂದಿಗೆ ಮಾತನಾಡಿದ ಅವರು ಕುಟುಂಬದವರು ಅಪೇಕ್ಷಿಸಿದ ದಿನದಂದು ಶವದ ಮರಣೋತ್ತರ ಪರೀಕ್ಷೆ ನಡೆಸಲು ಇಲಾಖೆ ಸಹಕಾರ ನೀಡಲಿದೆ ಎಂದರು.

    ಬಳಿಕ ಕುಂದಾಪುರದ ಪೊಲೀಸ್‌ ಠಾಣೆಗೆ ಭೇಟಿ ನೀಡಿದ ಅವರು ಕೊಲೆ ಆರೋಪಿ ಜನಾರ್ದನ್‌ನ ವಿಚಾರಣೆ ನಡೆಸಿ ಘಟನಾವಳಿಗಳ ಕುರಿತು ಮಾಹಿತಿ ಪಡೆದುಕೊಂಡರು.

    ಕುಂದಾಪುರದ ಸರ್ಕಲ್‌ ಇನ್ಸ್‌ಪೆಕ್ಟರ್‌ ದಿವಾಕರ ಪಿ.ಎಂ. ಹಾಗೂ ಗೃಹ ರಕ್ಷಕದಳದ ಜಿಲ್ಲಾ ಸೆಕೆಂಡ್‌ ಇನ್‌ ಕಮಾಂಡ್‌ ರಾಜೇಶ್‌ ಕೆ.ಸಿ. ಮೊದಲಾದವರು ಇದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d