Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಮೊಗ್ಗ ಲೋಕಸಭಾ ಕ್ಷೇತ್ರ: ಬಿಜೆಪಿ – ಮೈತ್ರಿ ಅಭ್ಯರ್ಥಿ ನಡುವೆ ಪೈಪೋಟಿ
    ಊರ್ಮನೆ ಸಮಾಚಾರ

    ಶಿವಮೊಗ್ಗ ಲೋಕಸಭಾ ಕ್ಷೇತ್ರ: ಬಿಜೆಪಿ – ಮೈತ್ರಿ ಅಭ್ಯರ್ಥಿ ನಡುವೆ ಪೈಪೋಟಿ

    Updated:21/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ವಿಧಾನಸಭಾ ಕ್ಷೇತ್ರದಲ್ಲೂ ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಸರ್ಕಸ್

    Click Here

    Call us

    Click Here

    ಬೈಂದೂರು: ರಾಜ್ಯದಲ್ಲಿ 23ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧಗೊಂಡಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಕ್ಕೆ ಸೇರಿರುವ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಅಧಿಕ ಮತಗಳನ್ನು ಗಳಿಸಿ ಮೇಲುಗೈ ಸಾಧಿಸಲು ಹಾಲಿ ಸಂಸದ ಬಿಜೆಪಿಯ ಬಿ. ವೈ. ರಾಘವೇಂದ್ರ ಮತ್ತು ಅವರ ಪ್ರತಿಸ್ಪರ್ಧಿ ಮೈತ್ರಿಕೂಟದ ಭಾಗವಾದ ಜೆಡಿಎಸ್ನ ಮಧು ಬಂಗಾರಪ್ಪ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

    ಬಿ.ಎಸ್.ಯಡಿಯೂರಪ್ಪ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಕಾರಣ ತೆರವಾದ ಸ್ಥಾನಕ್ಕೆ ಕಳೆದ ವರ್ಷ ನವೆಂಬರ್ 3ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಅವರ ಪುತ್ರ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರೇ ಎದುರಾಳಿಗಳಾಗಿದ್ದು, ರಾಘವೇಂದ್ರ ವಿಜಯಿಯಾಗಿದ್ದರು. ಇದೀಗ ಐದು ತಿಂಗಳು, ಇಪ್ಪತ್ತು ದಿನಗಳ ಬಳಿಕ ಇದೇ 23ರಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಂಬಂಧಿಸಿ ಅದೇ ವಿನ್ಯಾಸ ಈ ಬಾರಿಯೂ ಮುಂದುವರಿದಿದೆ.

    ಪ್ರಜಾಕೀಯ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳ ಜತೆಗೆ ಇನ್ನೂ 8 ಸ್ಪರ್ಧಿಗಳು ಸೇರಿದಂತೆ ಒಟ್ಟು 12 ಜನರು ಕಣದಲ್ಲಿದ್ದರೂ ನೈಜ ಸ್ಪರ್ಧೆ ಇರುವುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅದೇ ಅಭ್ಯರ್ಥಿಗಳ ನಡುವೆ. ಪ್ರಜಾಕೀಯ ಪಕ್ಷದ ಅಭ್ಯರ್ಥಿ ವೆಂಕಟೇಶ ಆರ್. ಮತ್ತು ಬಹುಜನ ಸಮಾಜ ಪಕ್ಷದ ಗುಡ್ಡಪ್ಪ ಬೈಂದೂರಿನಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ನಡೆಸಿ ಹೋಗಿದ್ದಾರೆ. ಉಳಿದ 8 ಜನ ಅಭ್ಯರ್ಥಿಗಳು ಇತ್ತ ಸುಳಿದಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿಯನ್ನು ವಿರೋಧಿಸುತ್ತಿರುವ ಸಿಪಿಎಂ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಸಮಾವೇಶಗಳನ್ನು ನಡೆಸಿದೆ ಎಂಬುದು ಗಮನಾರ್ಹ ಅಂಶ.

    ಕ್ಷೇತ್ರವು ಶಿವಮೊಗ್ಗ ಜಿಲ್ಲೆ ಅಲ್ಲದೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೂ ವ್ಯಾಪಿಸಿರುವುದು ಈ ಕ್ಷೇತ್ರದ ಒಂದು ವೈಶಿಷ್ಟ್ಯ. ಅದೇ ಕಾರಣಕ್ಕಾಗಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಅಭ್ಯರ್ಥಿಗಳು ದೂರದ ಬೈಂದೂರಿನ ಮತದಾರರನ್ನು ತಮ್ಮತ್ತ ಸೆಳೆಯಲು ವಿವಿಧ ಪ್ರಚಾರ ತಂತ್ರಗಳನ್ನು ಬಳಸುವ ಅನಿವಾರ್ಯತೆಗೆ ಒಳಗಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

