ಸರಳ ರಾಜಕಾರಣಿಗೆ ಕೋಟಗೆ ಒಲಿದ ಕ್ಯಾಬಿನೆಟ್ ಮಂತ್ರಿ ಪದವಿ

Call us

Call us

Call us

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ.
ಕುಂದಾಪುರ: ರಾಜ್ಯ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿಮಂಡಲದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸ್ಥಾನ ದೊರೆತಿದ್ದು, ಅವರು ಇಂದು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Call us

Click Here

ಅವರು ಈ ಹಿಂದೆ ಬಿಜೆಪಿ ಸರಕಾರದ ಕೊನೆಯ ಅವಧಿಯಲ್ಲಿ ಮುಜರಾಯಿ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. 2015ರಲ್ಲಿ ವಿಧಾನ ಪರಿಷತ್ಗೆ ಪಂಚಾಯತ್ ಪ್ರತಿನಿಧಿಯಾಗಿ ಬಿಜೆಪಿ ಪಕ್ಷದಿಂದ ಸ್ವರ್ಧಿಸಿ ಆಯ್ಕೆಯಾಗಿದ್ದ, ಅವರು 2018ರ ಜೂನ್ ತಿಂಗಳಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದರು.

ರಾಜಕಾರಣದಲ್ಲಿ ಸರಳ, ಸಜ್ಜನಿಕೆಗೆ ಅನ್ವರ್ಥ ಎಂಬಂತೆ ತನ್ನನ್ನು ತೊಡಗಿಕೊಂಡು ಎಲ್ಲರೊಂದಿಗೂ ಬೆರತು ವಿಶ್ವಾಸ ಹಾಗೂ ಘನತೆಯನ್ನು ಉಳಿಸಿಕೊಂಡ ಅಪರೂಪದ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ. ಒಬ್ಬ ಸಾಮಾನ್ಯ ಛಾಯಾಗ್ರಾಹಕನಾಗಿದ್ದ ವ್ಯಕ್ತಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್ಗೆ ಆಯ್ಕೆಯಾಗಿ, ಮುಜರಾಯಿ ಮಂತ್ರಿಯೂ ಆದ ಪರಿ ಅಚ್ಚರಿ ಮೂಡಿಸುವಂತದ್ದು. ತನ್ನ ಸ್ಪಷ್ಟವಾದ ಮಾತು, ಒಲವು ನಿಲುವುಗಳಿಂದಲೇ ಸಾಧನೆಯ ಉತ್ತುಂಗಕ್ಕೇರಿ, ಬಿಜೆಪಿ ಪಕ್ಷದಲ್ಲಿಯೂ ಪ್ರಭಾವಿ ನಾಯಕನಾಗಿ ಬೆಳೆದರೂ ಜನಸಾಮಾನ್ಯನಿಗೂ ಸುಲಭವಾಗಿ ದೊರಕುವ ಅವರ ಸರಳ ವ್ಯಕ್ತಿತ್ವ ಇಂದಿಗೂ ಬದಲಾಗಿಲ್ಲ.

ಮೂರ್ತೆದಾರರ ಹೋರಾಟದಲ್ಲಿ ರಾಜ್ಯದ ಗಮನ ಸೆಳೆದಿದ್ದ ಕೋಟ ಶ್ರೀನಿವಾಸ ಪೂಜಾರಿ, 1993ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದರು. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತೊಡಗಿಕೊಂಡಿರುವಾಗಲೇ 1996ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದರು. ಮುಂದೆ 2006ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆರಿಸಿ ಬಂದರು. 2008ರಲ್ಲಿ ನಡೆದ ಉಪಚುನಾವಣೆಯಲ್ಲಿ ವಿಧಾನಪರಿಷತ್ಗೆ ಆಯ್ಕೆಯಾದ ಅವರು 2010ರಲ್ಲಿಯೂ ಮತ್ತೆ ಅವಿರೋಧ ಆಯ್ಕೆಕಂಡರು. ರಾಜ್ಯದಲ್ಲಿ ಬಿಜೆಪಿ ಸರಕಾರದ ಕೊನೆಯ ಅವಧಿಯಲ್ಲಿ ಮುಜರಾಯಿ ಮಂತ್ರಿಯಾಗುವ ಅವಕಾಶ ಶ್ರೀನಿವಾಸ ಪೂಜಾರರಿಗೆ ಬಯಸದೆಯೇ ದೊರೆಕಿತ್ತಾದರೂ ಅದನ್ನು ಸಮರ್ಥವಾಗಿಯೇ ಬಳಸಿಕೊಂಡ ಅವರು ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನಕ್ಕೆ ಗರಿಷ್ಠ ಅನುದಾನ ನೀಡಿದ್ದರು. (ಕುಂದಾಪ್ರ ಡಾಟ್ ಕಾಂ) ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನಲಂಕರಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಸದ್ಯ ಹಿಂದೂಳಿದ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತ ಅವರ ಆಳವಾದ ಅರಿವು, ಅಧ್ಯಯನ ಹಾಗೂ ಗಟ್ಟಿಧ್ವನಿ ಇಡೀ ವ್ಯವಸ್ಥೆಗೆ ಒಂದಿಷ್ಟು ಬಲ ನೀಡಿದೆ.

ಶ್ರೀನಿವಾಸ ಪೂಜಾರರು ಒಬ್ಬ ಸೃಜನಶೀಲ ರಾಜಕಾರಣಿ ಎಂಬುದರಲ್ಲಿ ಎರಡು ಮಾತಿಲ್ಲ. ಆರಂಭದಲ್ಲಿ ಫೋಟೋಗ್ರಫಿಯನ್ನು ವೃತ್ತಿಯನ್ನಾಗಿಸಿಕೊಂಡ ಅವರು ಬರವಣಿಗೆಯಲ್ಲಿಯೂ ಸಿದ್ಧಹಸ್ತರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಕಾರರಾಗಿ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಕಮಲ ಎಂಬ ಪಂಚಾಯತ್ ರಾಜ್ ವ್ಯವಸ್ಥೆಯ ಬಗೆಗೆ ಮಾಸ ಪತ್ರಿಕೆಯೊಂದನ್ನು ಆರಂಭಿಸಿ ಅದರ ಸಂಪಾದಕರಾಗಿದ್ದಾರೆ. ಎಂತವರನ್ನೂ ಸೆಳೆಯಬಲ್ಲ ಮಾತಿನ ವರಸೆ ಪೂಜಾರಿಯವರಿಗೆ ಸುಲಭವಾಗಿ ಸಿದ್ಧಿಸಿದೆ. ಡಾ. ಶಿವರಾಮ ಕಾರಂತರ ಅಭಿಮಾನಿಯಾಗಿ ತನ್ನ ಹುಟ್ಟೂರಿನಲ್ಲಿ ಕಾರಂತ ಭವನ ನಿರ್ಮಾಣ, ಕಾರಂತ ಹುಟ್ಟೂರ ಪ್ರಶಸ್ತಿ ಸೇರಿದಂತೆ ಅವರ ನೆನಪನ್ನು ಕೋಟದಲ್ಲಿ ಚಿರಸ್ಥಾಯಿಯಾಗಿಸಿದ ಕೀರ್ತಿಯಲ್ಲಿ ಇವರದ್ದು ದೊಡ್ಡ ಪಾಲಿದೆ.

Click here

Click here

Click here

Click Here

Call us

Call us

Leave a Reply