Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡುಕೋಣೆ: ನಾರಾಯಣ ಶ್ರಮಶಕ್ತಿ ಪ್ರಶಸ್ತಿ ಪ್ರದಾನ
    Uncategorized

    ಪಡುಕೋಣೆ: ನಾರಾಯಣ ಶ್ರಮಶಕ್ತಿ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು : ದಿ. ನಾರಾಯಣ ಪಡುಕೋಣೆ ಅವರ ಎರಡನೆಯ ಪುಣ್ಯತಿಥಿಯಂದು ಅವರ ’ಹಕ್ಕಿಗೂಡು’ ಮನೆಯಲ್ಲಿ ಮಂಗಳವಾರ ನಡೆದ ’ನಾರಾಯಣ ಶ್ರಮಶಕ್ತಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ಜರುಗಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಉಪನ್ಯಾಸಕ, ಹಿರಿಯ ಪತ್ರಕರ್ತ ಎಸ್. ಜನಾರ್ದನ ಮರವಂತೆ ಮಾತನಾಡಿ ಶ್ರಮಜೀವಿಯಾಗಿ ಸಾರ್ಥಕ ಬದುಕು ರೂಪಿಸಿಕೊಂಡು ಕುಟುಂಬವನ್ನು ಉನ್ನತಿಗೆ ಒಯ್ದಿದ್ದ ಪಡುಕೋಣೆ ನಾರಾಯಣ ಗಾಣಿಗ ಅವರ ಪುಣ್ಯತಿಥಿಯಂದು ಅವರಂತೆ ಬದುಕಿದ್ದ ಒಬ್ಬರನ್ನು ಗುರುತಿಸಿ ಅವರಿಗೆ ಶ್ರಮಶಕ್ತಿ ಪ್ರಶಸ್ತಿ ನೀಡುತ್ತಿರುವುದು ಒಂದು ಅಪೂರ್ವದ ಮತ್ತು ಶ್ಲಾಘನೀಯ ಉಪಕ್ರಮ ಎಂದು ನಿ ಹೇಳಿದರು.

    ನಾರಾಯಣ ಗಾಣಿಗರು ವರ್ಷದ ಎಲ್ಲ ಕಾಲಗಳಲ್ಲೂ ಕಾಯಕವನ್ನು ಧಾರ್ಮಿಕ ಶ್ರದ್ಧೆಯಂತೆ ನಡೆಸಿದವರು. ತಮ್ಮ ಕೊನೆಗಾಲದ ವರೆಗೂ ಆರೋಗ್ಯಯುತ ಜೀವನ ನಡೆಸಿ ಕುಟುಂಬದ ಕಿರಿಯರಿಗೆ ಮೌಲ್ಯಾಧರಿತ ಜೀವನಪಥವನ್ನು ತೋರಿದವರು. ಅವರ ವಾರ್ಷಿಕ ಸ್ಮರಣೆಯನ್ನು ಕಳೆದ ವರ್ಷದಂತೆ ಈ ವರ್ಷವೂ ’ಶ್ರಮಶಕ್ತಿ ಪ್ರಶಸ್ತಿ’ ಪ್ರದಾನದ ಮೂಲಕ ನಡೆಸುತ್ತಿರುವುದರ ಹಿಂದೆ ಅವರು ತಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸಿದ ಆದರ್ಶದ ಬದುಕು, ಪರಿಶುದ್ಧ ಪರಂಪರೆ ಕೆಲಸ ಮಾಡಿದೆ. ಸುಮಾರು ೪ ದಶಕಗಳುದ್ದಕ್ಕೆ ಕಟ್ಟಿಗೆ ಒಡೆಯುವ ಅತ್ಯಂತ ಕಠಿಣ ಕಾಯಕ ನಡೆಸಿ, ಅದರದೇ ದುಡಿಮೆಯಿಂದ ಸುಶಿಕ್ಷಿತ ಕುಟುಂಬವನ್ನು ರೂಪಿಸಿದ ಪಡುಕೋಣೆ ಭಂಡಾರಮನೆ ನಾಣು ಯಾನೆ ನಾರಾಯಣ ನಾಯ್ಕರಿಗೆ ಈ ಪ್ರಶಸ್ತಿ ನೀಡುತ್ತಿರುವುದು ನಾರಾಯಣ ಗಾಣಿಗರಿಗೆ ಅವರ ಕುಟುಂಬ ಸಲ್ಲಿಸಿದ ಅರ್ಥಪೂರ್ಣ ಗೌರವ ಮತ್ತು ಸಂಸ್ಮರಣೆ ಎಂದು ಅವರು ಹೇಳಿದರು.

    ಗೋಪಾಲಕೃಷ್ಣ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೆ. ರಮೇಶ ಗಾಣಿಗ, ಸಂಘದ ನಿರ್ದೇಶಕಿ ಶಶಿಕಲಾ ನಾರಾಯಣ, ಕಾರ್ಮಿಕ ಮುಖಂಡ ಸುರೇಶ ಕಲ್ಲಾಗರ ಹಿರಿಯರ ಪುಣ್ಯತಿಥಿಯನ್ನು ವಿಭಿನ್ನವಾಗಿ ನಡೆಸಿದ ನಾರಾಯಣ ಗಾಣಿಗ ಕುಟುಂಬದ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಉಪಸ್ಥಿತರಿದ್ದ ಅತಿಥಿಗಳು ಶ್ರಮಜೀವಿ ನಾಣು ಯಾನೆ ನಾರಾಯಣ ನಾಯ್ಕ್ ಅವರಿಗೆ ಈ ಸಾಲಿನ ನಾರಾಯಣ ಶ್ರಮಶಕ್ತಿ ಪ್ರಶಸ್ತಿ ಪ್ರದಾನ ಮಾಡಿದರು.

    ಆಯ್ಕೆ ಸಮಿತಿಯ ರಾಜೀವ ಪಡುಕೋಣೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಾರಾಯಣ ಗಾಣಿಗ ಅವರ ಪುತ್ರ, ’ಜನಪ್ರತಿನಿಧಿ’ ವಾರಪತ್ರಿಕೆಯ ಸಂಪಾದಕ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದ ಆಶಯವನ್ನು ವಿವರಿಸಿದರು. ರಾಜಗುರು ವಂದಿಸಿದರು. ಪಿ. ಎನ್. ಶ್ರೀಧರ ಪಡುಕೋಣೆ, ಶ್ರೀನಿವಾಸ, ನಾರಾಯಣ ಗಾಣಿಗರ ಬಂಧುಗಳು, ಅಭಿಮಾನಿಗಳು ಇದ್ದರು. ಎಲ್ಲರೂ ಭೋಜನಕೂಟದಲ್ಲಿ ಪಾಲ್ಗೊಂಡರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    17 − seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.