Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕತಾರ್‌ನಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು
    ವಿಶೇಷ ವರದಿ

    ಕತಾರ್‌ನಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು

    Updated:07/09/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ/ಕತಾರ್: ಎಲ್ಲಾದರೂ ಇರು. ಎಂತಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕವಿವಾಣಿಯಂತೆ ಉದ್ಯೋಗಕ್ಕಾಗಿ ತಾನು ನೆಲೆನಿಂತ ದೇಶದಲ್ಲಿಯೇ ಕನ್ನಡದ ಕಂಪನ್ನ ಪಸರಿಸುತ್ತಾ, ಹೊರದೇಶದ ಕನ್ನಡಿಗರಲ್ಲಿನ ಭಾಷಾಭಿಮಾನವನ್ನು ಹುರಿದುಂಬಿಸುತ್ತಾ ಕನ್ನಡದ ಕಟ್ಟಾಳುವಾಗಿ ಬೆಳೆದಿದ್ದಾರೆ ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು.

    Click Here

    Call us

    Click Here

    ಕಳೆದ 13 ವರ್ಷಗಳಿಂದ ಇಂಜಿನಿಯರ್ ಆಗಿ ಕತಾರಿನಲ್ಲಿ ನೆಲೆಸಿರುವ ಅವರು ಪ್ರಸ್ತುತ ಇಂಡಿಯನ್ ಕಮ್ಯುನಿಟಿಬೆ ನ್ವೆಲೆಂಟ್ (ಐ.ಸಿ.ಬಿ.ಎಫ್) ಫೋರಂ ಜಾಯಿಂಟ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಾದ್ದಾರೆ.

    ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ದಂಪತಿ ಪುತ್ರರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಮಯ್ಯಾಡಿಯ ಧ.ಮ.ಹಿ.ಪ್ರಾ ಶಾಲೆಯಲ್ಲಿಯೂ, ಪ್ರೌಢ ಶಿಕ್ಷಣವನ್ನು ದಾವಣಗೆರೆ ಬಾಪೂಜಿ ಫ್ರೌಢಶಾಲೆಯಲ್ಲಿಯೂ ಬಳಿಕ ದಾವಣಗೆರೆಯಲ್ಲಿಯೇ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

    ಅವರು ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಮೇಲುಸ್ತುವಾರಿ ಅಭಿಯಂತರಾಗಿ ಸೇವೆಸಲ್ಲಿಸಿ ಬಳಿಕ ಪ್ರಸ್ತುತ ಕತಾರ್ ನ ಗಲ್ಪಾರ್ಆಲ್ಮಿಸ್ನಾದ್ ಕಂಪನಿಯಲ್ಲಿಅಭಿಯಂತರಾಗಿ ಸೇವೆಸಲ್ಲಿಸುತ್ತಿದ್ದಾರೆ.

