Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಘಾತ ಜೀವ ರಕ್ಷಕ-ಪ್ರಥಮ ಚಿಕಿತ್ಸೆ ತರಬೇತಿ, ಕಾರ್ಯಾಗಾರ
    ಊರ್ಮನೆ ಸಮಾಚಾರ

    ಅಪಘಾತ ಜೀವ ರಕ್ಷಕ-ಪ್ರಥಮ ಚಿಕಿತ್ಸೆ ತರಬೇತಿ, ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕರ್ನಾಟಕ ಸರಕಾರ, ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯಡಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ರೋಟರಿ ಕ್ಲಬ್ ಬೈಂದೂರು ಹಾಗೂ ಸಿಐಟಿಯು ಬೈಂದೂರು ತಾಲೂಕು ಇವರ ಸಹಯೋಗದಲ್ಲಿ ಶನಿವಾರ ಬೈಂದೂರು ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಬೈಂದೂರು ಆಟೋರಿಕ್ಷಾ ಮತ್ತು ವಾಹನ ಚಾಲಕರಿಗೆ ಅಪಘಾತ ಜೀವ ರಕ್ಷಕ ಯೋಜನೆಯಡಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಸಮಾರಂಭವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್. ಜಯಕರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಆಟೋರಿಕ್ಷಾ ಮತ್ತು ಖಾಸಗಿ ವಾಣಿಜ್ಯ ವಾಹನ ಚಾಲಕರು ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ಮಂಡಳಿಯು ಜಾರಿಗೊಳಿಸುತ್ತಿರುವ ಅಪಘಾತ ಪರಿಹಾರದ ವಿವಿಧ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಪ್ರಯತ್ನ ಮಾಡಬೇಕು. ರಸ್ತೆ ಸಂಚಾರದಲ್ಲಿ ವಾಹನ ಅಪಘಾತವಾದ ಸಂದರ್ಭ ಆಟೋರಿಕ್ಷಾ ಮತ್ತು ವಾಹನ ಚಾಲಕರು ತುರ್ತು ನೆರವಿಗೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಜೀವಹಾನಿಯಾಗುವುದನ್ನು ತಪ್ಪಿಸುವ ಮಹತ್ತರ ಸಮಾಜ ಸೇವೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಬಾಲಕೃಷ್ಣ ಇವರು ಅಧ್ಯಕ್ಷೀಯ ಭಾಷಣದಲ್ಲಿ, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯು ಚಾಲನಾ ಪರವಾನಿಗೆ ಪಡೆದ ೨೦ ರಿಂದ ೭೦ ವರ್ಷಗಳ ವಯೋಮಿತಿಯ ಖಾಸಗಿ ಅಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಲಾರಿ ಮತ್ತು ಖಾಸಗಿ ಬಸ್ಸ್ ವಾಹನ ಚಾಲಕರಿಗೆ ಮಾತ್ರ ಅನ್ವಯಿಸುತ್ತದೆ. ಯೋಜನೆಯಡಿ ಫಲಾನುಭವಿಯು ಪ್ರೀಮಿಯಂ ಪಾವತಿಸಬೇಕಾಗಿಲ್ಲ. ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಸರಕಾರವೇ ಪೂರ್ಣವಾಗಿ ಪ್ರೀಮಿಯಂ ಮೊತ್ತವನ್ನು ಪಾವತಿಸಲಿದೆ ಎಂದು ಹೇಳಿದರು. ಅಪಘಾತದಿಂದ ಚಾಲಕನು ಪ್ರಾಣಾಪಯಕ್ಕೆ ತುತ್ತಾದಾಗ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದಾಗ, ಅಂಗಾಂಗಗಳು ಹಾನಿಗೊಳಗಾದಾಗ, ಚಾಲಕರು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಅಪಘಾತಕ್ಕೀಡಾಗಿ ಮರಣ ಹೊಂದಿದಲ್ಲಿ ಅಥವಾ ಶಾಶ್ವತ/ತಾತ್ಕಾಲಿಕ ದುರ್ಬಲತೆ ಹೊಂದಿದಾಗ ಯೋಜನೆಯ ಸೌಲಭ್ಯ ಲಭ್ಯವಾಗುತ್ತದೆ. ವಿಮಾ ಮೊತ್ತ ಗರಿಷ್ಟ ರೂಪಾಯಿ ೨ ಲಕ್ಷಗಳ ವರೆಗೆ ಲಭ್ಯವಾಗುತ್ತದೆ. ಈ ಸೌಲಭ್ಯಗಳನ್ನು ಪಡೆಯಲು ಚಾಲಕ ಬಂಧುಗಳು ಮುಂದಾಗಬೇಕು ಎಂದು ಕರೆ ನೀಡಿದರು.

    ಪ್ರಥಮ ಚಿಕಿತ್ಸೆ ಜಿಲ್ಲಾ ತರಬೇತುದಾರರಾದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪ್ರೇಮಾನಂದ ಮತ್ತು ಡಾ. ಕೀರ್ತಿ ಪಾಲನ್ ಸಂಪನ್ಮೂಲ ವ್ಯಕ್ತಿಗಳಾಗಿ ಚಾಲಕರಿಗೆ ಪ್ರಥಮ ಚಿಕಿತ್ಸೆಯ ಪ್ರಾತ್ಯಕ್ಷತೆ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ ಭಟ್ ಉಪ್ಪುಂದ, ಕಾರ್ಯದರ್ಶಿ ಮಂಜುನಾಥ ಮಹಾಲೆ, ಕಾರ್ಮಿಕ ಸಂಘಗಳ ಒಕ್ಕೂಟ ಸಿಐಟಿಯು ಬೈಂದೂರು ತಾಲೂಕು ಸಂಚಾಲಕ ಉದಯ ಗಾಣಿಗ ಮೊಗೇರಿ, ರಾಜೀವ ಪಡುಕೋಣೆ, ಗಣೇಶ ತೊಂಡೆಮಕ್ಕಿ, ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ಡಿ. ಎಸ್. ಸತ್ಯನಾರಾಯಣ, ಉಡುಪಿ ವೃತ್ತ ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್, ಪ್ರವೀಣ ಕುಮಾರ್ ವೇದಿಕೆಯಲ್ಲಿದ್ದರು.

    Click here

    Click here

    Click here

    Call us

    Call us

    ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ಮುಖಂಡರಾದ ಮಂಜುನಾಥ ಪಡುವರಿ, ಸಂತೋಷನಾಯ್ಕನಕಟ್ಟೆ, ಅಮ್ಮಯ್ಯ ಪೂಜಾರಿ ಬಿಜೂರು,ನಾಗರತ್ನ ನಾಡ, ಜಟ್ಟ ಪೂಜಾರಿ ಯಡ್ತರೆ, ವಿಜಯ ಕೋಯಾನಗರ, ಸರಸ್ವತಿ, ಕಾರ್ಮಿಕ ಇಲಾಖೆಯ ಶಿವಪ್ರಸಾದ್, ಸ್ಟೇನಿ ಸಹನಾ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ್ದರು. ಗೋಪಾಲ ಪಡುವರಿ ಸ್ವಾಗತ ಗೀತೆ ಹಾಡಿದರು ಕೋಣಿ ವೆಂಕಟೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d