    Click here

    Click here

    Click here

    Call us

    Call us

    ಬೈಂದೂರು ವಿಧಾನಸಭಾ ಕ್ಷೇತ್ರ ಕರಾವಳಿ ಮತ್ತು ಅರೆಮಲೆನಾಡು ಪ್ರದೇಶವನ್ನು ಒಳಗೊಂಡಿರುವ ಕಾರಣ ಶಿವಮೊಗ್ಗ ಕ್ಷೇತ್ರದ ಉಳಿದ ಭಾಗಕ್ಕಿಂತ ಭಿನ್ನವಾಗಿದೆ. ಭೌಗೋಳಿಕ ಸ್ಥಿತಿ, ಮತದಾರರ ಜಾತಿ ಸಮೀಕರಣ, ಜನರ ಬದುಕಿನ ವಿಧಾನ, ವೃತ್ತಿ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳೂ ಭಿನ್ನವಾಗಿವೆ. ಹಲವು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹುರಿಯಾಳುಗಳಿಗೆ ಒಲಿಯುತ್ತಾ ಬಂದಿದ್ದ ಈ ಕ್ಷೇತ್ರ ಕಳೆದ ಚುನಾವಣೆಯಲ್ಲಿ ಬಿಜೆಪಿ ಪಾಲಾಯಿತು. ಆ ಬಳಿಕ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ ಇಲ್ಲಿ ಮಧು ಬಂಗಾರಪ್ಪ ಅವರಿಗಿಂತ 14 ಸಾವಿರ ಅಧಿಕ ಮತ ಗಳಿಸಿದ್ದರು. ಈ ಬಾರಿ ಬಿಜೆಪಿ ಈ ಅಂತರವನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮೈತ್ರಿಕೂಟ ಹೇಗಾದರೂ ಮಶಡಿ ಮೇಲುಗೈ ಸಾಧಿಸಲು ಹೆಣಗುತ್ತಿದೆ.

    ಬಿಜೆಪಿ ಮೋದಿ ಅಲೆಯ ಲಾಭದ ನಿರೀಕ್ಷೆಯಲ್ಲಿದೆ. ಮೈತ್ರಿ ಅಭ್ಯರ್ಥಿ ಕಾಂಗ್ರೆಸ್‌ನ ಪಾರಂಪರಿಕ ಮತಗಳನ್ನು ಮರಳಿ ಪಡೆಯುವುದರ ಜತೆಗೆ ತಂದೆ ಬಂಗಾರಪ್ಪ ಅವರ ಕೊಡುಗೆಗಳನ್ನು ಮತದಾರರಿಗೆ ನೆನಪಿಸಿ ಅನುಕಂಪ ಗಿಟ್ಟಿಸುವ ತಂತ್ರ ಬಳಸುತ್ತಿದ್ದಾರೆ. ಬಿಜೆಪಿ ಪರ ಪ್ರಚಾರದ ನೇತೃತ್ವವನ್ನು ಶಾಸಕ ಬಿ. ಎಂ. ಸುಕುಮಾರಶೆಟ್ಟಿ ವಹಿಸಿದ್ದರೆ, ಮಧು ಬಂಗಾರಪ್ಪ ಮಾಜಿ ಶಾಸಕ, ಕಾಂಗ್ರೆಸ್‌ನ ಕೆ. ಗೋಪಾಲ ಪೂಜಾರಿ ಬಳಗವನ್ನು ಬಹುವಾಗಿ ನೆಚ್ಚಿಕೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

    ನಾಯಕರ ಬಹಿರಂಗ ಸಭೆಗಳು, ಪತ್ರಿಕಾ ಗೋಷ್ಠಿಗಳು, ಕಾರ್ಯಕರ್ತರಿಂದ ತಣ್ಣಗಿನ ಮನೆಮನೆ ಪ್ರಚಾರ ನಡೆದಿವೆ. ಕುಡಿಯುವ ನೀರಿನ ಅಭಾವ, ಮರಳಿನ ಕೊರತೆ, ಸಮುದ್ರ ಕೊರೆತ, ಮೀನುಗಾರಿಕಾ ಬಂದರು ಕಾಮಗಾರಿಯ ನಡೆ, ಕಸ್ತೂರಿ ರಂಗನ್ ಸಮಿತಿ ವರದಿ ಅನುಷ್ಠಾನ, ಅರಣ್ಯ ಭೂಮಿ ಒತ್ತುವರಿ, ಡೀಮ್ಡ್‌ ಫಾರೆಸ್ಟ್ ಕುರಿತಾದ ಸ್ಥಳೀಯ ಸಮಸ್ಯೆಗಳು ಚುನಾವಣೆಯ ವಿಷಯಗಳಾಗುವ ಬದಲು ಮೋದಿ ವಿರುದ್ಧ ರಾಹುಲ್ ಎನ್ನುವುದೇ ಪ್ರಮುಖ ವಿಚಾರ ಎನಿಸಿರುವುದು ಈ ಬಾರಿಯ ಇಲ್ಲಿನ ವಿಶೇಷ. ಹಾಗಾಗಿ ಈ ಕ್ಷೇತ್ರದಲ್ಲಿ ಯಾರು ಅನುಕೂಲ ಪಡೆಯಬಹುದು ಎನ್ನುವುದನ್ನು ಅರಿಯಲು ಚುನಾವಣಾ ಫಲಿತಾಂಶದ ವರೆಗೆ ಕಾಯಬೇಕಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d