Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ
    ಉಡುಪಿ ಜಿಲ್ಲೆ

    ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

    Updated:09/01/20161 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ

    Click Here

    Call us

    Click Here

    ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇನ್ನೊಂದೆಡೆ ಬೈಂದೂರು ಹಾಗೂ ಕುಂದಾಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಅಕ್ಷತಾ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.

    ಬೈಂದೂರಿನಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ, ರಸ್ತೆ ತಡೆ:
    ಅನುಮಾನಾಸ್ಪದವಾಗಿ ಸಾವಿಗೀಡಾದ ಅಕ್ಷತಾ ಸಾವಿನ ರಹಸ್ಯವನ್ನು ಶೀಘ್ರವೇ ಭೇದಿಸುವಂತೆ ಬೈಂದೂರು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೈಂದೂರು ಬೈಪಾಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಇದಕ್ಕೆ ಬೈಂದೂರಿನ ನಾಗರಿಕರು ಸಾಥ್ ನೀಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕುಳಿತು ಅಕ್ಷತಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ಥವ್ಯಸ್ಥಗೊಂಡಿತು. ಬಳಿಕ ಸ್ಥಳಕ್ಕಾಗಮಿಸಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ವಿದ್ಯಾರ್ಥಿಗಳ ಮನವೊಲಿಸಲು ಮೊದಲಿಗೆ ವಿಫಲರಾದರೂ ಕೂಡ. ಪ್ರಕರಣವನ್ನು ಮೂರು ದಿನಗಳೊಳಗೆ ಬಯಲಿಗೆಳೆಯುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಬಳಿಕ ವಿದ್ಯಾರ್ಥಿಗಳ ಬೈಂದೂರು ವಿಶೇಷ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದರೇ, ಕುಂದಾಪುರದಲ್ಲಿಯೂ ತರಗತಿ ಬಹಿಷ್ಕರಿಸಿ ಮೆರವಣಿಗೆಯ ಮೂಲಕ ಸಾಗಿದ ವಿದ್ಯಾರ್ಥಿಗಳು ಕುಂದಾಪುರ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.

    ಘಟನಾ ಸ್ಥಳಕ್ಕೆ ಐಜಿಪಿ ಭೇಟಿ:
    ಅಕ್ಷತಾ ಮೃತಹೇಹ ಪತ್ತೆಯಾದ ಹೆನ್ಬೇರು ಅಕೇಶಿಯಾ ತೋಪಿಗೆ ಭೇಟಿ ನೀಡಿದ ಪಶ್ಚಿಮ ವಲಯ ಐ.ಜಿ.ಪಿ ಅಮೃತ್‌ಪಾಲ್‌ ಎಸ್ಪಿಯಿಂದ ಘಟನೆಯ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಪ್ರಕರಣದ ತನಿಕೆಗೆ 3 ಪೊಲೀಸ್‌ ತಂಡ ರಚಿಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಪ್ರಕರಣವನ್ನು ಶೀಘ್ರ ಬೇಧಿಸುವುದಾಗಿ ತಿಳಿಸಿದರು. ರತ್ನಾ ಕೊಠಾರಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು ಆ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆ ಇತ್ತು. ಆದರೆ ಈ ಪ್ರಕರಣದಲ್ಲಿ ಸಾಕ್ಷಾಧಾರಗಳು ಲಭ್ಯವಾಗಿರುವುದು ತನಿಕೆಯ ಹಾದಿಯನ್ನು ಸುಗಮಗೊಳಿಸಿದೆ ಎಂದರು.

    ಸಚಿವರ ಭೇಟಿ, ಶಾಸಕರ ಭೇಟಿ :
    ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್‌ ಸೊರಕೆ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಗೋಪಾಲ ಪೂಜಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.

    Click here

    Click here

    Click here

    Call us

    Call us

    ಅಂತ್ಯಕ್ರಿಯೆ:
    ಮಣಿಪಾಲದಲ್ಲಿ ಅಕ್ಷತಾ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಧ್ಯಾಹ್ನದ ವೇಳೆಗೆ ಜ್ಯೂನಿಯರ್ ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕಿಟ್ಟು ಬಳಿಕ ಮನೆಯವರಿಗೆ ಹಸ್ತಾಂತರಿಸಲಾಯಿತು. ಬೈಂದೂರು ವಿಶೇಷ ತಹಶೀಲ್ದಾರ ಕಿರಣ ಗೌರಯ್ಯ ಅಂತ್ಯಕ್ರಿಯೆಗೆ ಕಂದಾಯ ಇಲಾಖೆಯ ಅರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಅಣ್ಣಾಮಲೈ, ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಅರುಣ್ ನಾಯ್ಕ, ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್‌, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ, ಬೈಂದೂರು ಠಾಣಾಧಿಕಾರಿ ಸಂತೋಪ್ ಕಾಯ್ಕಿಣಿ ಮುಂತಾದವರು ಹಾಜರಿದ್ದರು.

