Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಘಾತದಿಂದ ಅರೆಕೋಮಾವಸ್ಥೆಯಲ್ಲಿರುವ ಸುರೇಶ್ ಪೂಜಾರಿಗೆ ಬೇಕಿದೆ ಮಾನವೀಯ ನೆರವು
    ಊರ್ಮನೆ ಸಮಾಚಾರ

    ಅಪಘಾತದಿಂದ ಅರೆಕೋಮಾವಸ್ಥೆಯಲ್ಲಿರುವ ಸುರೇಶ್ ಪೂಜಾರಿಗೆ ಬೇಕಿದೆ ಮಾನವೀಯ ನೆರವು

    Updated:23/06/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೆಲ ತಿಂಗಳುಗಳ ಹಿಂದೆ ನಾಗೂರು ಬಸ್ ನಿಲ್ದಾಣದ ಬಳಿ ಘಟಿಸಿದ ರಸ್ತೆ ಅಪಘಾತದಿಂದಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೈಂದೂರು ತಾಲೂಕಿನ ಉಪ್ರಳ್ಳಿ ಮೂಡುಮಠ ನಿವಾಸಿ ಸುರೇಶ್ ಪೂಜಾರಿ ಅವರ ಚಿಕಿತ್ಸೆಗೆ ಸಹೃದಯಿಗಳ ಮಾನವೀಯ ನೆರವಿನ ಅಗತ್ಯವಿದೆ.

    Click Here

    Call us

    Click Here

    ಗಾರೆ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಸುರೇಶ್ ಪೂಜಾರಿ ಅವರು ಕೆಲವು ತಿಂಗಳುಗಳ ಹಿಂದೆ ನಾಗೂರು ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಲಾರಿಯೊಂದು ಅವರ ಮೇಲೆ ಹಾದು ಹೋಗಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಅರೆಕೋಮಾವಸ್ಥೆ ತಲುಪಿದ್ದರು. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತಾದರೂ ಅವರು ಗುಣಮುಖರಾಗಿರಲಿಲ್ಲ. ಬಳಿಕ ಕುಂದಾಪುರದ ಮಾತಾ ಆಸ್ಪತ್ರೆಯಲ್ಲಿ ಒಂದು ತಿಂಗಳಿನಿಂದ ಹಾಗೂ ಕಳೆದ ಮೂರು ತಿಂಗಳಿಂದ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೊಳಪಡಿಸಿರುವ ವೈದ್ಯರು ಅವರು ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸುಮಾರು 10 ಲಕ್ಷ ರೂ. ಖರ್ಚಾಗಬಹುದೆಂದು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸುರೇಶ್ ಪೂಜಾರಿ ಹಾಗೂ ನಾಗರತ್ನ ದಂಪತಿ ತಮ್ಮ ಮಗುವಿನೊಂದಿಗೆ

    ಕೂಲಿ ಕೆಲಸ ಮಾಡಿಕೊಂಡಿದ್ದ ಸುರೇಶ್ ಪೂಜಾರಿ ಅವರಿಗಾದ ಅಫಘಾತದಿಂದ ಅವರ ಕುಟುಂಬ ತತ್ತರಿಸಿಹೋಗಿದೆ. ಸುರೇಶ್ ಪೂಜಾರಿ ಅವರ ಪತ್ನಿ ನಾಗರತ್ನ ಹಾಗೂ ಪುಟ್ಟ ಕಂದಮ್ಮ ಅವರ ಗುಣಮುಖರಾಗುವ ನಿರೀಕ್ಷೆಯಲ್ಲಿದ್ದಾರೆ. ಅವರ ಪತ್ನಿ ಈಗಾಗಲೇ ಚಿಕಿತ್ಸೆಗಾಗಿ ಸುಮಾರು ರೂ. 5 ಲಕ್ಷದ ತನಕ ವೆಚ್ಚ ಮಾಡಿದ್ದು, ಈಗ ಹೆಚ್ಚಿನ ಚಿಕಿತ್ಸೆಗೆ ಭರಿಸಲು ಅಗತ್ಯವಾದ ಹಣದ ಅವಶ್ಯಕತೆ ಎದುರಾಗಿದೆ.

    ಬಡತನದ ಅನಿವಾರ್ಯತೆಗಳ ನಡುವೆ ಪತಿಗೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸಿಕೊಳ್ಳಬೇಕು ಎಂಬ ಸುರೇಶ್ ಪೂಜಾರಿ ಅವರ ಮಡದಿ ನಾಗರತ್ನ ಅವರಿಗೆ ನಾಗರಿಕ ಬಂಧುಗಳು ಸಹೃಯತೆಯಿಂದ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆಯಬೇಕಿದೆ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
    7338233197, 9980752940

    Click here

    Click here

    Click here

    Call us

    Call us

    ಹಣ ವರ್ಗಾವಣೆಗೆ ಅಕೌಂಟ್ ನಂಬರ್:
    ಕರ್ಣಾಟಕ ಬ್ಯಾಂಕ್ ಕಿರಿಮಂಜೇಶ್ವರ ಶಾಖೆ
    A/c No: 4222500100853501
    IFSC Code: KARB0000422

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d