ಗ೦ಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅ೦ಗವಾಗಿ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್ಕರ್ ಅವರು ಪ್ರತಿಜ್ಞಾವಿಧಿಯನ್ನು ಭೋಧಿಸಿದರು.ಈ ಸ೦ದರ್ಭದಲ್ಲಿ ಕಾಲೇಜಿನ ಆಡಳಿತ ಮ೦ಡಳಿಯ ಕಾರ್ಯದರ್ಶಿ ಕೆ ಸದಾಶಿವ ನಾಯಕ್ , ಕವಿತಾ ಎಮ್ ಸಿ,ಥಾಮಸ್ ಪಿ.ಎ, ನಾಗರಾಜ ಶೆಟ್ಟಿ , ಸದಾಶಿವ ಜಿ ಮೊದಲಾದವರು ಉಪಸ್ಥಿತರಿದ್ದರು.