    ಸಾವಿನ ಸುತ್ತ ಅನುಮಾನದ ಹುತ್ತ:
    ಅಕ್ಷತಾ ಕಾಲೇಜು ಮುಗಿಸಿ ಮನೆಗೆ ತೆರಳುವ ಸಮಯಕ್ಕೆ ಕಾಲುದಾರಿಯಲ್ಲಿ ಯುವಕನೊಬ್ಬ ನಡೆದುಕೊಂಡು ಬರುತ್ತಿದ್ದು ಸಂಜೆಯ ಹೊತ್ತಿಗೆ ಅದೇ ಮಾರ್ಗವಾಗಿ ಯೋಜನಾನಗರ ಮೂಲಕ ಬೈಂದೂರು ಕಡೆ ಹೋಗಿರುವುದನ್ನು ಸ್ಥಳೀರೋರ್ವರು ಗಮನಿಸಿದ್ದಾರೆ. ಅಕ್ಷತಾಳ ಸಾವು ಸಹ ಇದೇ ಸಮಯದಲ್ಲಿ ನಡೆದಿರುವುದು ಅನುಮಾನವನ್ನು ಹುಟ್ಟುಹಾಕಿದೆ. ಆದರೆ ಸಮಯದಲ್ಲಿ ಮಳೆ ಬರುತ್ತಿದ್ದರಿಂದ ಸ್ಥಳೀಯ ವ್ಯಕ್ತಿಗೆ ಆ ಯುವಕನ ಮುಖಚಹರೆಯನ್ನು ಪತ್ತೆಹಚ್ಚಲಾಗಿರಲಿಲ್ಲ.

    ಆಕೆ ಪ್ರತಿದಿನ ಮನೆಗೆ ತೆರಳುವ ಕಾಲುದಾರಿಯಿಂದ ಸ್ವಲ್ಪ ದೂರದ ಪೊದೆಯಲ್ಲಿ ಶವ ದೊರೆತಿದೆ. ಆದರೆ ಶವ ದೊರೆತ ಸ್ಥಳದಲ್ಲಿ ಅತ್ಯಾಚಾರಕ್ಕೆ ಪ್ರಯತ್ನಿಸಿದ ಕುರುಹುಗಳು ಕಂಡುಬಂದಂತಿಲ್ಲ. ಬೇರೆಲ್ಲಿಯೋ ಕೊಲೆ ಮಾಡಿ ಬಳಿಕ ಶವವನ್ನು ಈ ಪ್ರದೇಶಕ್ಕೆ ತಂದು ಬ್ಯಾಗ್‌ ಹಾಗೂ ಕೊಡೆಗಳನ್ನು ಪಕ್ಕದಲ್ಲಿಟ್ಟು ಹೋಗಿರಬಹುದುಎನ್ನುವುದು ಸ್ಥಳೀಯರ ಅಭಿಪ್ರಾಯ.

    ಅಕ್ಷತಾಳ ಮುಖದಲ್ಲಿ ಉಗುರಿನಿಂದ ಗೀಚಿದ ಕಲೆಗಳು ಕಂಡುಬಂದಿತ್ತು ಎನ್ನಲಾಗಿದೆ. ವಿಧ್ಯಾರ್ಥಿನಿಯ ಚೂಡಿದಾರದ ಶಾಲನ್ನು ಕುತ್ತಿಗೆಗೆ ಸುತ್ತಲಾಗಿತ್ತು. ಅತ್ಯಾಚಾರ ನಡೆಸಿ ಕುತ್ತಿಗೆ ಮುರಿದು ಕೊಲೆ ನಡೆಸಿರಬಹುದು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಇದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.

    ನ್ಯಾಯ ದೊರಕಿಸಿಕೊಡಲು ಆಗ್ರಹ
    ಅಕ್ಷತಾ ಸಾವಿನಿಂದಾಗಿ ಕಂಗೆಟ್ಟಿರುವ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ. ಬೈಂದೂರಿನ ದೇವಾಗಡ ಸಂಘಟನೆ ಐಜಿಪಿ ಅಮೃತಪಾಲ್ ಗೆ ಮನವಿ ಸಲ್ಲಿಸಿದೆ. ನಮ್ಮ ಭೂಮಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರಕರಣವನ್ನು ಖಂಡಿಸಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಮನವಿ ಮಾಡಿದೆ.

    Byndoor Murder_IGP visit (5) Byndoor Murder_IGP visit (7) Byndoor Murder_Student Protest (4) Byndoor Murder_Student Protest (10) Byndoor Murder_Student Protest (15) Byndoor Murder_Student Protest (26) Byndoor Murder_Student Protest (29)

    Like this:

    Like Loading...

    Related

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    1 Comment

    1. Pingback: ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಎರಡು ವರ್ಷ | Kundapra.com ಕುಂದಾಪ್ರ ಡಾಟ್ ಕಾಂ

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d