Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಮುವಾದಿ ಪಕ್ಷವನ್ನು ಮಣಿಸಲು ಜಾತ್ಯಾತೀತ ಪಕ್ಷಗಳ ಮೈತ್ರಿ
    ಊರ್ಮನೆ ಸಮಾಚಾರ

    ಕೋಮುವಾದಿ ಪಕ್ಷವನ್ನು ಮಣಿಸಲು ಜಾತ್ಯಾತೀತ ಪಕ್ಷಗಳ ಮೈತ್ರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕೋಮುವಾದಿ ಪಕ್ಷಗಳನ್ನು ದೂರವಿಡಬೇಕು ನೆಲೆಯಲ್ಲಿ ಜಾತ್ಯಾತೀತ ತತ್ವದಡಿ ಇರುವ ಎಲ್ಲರೂ ಒಂದಾಗಬೇಕು ಎಂಬ ಕಾರಣಕ್ಕೆ ಕರ್ನಾಟಕದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗಿದೆ. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಇರಬೇಕು ಎಂಬ ಕಾರಣಕ್ಕೆ ದೇಶದ ಎಲ್ಲಾ ಭಾಗಗಳಲ್ಲಿಯೂ ಜಾತ್ಯಾತೀತರು ಒಂದಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಮೀನುಗಾರಿಕಾ ಸಚಿವ ವೆಂಕಟಗಿರಿ ನಾಡಗೌಡ ಹೇಳಿದರು.

    Click Here

    Call us

    Click Here

    ಅವರು ಗುರುವಾರ ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿ ಕರಾವಳಿಯಲ್ಲಿ ಮೀನುಗಾರರ ಅಭ್ಯುದಯಕ್ಕೆ ರಾಜ್ಯ ಸರಕಾರ ವಿವಿಧ ಹಂತದಲ್ಲಿ ನೆರವಾಗುತ್ತಿದೆ. ೧೪೭ ಕೋಟಿ ರೂ. ಡಿಸೇಲ್ ಸಬ್ಸಿಡಿ ನೀಡಲಾಗುತ್ತಿದೆ. ಕೇಂದ್ರ ಸರಕಾರ ಸೀಮೆಎಣ್ಣೆ ಕಡಿತಗೊಳಿಸಿದ ಬಳಿಕ ರಾಜ್ಯ ಸರಕಾರವೇ ಬಜೆಟ್‌ನಲ್ಲಿ ಅನುದಾನವನ್ನು ಮೀಸಲಿರಿಸಿ ಸುಮಾರು ೨೦ ಕೋಟಿಯ ತನಕ ಸಬ್ಸಿಡಿ ನೀಡಲಾಗುತ್ತಿದೆ. ಪ್ರತಿ ಮೀನುಗಾರಿಕಾ ಬೋಟಿಗೆ ಪ್ರತಿ ವರ್ಷ ೮-೯ ಕೋಟಿ ರೂ. ಒಟ್ಟು ಸಬ್ಸಿಡಿ ನೀಡಲಾಗುತ್ತಿದೆ. ಮೀನುಗಾರಿಕಾ ಬೋಟುಗಳ ಟ್ರ್ಯಾಕ್ ಮಾಡಲು ಇಸ್ರೋದಿಂದ ತಯಾರಿಸಿದ ಉಪಕರಣವನ್ನು ೫೦ ಪ್ರತಿಶತ ಸಬ್ಸಿಡಿಯಲ್ಲಿ ಅಳವಡಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಆದರೆ ಕರಾವಳಿಯ ಬಿಜೆಪಿ ನಾಯಕರುಗಳು ಮೀನುಗಾರರಿಗೆ ನೀಡಿದ ಕೊಡುಗೆ ಏನು ಎಂಬುದನ್ನು ಉತ್ತರಿಸಿಬೇಕಿದೆ. ಇದರ ನಡುವೆ ಮೋದಿ ಅವರು ಎಲ್ಲಾ ಸಬ್ಸಿಡಿಗಳಲ್ಲಿ ತೆಗೆಯಲು ಹೊರಟಿದ್ದಾರೆ. ಇದನ್ನು ಮೀನುಗಾರರು ಅರ್ಥಮಾಡಿಕೊಳ್ಳಬೇಕಿದೆ.

