Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಧಾನಿ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಶಕ್ತಿಯಾಗಿದ್ದಾರೆ: ನಟಿ ತಾರಾ
    Uncategorized

    ಪ್ರಧಾನಿ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಶಕ್ತಿಯಾಗಿದ್ದಾರೆ: ನಟಿ ತಾರಾ

    Updated:19/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಲವತ್ತಾರು ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ ಎಷ್ಟು ಜನ ರೈತರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಮನ್ನಾ ಮಾಡಿದ್ದೇವೆಂದು ಹೇಳುವವರು ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಯ ಮುನ್ನಾವಾದರೂ ಶ್ವೇತಪತ್ರ ಹೊರಡಿಸಲಿ ಆಗ ಜನರಿಗೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ರಾಜ್ಯ ಬಿಜೆಪಿ ನಾಯಕಿ, ಚಿತ್ರ ನಟಿ ತಾರಾ ಹೇಳಿದರು.

    Click Here

    Call us

    Click Here

    ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಕೃಷಿಕರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿತ್ತು. ಆದರೆ ರಾಜ್ಯದಲ್ಲಿನ ಸಂಮಿಶ್ರ ಸರಕಾರ ಅರ್ಹ ರೈತರ ಪಟ್ಟಿಯನ್ನೇ ಕೇಂದ್ರಕ್ಕೆ ಸಮರ್ಪಕವಾಗಿ ನೀಡದೇ ಕೃಷಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

    ಈಗ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಬಹುದೊಡ್ಡ ಶಕ್ತಿಯಾಗಿದ್ದಾರೆ. ೨೦೧೪ರಲ್ಲಿ ಕೇವಲ ಮೋದಿ ಅವರ ಹೆಸರಿನಲ್ಲಿ ಚುನಾವಣೆ ಎದುರಿತ್ತಿದ್ದೇವೆ. ಆದರೆ ಈಗ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ ಭದ್ರತೆಗಾಗಿ ಅವರಿಟ್ಟ ದಿಟ್ಟಹೆಜ್ಜೆಯನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಇಂದು ಸಮಾಜದ ಎಲ್ಲಾ ವರ್ಗದವರೂ ಬಿಜೆಪಿಯ ಬಗೆಗೆ ಒಲವು ಹೊಂದಿದ್ದಾರೆ. ಯುಪಿಎ ಸರಕಾರದ ಅವಧಿಯಲ್ಲಿ ಬೆಲೆ ಏರಿಕೆ ದೇಶದ ಜನರ ಸಮಸ್ಯೆಯಾಗಿತ್ತು. ಆದರೆ ಈಗ ಅದು ಚರ್ಚೆಗೆ ಬಂದಿಲ್ಲ. ಕೇಂದ್ರ ಸರಕಾರ ಮೀನುಗಾರರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತಿರುವುದು ಮೀನುಗಾರರ ಬಗೆಗಿರುವ ಬದ್ಧತೆಯನ್ನು ತೋರಿಸುತ್ತದೆ ಎಂದರು.

    ಕಳೆದ ಉಪಚುನಾವಣೆಯ ಬಳಿಕ ಕಡಿಮೆ ಅವಧಿಯಲ್ಲಿ ಸಂಸದರಾಗಿದ್ದ ರಾಘವೇಂದ್ರ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆ ಗಳಿಸಿದ್ದಾರೆ ಎಂದ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಕಾಂಗ್ರೆಸ್ ಪಕ್ಷ ಇಂದು ಚಿಹ್ನೆಯನ್ನು ಕಳೆದುಕೊಂಡು ಅಸ್ತಿತ್ವವೇ ಇಲ್ಲದಂತಾಗಿದೆ ಎಂದರು. ಕಾಂಗ್ರೆಸ್ ಕಾರ್ಯಕರ್ತರದ್ದು ಮನೆ ಕಳೆದುಕೊಂಡಂತಹ ಪರಿಸ್ಥಿತಿಯಾಗಿದ್ದು ಬಲವಂತವಾಗಿ ಜೆಡಿಎಸ್‌ನೊಂದಿಗೆ ಕೈಜೊಡಿಸುವ ದುಸ್ಥಿತಿ ಬಂದೊದಗಿದೆ ಎಂದು ಟೀಕಿಸಿದರು.

    Click here

    Click here

    Click here

    Click Here

    Call us

    Call us

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ಅಲ್ಲಿ ಇಬ್ಬರೂ ಅಭ್ಯರ್ಥಿಗಳು ಸಿನೆಮಾ ಹಿನ್ನೆಲೆ ಬಂದವರಾಗಿದ್ದರಿಂದ ಸಹಜವಾಗಿ ಜನರಲ್ಲಿ ಕುತೂಹಲವಿತ್ತು. ಅಲ್ಲದೇ ಅಂಬರೀಶ್ ಪತ್ನಿ, ಮುಖ್ಯಮಂತ್ರಿ ಮಗ ಎನ್ನುವ ಕಾರಣಕ್ಕೆ ಇನ್ನಷ್ಟು ಹೈಪ್ರೊಪೈಲ್ ಪಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲ್ಲುವ ವಿಶ್ವಾಸವಿದೆ ಎಂದರು. ಸುಶಿಕ್ಷಿತರೇ ಇರುವ ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಕುಸಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಚುನಾವಣಾ ಆಯೋಗ ಸಾಕಷ್ಟು ಜಾಗೃತಿ ಮೂಡಿಸಿದ ಹೊರತಾಗಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವುದು ವಿಷಾದನೀಯ ಸಂಗತಿ ಎಂದರು.

    ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಮಾತನಾಡಿ ಬೈಂದೂರು ವಿಧಾಸಭಾ ಕ್ಷೇತ್ರದ ಏಳು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ. ಈ ಭಾರಿ ಮೋದಿ ಹವಾ ಇನ್ನಷ್ಟು ಹೆಚ್ಚಾಗಿದ್ದು ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ೫೦ ಸಾವಿರಕ್ಕೂ ಅಧಿಕ ಅಂತರ ದೊರಕಿಸಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮುಖಂಡರಾದ ದೀಪಕ್‌ಕುಮಾರ್ ಶೆಟ್ಟಿ, ರಾಮಚಂದ್ರ ಬೈಕಂಪಾಡಿ, ಬಾಲಚಂದ್ರ ಭಟ್, ಪ್ರವೀಣ ಗುರ್ಮೆ, ಸುರೇಶ್ ಬಂಟ್ವಾಡಿ, ಶರತ್ ಶೆಟ್ಟಿ, ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    twelve + twenty =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.