Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ.ಪೂ. ಕಾಲೇಜು ಎನ್.ಎಸ್.ಎಸ್ ಘಟಕಗಳಿಂದ ನೆರೆಪರಿಹಾರ ನಿಧಿಗೆ ದೇಣಿಗೆ ಹಸ್ತಾಂತರ
    ಉಡುಪಿ ಜಿಲ್ಲೆ

    ಪ.ಪೂ. ಕಾಲೇಜು ಎನ್.ಎಸ್.ಎಸ್ ಘಟಕಗಳಿಂದ ನೆರೆಪರಿಹಾರ ನಿಧಿಗೆ ದೇಣಿಗೆ ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ರಾಜ್ಯಾದ್ಯಂತ ದೊಡ್ಡ ಸಂಕಷ್ಟ ತಂದೊಡ್ಡಿದ್ದ ಈ ವರ್ಷದ ಭಾರಿ ಮಳೆಯಿಂದ ಉಂಟಾದ ನೆರೆಯು ಹಲವಾರು ಕುಟುಂಬಗಳನ್ನು ಬೀದಿಗೆ ತಂದು ಲಕ್ಷಾಂತರ ಮಂದಿಯ ಬದುಕನ್ನೇ ಆಪೋಷನ ಮಾಡಿದ್ದು, ಈ ಸಂದರ್ಭದಲ್ಲಿ ತಮ್ಮಿಂದಾದ ಸಹಕಾರ ನೀಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಸಲುವಾಗಿ ಮತ್ತು ದುಃಖದಲ್ಲಿರುವವರ ಕಣ್ಣೀರೊರೆಸುವ ಕೆಲಸದಲ್ಲಿ ಅಳಿಲಸೇವೆ ಮಾಡುವುದಕ್ಕಾಗಿ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿನ ಎನ್.ಎಸ್.ಎಸ್ ಘಟಕಗಳು ಒಟ್ಟಾಗಿ ಕಾರ್ಯೋನ್ಮುಖರಾದರು.

    Click Here

    Call us

    Click Here

    ಸ್ವಯಂಸೇವಕರು ತಮ್ಮಿಂದಾದ ಸಹಾಯ ಮಾಡೋಣವೆಂದು ಪಣತೊಟ್ಟಿದ್ದರು. ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಅಗತ್ಯ ವಸ್ತುಗಳನ್ನು ಪೂರೈಸಿದರೆ, ಇನ್ನು ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ನೆರೆಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಿದರು. ಮಂಗಳವಾರ ಸಾಂಕೇತಿಕವಾಗಿ ೨,೦೮,೭೪೩-೦೦ ರೂ. ಮೌಲ್ಯದ ಡಿಮಾಂಡ್ ಡ್ರಾಫ್ಟ್‌ನ್ನು ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಬ್ರಮ್ಮಣ್ಯ ಜೋಶಿಯವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎಡಿಸಿಯವರಿಗೆ ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳ ಉಡುಪಿ ಜಿಲ್ಲಾ ಎನ್.ಎಸ್.ಎಸ್ ಅಧಿಕಾರಿ ಸವಿತಾ ಎರ್ಮಾಳ್, ವಿವಿಧ ಕಾಲೇಜುಗಳ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು, ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

    ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಎನ್.ಎಸ್.ಎಸ್ ಘಟಕಗಳ ವತಿಯಿಂದ ಎರಡು ಲಾರಿಗಳಲ್ಲಿ ಅಗತ್ಯ ವಸ್ತುಗಳಲ್ಲದೆ ಈವರೆಗೆ ಸುಮಾರು ನಾಲ್ಕುವರೆ ಲಕ್ಷ ರೂಪಾಯಿ ದೇಣಿಗೆಯನ್ನು ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಜಮೆ ಮಾಡಲಾಗಿದೆ.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ: ಜಿಲ್ಲಾಧಿಕಾರಿ ಸೂಚನೆ

    20/05/2026
    Leave A Reply Cancel Reply

    20 − 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.