    ಮೋದಿ ಭಾಷಣ ಬಿಟ್ಟರೆ ಬೇರೆನೂ ಮಾಡುವುದಿಲ್ಲ:
    ಚುನಾವಣೆಗಳು ತಾನೇನು ಮಾಡಿದ್ದೇನೆ ಮುಂದೇನು ಮಾಡಲಿದ್ದೇನೆ ಎಂಬ ಆಧಾರದಲ್ಲಿ ನಡೆಸಲಾಗುತ್ತಿತ್ತು. ಆದರೆ ಬಿಜೆಪಿ ಭಾಷಣಗಳ ಮೂಲಕ ಚುನಾವಣೆ ಮಾಡಲು ಹೊರಟಿದೆ. ಒಂದು ಚುನಾವಣೆ ಛಾಯ್ ಪೇ ಚರ್ಚಾ ಎಂದರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಪ್ರಣಾಳಿಕೆಯಲ್ಲಿ ಇರುವ ಅಂಶಗಳನ್ನು ಮರೆತುಬಿಟ್ಟಿದ್ದಾರೆ ಎಂದರು.

    ಸ್ವಾಮಿನಾಥನ್ ವರದಿ ಜಾರಿಗೆ ಬರಲಿಲ್ಲ. ನದಿಗಳ ಜೋಡಣೆ ನೆನೆಗುದಿಗೆ ಬಿದ್ದಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಠಿಸುತ್ತೇನೆ, ಕಪ್ಪು ಹಣ ತಂದು ಬಡವರ ಅಕೌಂಟಿಗೆ ಹಣ ಹಾಕುತ್ತೇವೆ ಎಂದರು. ಆದರೆ ಇದ್ಯಾವುದನ್ನೂ ಮಾಡಿಲ್ಲ. ದೊಡ್ಡ ಉದ್ಯಮಿಗಳಿಗೆ ಸಾಲಮನ್ನ ಮಾಡಿ ಬಡವರು, ರೈತರು, ಯುವಕರುಗಳಿಗೆ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ ಎಂದರು.

    ಕೇವಲ ಧಾರ್ಮಿಕ ಭಾವನೆಗಳನ್ನು ಕೆಣಕಿ ಮತ ಪಡೆಯುತ್ತಿದ್ದ ಬಿಜೆಪಿ ಪ್ರತಿಭಾರಿಯೂ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ನೀವೇನು ಮಾಡಿದ್ದಿರಿ ಎಂಬ ಪ್ರಶ್ನೆಯನ್ನು ಜನರೇ ಸಂಸದರ ಬಳಿ ಕೇಳುತ್ತಿದ್ದಾರೆ. ಸಂಸದರು ಅದಕ್ಕೆ ಉತ್ತರ ಕೊಡುವ ಬದಲು ನಮಗಾಗಿ ಅಲ್ಲ ಮೋದಿಗಾಗಿ ಓಟು ಹಾಕಿ ಎಂದು ಹೇಳಿತ್ತಿರುವುದು ದುರಂತ ಎಂದರು.

    Click here

    Click here

    Click here

    Call us

    Call us

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಕರಾವಳಿ ಓಟು ಕೇಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ನೈತಿಕತೆ ಇದೆ. ಕಳೆದು ಚುನಾವಣೆಗೂ ಪೂರ್ವದಲ್ಲಿ ಸಮಾವೇಶದಲ್ಲಿ ಅಮಿತ್ ಶಾ ನೀಡಿದ ಭರವಸೆ ಈವರೆಗೆ ಈಡೆರಿಸಿಲ್ಲ. ಆದರೆ ರಾಜ್ಯ ಸರಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರಕಾರ ಮೀನುಗಾರಿಕಾ ಬಂದರುಗಳಿಗೆ ನೀಡುತ್ತಿದ್ದ ಅನುದಾನದಲ್ಲಿಯೂ ಕಡಿತಗೊಳಿಸಿದೆ. ಹಾಗಾಗಿ ಈ ಭಾಗದಲ್ಲಿ ಬದಲಾವಣೆ ಕಾಣುವುದು ಖಂಡಿತ. ಮಧು ಬಂಗಾರಪ್ಪನವರ ಗೆಲುವು ನಿಶ್ಚಿತ.

    ಸುದ್ದಿಗೋಷ್ಠಿಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ರಘುರಾಮ ಶೆಟ್ಟಿ, ಗೌರಿ ದೇವಾಡಿಗ, ನಾಗರಾಜ ಗಾಣಿಗ ಬಂಕೇಶ್ವರ, ರಿಯಾಜ್ ಅಹಮ್ಮದ್, ಜೆಡಿಎಸ್ ಅಧ್ಯಕ್ಷ ಸಂದೇಶ್ ಭಟ್, ಮುಖಂಡರಾದ ಶ್ರೀಕಾಂತ ಅಡಿಗ, ರವಿ ಶೆಟ್ಟಿ, ಮನ್ಸೂರ್ ಮರವಂತೆ ಮೊದಲಾದವರು ಇದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d