    Click here

    Click here

    Click here

    Call us

    Call us

    ಕತಾರಿನಲ್ಲಿ ಕನ್ನಡ ಸಿನೆಮಾ ಪ್ರದರ್ಶಕ:
    ಕನ್ನಡದ ಸಿನಿಮಾಗಳಾದ ‘ಒಂದು ಮೊಟ್ಟೆಯ ಕಥೆ, ‘ಕಾಫಿತೋಟ’, ಕೋಟಿಗೊಬ್ಬ-2, ‘ಹೆಬ್ಬುಲಿ’, ‘ಕಿರಿಕ್ ಪಾರ್ಟಿ’, ‘ದೊಡ್ಮನೆ ಹುಡ್ಗ’, ‘ಚೌಕ’, ‘ರಾಜಕುಮಾರ’, ‘ಮಾಸ್ಲೀಡರ್’, ‘ರಂಗಿತರಂಗ’, ‘ರುಸ್ತುಂ’, ‘ಒಂದಲ್ಲಾ ಎರಡಲ್ಲಾ’, ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’, ‘ನಟ ಸಾರ್ವಭೌಮ’, ‘ಬೆಲ್ ಬಾಟಮ್’, ಗಿರ್ ಗಿಟ್ (ತುಳು ಸಿನಿಮಾ) ಸೇರಿದಂತೆ ಅನೇಕ ಚಿತ್ರಗಳು ಕತಾರಿನಲ್ಲಿ ತೆರೆಕಾಣುವಂತೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕತಾರ್ ನಲ್ಲಿ ಶಿವರಾಜ್ ಕುಮಾರ್ ಅವರ ‘ಮಾಸ್ ಲೀಡರ್’ ಚಿತ್ರದ ‘ದೀಪವೇ ನಿನ್ನ ಕಣ್ಣು’ ಹಾಡಿನ ಚಿತ್ರೀಕರಣದ ಸಂಪೂರ್ಣ ಜವಾಬ್ದಾರಿ ವಹಿಸಿದರು. ಈ ಹಾಡು ಕತಾರ್ ನ ಪ್ರವಾಸೋದ್ಯಮ ಇಲಾಖೆಯ ಮತ್ತು ಭಾರತೀಯ ದೂತವಾಸ ಕೇಂದ್ರದ ಪ್ರಶಂಸೆಗೆ ಭಾಜನವಾಗಿದೆ.

    ಕರ್ನಾಟಕ ಚಲನಚಿತ್ರ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವು ದಿಗ್ಗಜರನ್ನು ಕತಾರಿಗೆ ಆಹ್ವಾನಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಹಾಗೂ ಗೌರವಿಸುವುದರಲ್ಲಿ ಪ್ರಮುಖಪಾತ್ರ ನಿರ್ವಹಿಸಿದ್ದಾರೆ.

    ಈ ವರ್ಷ ಕತಾರ್’ನಲ್ಲಿ ನಡೆದ ಸೈಮಾ ಅವಾರ್ಡ್ ನಲ್ಲಿ ಕನ್ನಡದ ಕಲಾವಿದರು ಮತ್ತು ತಂತ್ರಜ್ಞರೊಂದಿಗೆ ಬೆರೆತು, ಅವರ ಯೋಗಕ್ಷೇಮವನ್ನು ವಿಚಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರೀಯ:
    ಹೀಗೆ ನಾಟಕ, ಸಾಂಸ್ಕ್ರತಿಕ ಕಾರ್ಯಕ್ರಮ, ಶೈಕ್ಷಣಿಕ ಹಾಗೂ ಮನೋರಂಜನಾ ಕಾರ್ಯಕ್ರಮದ ಆಯೋಜನೆ, ವಿವಿಧ ಸಂಘ ಸಂಸ್ಥೆಗಳ ಸಮನ್ವಯತೆಯೊಂದಿಗೆ ಕಾರ್ಯಕ್ರಮ ಪ್ರಸ್ತುತಿ, ಕತಾರ್ ಚಲನಚಿತ್ರ ಬಿಡುಗಡೆ ಸೇರಿದಂತೆ ವಿವಿಧ ಗಣ್ಯರ ಕಾರ್ಯಕ್ರಮದ ಪ್ರಮುಖ ಉಸ್ತುವಾರಿ ವಹಿಸಿದ್ದಾರೆ.

    ಬರೀ ಮನರಂಜನೆ ಕ್ಷೇತ್ರ ಮಾತ್ರವಲ್ಲದೇ ಸುಬ್ರಹ್ಮಣ್ಯ ಹೆಬ್ಬಾಗಿಲುರವರು, ತಮ್ಮ ಸಂಘಟನೆಗಳ ಮೂಲಕ ಅನಿವಾಸಿ ಭಾರತೀಯರ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ತೊಂದರೆಯಲ್ಲಿ ಸಿಲುಕಿಕೊಂಡವರಿಗೆ ಆಹಾರ, ವೈದ್ಯಕೀಯ ನೆರವು ಮುಂತಾದ ಸೌಲಭ್ಯವನ್ನು ಕಲ್ಪಿಸುತ್ತಿದ್ದಾರೆ.

