ಇಂದಿನಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ ಆರಂಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಮೇ 16: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಮೇ 16 ರಿಂದ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಮಾತ್ರ ಹಾಗೂ ಕ್ಯೂರಿಂಗ್ ಸಂಪೂರ್ಣವಾಗಿ ಮುಗಿದ ನಂತದ ಜೂನ್ 1 ರಿಂದ ಮಿನಿ ಬಸ್‌ಗಳು, ಜೀಪು, ವ್ಯಾನ್, ಕಾರುಗಳು ಹಾಗೂ ದ್ವಿಚಕ್ರ ವಾಹನಗಳೊಂದಿಗೆ ಎಲ್‌ಸಿವಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

Call us

Click Here

ಅಲ್ಲಿಯವರೆಗೆ ಉಡುಪಿ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಹಾಗೂ ಮಂಗಳೂರು-ಕಾರ್ಕಳ-ಮಾಳ ಘಾಟ್-ಶೃಂಗೇರಿ-ತೀರ್ಥಹಳ್ಳಿ ಮೂಲಕ ಸಂಚರಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply