Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವವಾಹಿನಿ: ಗೋವಿಂದ ಬಾಬು ಪೂಜಾರಿ ಅವರಿಗೆ ಯುವ ಸಾಧನಾ ಪುರಸ್ಕಾರ
    ಊರ್ಮನೆ ಸಮಾಚಾರ

    ಯುವವಾಹಿನಿ: ಗೋವಿಂದ ಬಾಬು ಪೂಜಾರಿ ಅವರಿಗೆ ಯುವ ಸಾಧನಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಯುವವಾಹಿನಿ ರಿ. ಮಂಗಳೂರು ಇದರ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಎದುರು ಭಾನುವಾರ ಜರುಗಿದ 32ನೇ ವಾರ್ಷಿಕ ಸಮಾವೇಶದಲ್ಲಿ ಯಶಸ್ವಿ ಉದ್ಯಮಿ ಹಾಗೂ ಸಾಧಕ ಗೋವಿಂದ ಬಾಬು ಪೂಜಾರಿ ಅವರಿಗೆ ‘ಯುವ ಸಾಧನಾ’ ಪುರಸ್ಕಾರ ಪ್ರದಾನ ಮಾಡಲಾಯಿತು.

    Click Here

    Call us

    Click Here

    ಪುತ್ತೂರು ಉಪವಿಭಾಗ ಸಹಾಯಕ ಕಮಿಷನರ್ ಹೆಚ್. ಕೆ. ಕೃಷ್ಣಮೂರ್ತಿ, ರಾಜ್ಯದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ, ಆರ್ಥಿಕ ಹಾಗೂ ಶಿಕ್ಷಣ ತಜ್ಞ ಸಿ. ಕೆ. ಅಂಚನ್, ಚಲನಚಿತ್ರ ನಿರ್ಮಾಪಕ, ನಟ ಡಾ. ರಾಜಶೇಖರ್ ಕೋಟ್ಯಾನ್, ನಟಿ ನವ್ಯ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ರಿ. ಮಂಗಳೂರು ಇದರ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ೩೨ನೇ ವಾರ್ಷಿಕ ಸಮಾವೇಶದ ಸಂಚಾಲಕ ನಾರಾಯಣ ಪೂಜಾರಿ ಕುರಿಕ್ಕಾರು, ಯುವವಾಹಿನಿಯ ವಿವಿಧ ಘಟಕಗಳು ಪದಾಧಿಕಾರಿಗಳು ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

    ಮಣಿಪಾಲದ ಉದಯ ಸಮೂಹ ಸಂಸ್ಥೆಗಳ ಪ್ರವರ್ತಕ ರಮೇಶ್ ಎ. ಬಂಗೇರ ಅವರಿಗೆ ಸಾಧನಾಶ್ರೀ ಪ್ರಶಸ್ತಿ, ಗುರುದೇವಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಶ್ರೇಷ್ಠ ಪ್ರಶಸ್ತಿ ಹಾಗೂ ಸಾಧಕ ಗೋವಿಂದ ಪೂಜಾರಿ, ಪ್ರಕಾಶ್ ಅಂಚನ್ ಅವರಿಗೆ ಯುವ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಸಾಧಕ ಗೋವಿಂದ ಬಾಬು ಪೂಜಾರಿ:
    ಗೋವಿಂದ ಬಾಬು ಪೂಜಾರಿ ಅವರು 2008ರಲ್ಲಿ ಮುಂಬೈಯಲ್ಲಿ ಶೆಫ್‌ಟಾಕ್ ಕೇಟರಿಂಗ್ ಸರ್ವಿಸಸ್ ಆರಂಭಿಸಿದ್ದರು. 2015ರಲ್ಲಿ ಅದನ್ನು ಶೆಫ್‌ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಪೈವೆಟ್ ಲಿಮಿಟೆಡ್ ಆಗಿ ಪರಿವರ್ತಿಸಿದರು. ಈಗ ಪೂನಾ, ಹೈದರಾಬಾದ್, ಬೆಂಗಳೂರು, ಛತ್ತಿಸ್‌ಗಡ ಹಾಗೂ ತಿರುಪತಿಯಲ್ಲಿ ಇದೇ ಉದ್ಯಮ ವಿಸ್ತರಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳಲ್ಲಿ ಕರ್ನಾಟಕ ಸರಕಾರದ ಹಸಿವು ಮುಕ್ತ ಯೋಜನೆ ಜಾರಿಗೊಳಿಸಿ ಇಂದಿರಾ ಕ್ಯಾಂಟಿನ್ ಆರಂಭಿಸಿದಾಗ ಶೆಫ್‌ಟಾಕ್ ಅದರ ನಿರ್ವಹಣೆ ಹೊಣೆ ಹೊತ್ತು ಸಾವಿರಾರು ಮಂದಿಗೆ ಆಹಾರ ಒದಗಿಸುತ್ತಿದೆ.

    ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ತಮ್ಮ ಉದ್ಯಮದ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವಾಗುತ್ತಿದ್ದಾರೆ.

    Click here

    Click here

    Click here

    Click Here

    Call us

    Call us

    ಅವರ ಕಂಪೆನಿಗೆ ಇತ್ತಿಚಿಗೆ ಮುಂಬೈನ ಬಿಲ್ಲವ ಚೆಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಉದ್ಯಮ ಸಮಾವೇಶಲ್ಲಿ ’ಉದ್ಯಮ ಶ್ರೇಷ್ಠತಾ ಪ್ರಶಸ್ತಿ’, ೨೦೧೬ನೇ ಸಾಲಿನಲ್ಲಿ ಆಲ್ ಇಂಡಿಯ ಅಚೀವರ್ಸ್ ಫೌಂಡೇಶನ್‌ನಿಂದ ಶೆಫ್‌ಟಾಕ್ ಹಾಗೂ ಆಡಳಿತ ನಿರ್ದೇಶಕ ಗೋವಿಂದ ಪೂಜಾರಿ ಅವರಿಗೆ ’ನಾಯಕತ್ವ ಹಾಗೂ ಕ್ಷಿಪ್ರ ಬೆಳವಣಿಗೆಯ ಕಂಪೆನಿ’ ಪ್ರಶಸ್ತಿ, ಆಹಾರೋದ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ದೊರೆತಿವೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.