     

    ಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸುಬ್ರಮಣ್ಯ ಹೆಬ್ಬಾಗಿಲು ಅವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ, ತುಳುಕೂಟ, ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಕತಾರ್ ಕರ್ನಾಟಕ ಪ್ರೆಂಡ್ಸ್ ಸದಸ್ಯರಾಗಿದ್ದಾರೆ.

    ವಿಶೇಷವೆಂದರೆ, ಇವರು ಕತಾರ್ ನಲ್ಲಿ ಸುಮಾರು 50 ಜನ ಕನ್ನಡಿಗರಿಗೆ ಕೆಲಸವನ್ನು ದೊರಕಿಸಿಕೊಟ್ಟಿದ್ದಾರೆ. ಕರ್ನಾಟಕ ಸರ್ಕಾರದಿಂದ ಗೌರವ ಧನ ಸಿಗುವಲ್ಲಿ ಪ್ರಮಾಣಿಕ ಪ್ರಯತ್ನ ನಡೆಸಿದ್ದಾರೆ. ದೇಶ-ವಿದೇಶಗಳಲ್ಲಿ ಹಲವಾರು ಸಾಧಕರನ್ನು ಇವರು ಭೇಟಿ ಮಾಡಿದ್ದು, ಇವರ ಪ್ರೀತಿಗೆ ಪಾತ್ರರಾಗಿದ್ದಾರೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅವರ ಮೆಚ್ಚುಗೆ ಗಳಿಸಿರುವುದು ವಿಶೇಷ.

     

    ಕೇರಳ ಮತ್ತು ಕೂರ್ಗ್’ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ರೂ 15 ಲಕ್ಷ ಹಣವನ್ನು ಇಂಡಿಯನ್ ಕಮ್ಯೂನಿಟಿ ಬೆನೆವಲೆಂಟ್ ಫೋರಮ್’ನ ವತಿಯಿಂದ ಇವರು ಮತ್ತು ಇವರ ಸದಸ್ಯರು, ಪದಾಧಿಕಾರಿಗಳು ಸೇರಿಕೊಂಡು ಸಿ.ಎಂ ಫಂಡ್’ಗೆ ನೀಡಿದ್ದಾರೆ. ಇತ್ತಿಚೆಗಷ್ಟೇ ಬಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದು ಎಲ್ಲರಿಗೂ ತಿಳಿದೇ ಇದೆ. ಈ ಬಗ್ಗೆ ಸಿಎಂ ಯಡಿಯೂರಪ್ಪನವರೂ ಸಹ ಭೇಟಿಯಾಗಿ ನೆರೆ ಸಂತ್ರಸ್ತರ ನೆರವಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

    ಹೀಗೆ ಗ್ರಾಮೀಣ ಭಾಗದಲ್ಲಿ ಜನಿಸಿ ಕತಾರ್ ದೇಶದಲ್ಲಿ ಮಹತ್ವದ ಹುದ್ದೆ ಅಲಂಕರಿಸಿದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

    ತಾನು ಹುಟ್ಟಿದ ನೆಲದ ಭಾಷೆ ಮತ್ತು ಸಂಸ್ಕೃತಿಯ ಕಂಪನ್ನು ವಿದೇಶಿ ನೆಲದಲ್ಲಿ ಪಸಿರಿಸಿ ಸದಾ ಬೆಳಗುವಂತೆ ಮಾಡುತ್ತಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಕನ್ನಡಿಗರ ಮನವನ್ನು ಗೆದ್ದಿದ್ದಾರೆ. ಅವರ ಸೇವೆ ಈಗೆಯೇ ಮುಂದುವರಿಯಲಿ ಎಂಬದು ಎಲ್ಲರ ಆಶಯ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d