ಶ್ರೀಮದ್ಭಗವದ್ಗೀತಾ ಭೋದನಾ ಕಾರ್ಯಕ್ರಮ: ಗುರುವಂದನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಹಾಗೂ ಶ್ರೀ ರಾಮಕ್ಷತ್ರಿಯ ಮಾತೃ ಮಂಡಳಿ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶ್ರೀಮದ್ಭಗವದ್ಗೀತಾ ಭೋದನಾ ಕಾರ್ಯಕ್ರಮದಲ್ಲಿ ಗೀತೆಯ ಬಗ್ಗೆ ಪ್ರವಚನ ನೀಡಿದ ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

Call us

Click Here

ಈ ಸಂದರ್ಭ ನಿವೃತ್ತ ಉಪನ್ಯಾಸಕ ಶೇಷಪ್ಪಯ್ಯ ಮಾಸ್ಟರ್ ಅವರು ಮಾತನಾಡಿದರು. ಬೈಂದೂರು ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಪರಮೇಶ್ವರ ಹೋಬಳಿದಾರ್, ಯುವಕ ಮಂಡಲದ ಅಧ್ಯಕ್ಷ ಗುರುರಾಜ್, ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಸಂಚಾಲಕ ರಾಮಕೃಷ್ಣ ಶೇರುಗಾರ್ ಬಿಜೂರು, ರಾಮಕ್ಷತ್ರಿಯ ಮಾತೃಮಂಡಳಿ ಗೌರವಾಧ್ಯಕ್ಷೆ ಸುಂದರಿ ಗಣಪತಿ, ಅಧ್ಯಕ್ಷೆ ವನಜಾ ಭಾಸ್ಕರ್ ಇದ್ದರು.

ಪ್ರತಿ ಶನಿವಾರ ಒಂದೊಂದು ಅಧ್ಯಾಯವನ್ನು ಭೋದಿಸಲಾಗುತ್ತಿದ್ದು, ೧೮ನೇ ಅಧ್ಯಾಯ ಮುಗಿದ ಬಳಿಕ ಗುರುವಂದನೆ ಸಲ್ಲಿಸಲಾಯಿತು. ಶಿಕ್ಷಕ ಮಂಜುನಾಥ ಸ್ವಾಗತಿಸಿ, ಶಿಕ್ಷಕಿ ಶ್ರೀದೇವಿ ಮಹಾಬಲೇಶ್ವರ್ ವಂದಿಸಿದರು. ಉಪನ್ಯಾಸಕ ಕೇಶವ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

 

Leave a Reply