Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಚನಕಾರರ ಬದುಕು-ಬರಹದ ಕುರಿತು ಅರಿವು ಕಾರ್ಯಕ್ರಮ
    ಕುಂದಾಪುರ

    ವಚನಕಾರರ ಬದುಕು-ಬರಹದ ಕುರಿತು ಅರಿವು ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗ ಮತ್ತು ಶ್ರೀಮಠ ಸಾಣೆಹಳ್ಳಿ ಇವರ ಸಹಯೋಗದಲ್ಲಿ ಮತ್ತೆ ಕಲ್ಯಾಣಶೀರ್ಷಿಕೆಯಲ್ಲಿ ವಚನಕಾರರ ಬದುಕು-ಬರಹದ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಅತಿಥಗಳಾಗಿ ಆಗಮಿಸಿದ್ದ ನಾವುಂದ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಸುಧಾಕರ ದೇವಾಡಿಗರವರು ವಚನಕಾಲವು ೯೦೦ ವರುಷಗಳ ಹಿಂದೆ ನಡೆದ ವಚನಗಳ ಚಳುವಳಿ. ಈ ನಾಡಿನ ಇತಿಹಾಸದಲ್ಲಿ ಬಹಳ ಮಹತ್ವವಾದುದು. ಜೇಡ, ಬೇಡ, ಮಡಿವಾಳ, ಮಾದರ, ಅಂಬಿಗ ಹೀಗೆ ಬಹುರೂಪಿ ನೆಲೆಯಲ್ಲಿದ್ದ ದುಡಿಮೆಗಾರರು ಶಿವಭಕ್ತಿ ಎಂಬ ಮಹಾಮನೆಯೊಳಗೆ ಒಂದಾಗಿ ತಮ್ಮ ಚಿಂತನೆ ಮತ್ತು ಅನುಭವಗಳಿಗೆ ಅಭಿವ್ಯಕ್ತಿಸಿದ ಕಾಲವದು. ದಾಸೋಹ, ದಯೇಯ ಧರ್ಮ ಮುಂತಾದ ಜೀವಪರ ಚಿಂತನೆಗಳೇ ಅವರ ಪರಮ ಧ್ಯೇಯವಾಗಿತ್ತು. ಅದೊಂದು ಸಂಘಟನಾತ್ಮಕ ಪರಿಸರವಾಗಿದ್ದು, ಸಾಮಾಜಿಕ ವ್ಯವಸ್ಥೆ, ಧರ್ಮ, ದೇವರುಗಳ ಕುರಿತು ಅವರು ನಡೆಸಿದ ಸಂವಾದ, ಮರುಶೊಧನೆಗಳು ಇಂದಿಗೂ ಪ್ರಸ್ತುತವೆನಿಸಿದೆ. ತಮ್ಮ ಬದುಕಿನ ಅನುಭವಗಳ ಮಖೇನ ಉದ್ದಕ್ಕೂ ಸಾಮಾಜಿಕ ಸಂಗತಿಗಳಿಗೆ ಮುಖಾಮುಖಿಯಾಗುತ್ತಾ ಸಾಗಿರುತ್ತಾರೆ. ಅವರಲ್ಲಿ ನುಡಿ ಮತ್ತು ನಡೆಯಲ್ಲಿ ಭಿನ್ನತೆಗಳಿರದೇ ಅಭಿನ್ನವಾಗಿದ್ದು ಅಂತಹ ವ್ಯಕ್ತಿತ್ವವನ್ನು ಸಾಮಾಜದಿಂದ ಅವರು ನಿರೀಕ್ಷಿಸುತ್ತಿದ್ದರು. ಶೀಲ, ಪ್ರಾಮಾಣಿಕತೆ, ವೃತ್ತಿಗಳ ಮೂಲಕವೇ ತಮ್ಮ ಆಸ್ಮಿತೆಯನ್ನು ಕಂಡುಕೊಂಡವರು ವಚನಕಾರರು. ಮತ್ತೆ ಕಲ್ಯಾಣಕ್ಕೆ ಎಂಬ ಪರಿಕಲ್ಪನೆ ಒಂದು ರೂಪಕ. ಇಂದು ನಾವು ಅಂದಿನ ವೈಚಾರಿಕತೆಯೊಂದಿಗೆ ಲಿಂಗ ,ಜಾತಿ ವರ್ಗ ಧರ್ಮದ ನೆಲೆಯಲ್ಲಿ ಸಾಮರಸ್ಯವನ್ನು ಕಂಡುಕೊಳ್ಳಬೇಕಾದ ಅಗತ್ಯ ಅತಿ ಮುಖ್ಯ ಎಂದರು.

    ನಿವೃತ್ತ ಪ್ರಾಧ್ಯಾಪಕರಾದ ಡಾ.ಹಯವದನ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ರೇಖಾ ಬನ್ನಾಡಿ ಸ್ವಾಗತಿಸಿದರು.ಕನ್ನಡ ಉಪನ್ಯಾಸಕರಾದ ಪ್ರೊ.ಗಣಪತಿ ಭಟ್ ವಂದಿಸಿದರು. ವಿದ್ಯಾರ್ಥಿನಿ ಕೀರ್ತಿ ಎಸ್. ಕಾರ್ಯಕ್ರಮ ನಿರ್ವಹಿಸಿದರು. ವಿಧ್ಯಾರ್ಥಿ ನಿಖಿಲ್ ಎ.ಎಂ ತೃತೀಯ ಬಿ.ಎಸ್.ಸಿ ಮತ್ತು ಬಳಗವು ವಿವಿಧ ವಚನಕಾರರ ವಚನಗಳನ್ನು ಪ್ರಸ್ತುತಪಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    15 − 13 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.