Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಕ್ತದಾನ ಶಿಬಿರ ಆಯೋಜಿಸಿ ಕೊರತೆಯನ್ನು ನೀಗಿಸಿ: ಎಸ್ಪಿ ಅಣ್ಣಮಲೈ
    ಕುಂದಾಪ್ರದ್ ಸುದ್ಧಿ

    ರಕ್ತದಾನ ಶಿಬಿರ ಆಯೋಜಿಸಿ ಕೊರತೆಯನ್ನು ನೀಗಿಸಿ: ಎಸ್ಪಿ ಅಣ್ಣಮಲೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ವಿವಿಧ ಸಂಘ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರಗಳನ್ನು ಆಗಾಗ್ಗೆ ಆಯೋಜಿಸುವುದರಿಂದ ರಕ್ತದ ಕೊರತೆಯನ್ನು ಸುಲಭವಾಗಿ ನೀಗಿಸಬಹುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕುಂದಾಪುರ, ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್, ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ, ಸರ್ವಧರ್ಮ ಸೌಹಾರ್ದ ಸಮ್ಮೀಲನ ವೇದಿಕೆ, ಉಡುಪಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದರು.

    ವಿವಿಧ ಕಾಲೇಜುಗಳ ಸಹಭಾಗಿತ್ವದೊಂದಿಗೆ ಈ ಶಿಬಿರ ಆಯೋಜನೆಗೊಂಡಿರುವುದು ಶ್ಲಾಘನಾರ್ಹ. ಇಂತಹ ಸಮಾಜ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ನುಡಿದರು.

    ಕುಂದಾಪುರದ ವೈದ್ಯಾಧಿಕಾರಿ ಡಾ. ಉದಯಶಂಕರ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅಥಿತಿಗಳಾಗಿ ಉದ್ಯಮಿ ಜನಾಬ್ ಎಂ. ಎಂ. ಇಬ್ರಾಹಿಂ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಮಣ್ಯ ಶೇರುಗಾರ್, ನ್ಯೂ ಮೆಡಿಕಲ್ ಸೆಂಟರ್ ನ ನಿರ್ದೇಶಕ ಡಾ. ರಂಜನ್ ಆರ್. ಶೆಟ್ಟಿ, ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಕರಾವಳಿ ಸ್ವಯಂಪ್ರೇರಿತ ರಕ್ತದಾನ ಸಂಘ ಗಂಗೊಳ್ಳಿ ಇದರ ಅಧ್ಯಕ್ಷ ದಿವಾಕರ ಎನ್. ಖಾರ್ವಿ, ಜಟ್ಟಿಗೇಶ್ವರ ಯೂತ್ ಕ್ಲಬ್ ಅಧ್ಯಕ್ಷ ನಾಗರಾಜ ಖಾರ್ವಿ, ಸರ್ವಧರ್ಮ ಸೌಹಾರ್ದ ಸಮ್ಮಿಲನ ವೇದಿಕೆ ಗಂಗೊಳ್ಳಿ ಇದರ ಸಂಚಾಲಕ ಕೆ.ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಅತೀ ಹೆಚ್ಚು ರಕ್ತ ದಾನ ಮಾಡಿದ ವಿದ್ಯಾರ್ಥಿಗಳಾದ ಬಿ.ಬಿ.ಹೆಗ್ಡೆ ಕಾಲೇಜಿನ ಕಾರ್ತಿಕ್ ಕಿಣಿ, ಭಂಡಾರ್‌ಕಾರ‍್ಸ್ ಕಾಲೇಜಿನ ಸುಮಂತ್, ಶಾರದಾ ಕಾಲಜು ಬಸ್ರೂರು ಇದರ ಸಚಿನ್ ಶೆಟ್ಟಿ, ಕೋಟೇಶ್ವರ ಸ.ಪ್ರ.ದರ್ಜೆ ಕಾಲೇಜು ನಯನ ಪೂಜಾರಿ, ಶಂಕರನಾರಾಯಣ ಸ.ಪ್ರ.ದ,ಕಾಲೇಜಿನ ಧನುಷ್ ಕುಮಾರ್, ಪತ್ರಿಕಾ ಮತ್ತು ಮಾಧ್ಯಮದ ವರದಿಗಾರರಾದ ಉದಯ ಟಿವಿಯ ಗಣೇಶ್ ಎನ್, ಅಮೀನ್, ವಾರ್ತಾಭಾರತಿ ವರದಿಗಾರ ಮಹಮ್ಮದ್ ಶರೀಫ್, ವಿಜಯವಾಣಿ ಉಡುಪಿಯ ಜನಾರ್ಧನ ಕೊಡವೂರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಉಡುಪಿಯ ಅನಿಲ್ ಕುಮಾರ್ ಎಂ ರಾವ್, ಕಾರ್ಕಳ ಠಾಣೆಯ ಪ್ರೇಂಕುಮಾರ್, ಶಂಕರನಾರಾಯಣ ಎಎಸೈ ಶುಭಕರ, ಎಸ್ಪಿ ಕಚೇರಿಯ ಸಿಪಿಸಿ ಶಿವಾನಂದ, ಸರ್ಕಾರೀ ನೌಕರರಾದ ಬ್ರಹ್ಮಾವರ ಖಜಾನಾಧಿಕಾರಿ ಮಾಧವ ಹೆಗ್ಡೆ, ಕಿರಿಮಂಜೇಶ್ವರ ಪಿಡಿಓ ಚಂದ್ರಕಾಂತ ಬಿ, ಉಡುಪಿ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರ ಅಶೋಕ್, ಸುಬ್ರಹ್ಮಣ್ಯ ಶೇರುಗಾರ್, ವಕೀಲರಾದ ಶ್ಯಾಂ ಸುಂದರ ನಾಯರಿ ಕೋಟ, ರಾಘವೇಂದ್ರ ಚರಣ ನಾವಡ, ಸಾರ್ವಜನಿಕರಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ರಾಜೇಶ್ ಪೂಜಾರಿ ಕುಂದಾಪುರ, ರಂಜನ್ ಕುಮಾರ್ ಕಟಪಾಡಿ, ಗುರುಚರಣ್ ಖಾರ್ವಿ ಗಂಗೊಳ್ಳಿ, ರೇಣುಕಾ ರಾಮ ಪೂಜಾರಿ ಕೊಡ್ಪಾಡಿ, ರಾಘವೇಂದ್ರ ಖಾರ್ವಿ ಗಂಗೊಳ್ಳಿ ಇವರನ್ನು ಸನ್ಮಾನಿಸಲಾಯಿತು.

    ಸಮೂಹ ಸಂಪನ್ಮೂಲ ವ್ಯಕ್ತಿ ಸುಮನಾ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ರಾಜ್ಯ ಸರ್ಕಾರೀ ನೌಕರರ ಸಂಘದ ಕುಂದಾಪುರ ತಾಲೂಕು ಅಧ್ಯಕ್ಷ ದಿನಕರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d