Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಘಟನೆಯಲ್ಲಿ ಹೊಂದಾಣಿಕೆಯಿಂದ ಗುರಿ ಸಾಧನೆ: ರಘುರಾಮ ದೇವಾಡಿಗ
    ಊರ್ಮನೆ ಸಮಾಚಾರ

    ಸಂಘಟನೆಯಲ್ಲಿ ಹೊಂದಾಣಿಕೆಯಿಂದ ಗುರಿ ಸಾಧನೆ: ರಘುರಾಮ ದೇವಾಡಿಗ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ದೇವಾಡಿಗ ಸಮುದಾಯವು ದೀರ್ಘಕಾಲ ತುಳಿತಕ್ಕೆ ಒಳಗಾಗಿತ್ತು. ಶ್ರಮಪಟ್ಟು ಸಂಘಟಿತವಾಗಿ ಇದೀಗ ಸಮಾಜದ ಪ್ರಧಾನ ವಾಹಿನಿಗೆ ಸೇರಿಕೊಳ್ಳುತ್ತಿದೆ. ಅದನ್ನು ಇನ್ನಷ್ಟು ಉನ್ನತಿಗೊಯ್ಯಲು ಎಲ್ಲ ಹಂತಗಳಲ್ಲೂ ಅದು ಸಂಘಟಿತವಾಗಬೇಕು ಎಂದು ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕ ಆಲೂರು ರಘುರಾಮ ದೇವಾಡಿಗ ಹೇಳಿದರು.

    Click Here

    Call us

    Click Here

    ಮರವಂತೆ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮರವಂತೆ ದೇವಾಡಿಗ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ದೇವಾಡಿಗ ಸಮುದಾಯ ಸಂಘಟಿತವಾದರೆ ಮಹತ್ಸಾಧನೆ ಮಾಡಬಹುದು ಎನ್ನುವುದಕ್ಕೆ ಬಾರ್ಕೂರಿನಲ್ಲಿ ರೂ. ೯.೫ ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕುಲದೇವತೆ ಏಕನಾಥೇಶ್ವರಿ ದೇವಾಲಯವೇ ನಿದರ್ಶನ. ಸಮುದಾಯ ಮಕ್ಕಳ ಶಿಕ್ಷಣಕ್ಕೆ, ಪಾರಂಪರಿಕವಾಗಿ ಬಂದ ಕುಲಕಸುಬಿನ ಆಧುನೀಕರಣಕ್ಕೆ ಒತ್ತು ನೀಡಬೇಕು. ತಳಮಟ್ಟದ ಸಂಘಟನೆಗಳಲ್ಲಿ ಭೇದಭಾವಕ್ಕೆ ಎಡೆಕೊಡದೆ, ಹೊಂದಾಣಿಕೆಯ ಮೂಲಕ ಗುರಿ ಸಾಧಿಸಬೇಕು ಎಂದು ಅವರು ಹೇಳಿದರು.

    ದಿಕ್ಸೂಚಿ ಭಾಷಣ ಮಾಡಿದ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ದೇವಾಡಿಗ ಸಮುದಾಯ ತನ್ನ ಉನ್ನತ ಪರಂಪರೆ ಮತ್ತು ಸಮಾಜಕ್ಕೆ ನೀಡುತ್ತಬಂದ ಕೊಡುಗೆಗಳನ್ನು ಅರಿತುಕೊಂಡು ಅವುಗಳಿಂದ ಸ್ಫೂರ್ತಿಪಡೆಯಬೇಕು ಎಂದರು.

    ಸಂಘದ ಅಧ್ಯಕ್ಷ ಗಿರೀಶ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ದುಬೈ ಕದಂ ಸಂಘಟನೆಯ ಗೌರವಾಧ್ಯಕ್ಷ ಮರವಂತೆ ಶೀನ ದೇವಾಡಿಗ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

    ಧರ್ಮೇಂದ್ರ ದೇವಾಡಿಗ ಪ್ರಾರ್ಥನೆ ಹಾಡಿದರು. ಗೋಪಾಲ ದೇವಾಡಿಗ ಸ್ವಾಗತಿಸಿದರು. ಸುಬ್ಬಯ್ಯ ದೇವಾಡಿಗ ವಂದಿಸಿದರು. ಜ್ಯೋತಿ ದೇವಾಡಿಗ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಪಂಚಾಯಿತಿ ಸದಸ್ಯೆ, ಗೌರಿ ದೇವಾಡಿಗ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಮರವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆರ್. ಕೆ, ಗುಜ್ಜಾಡಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಉದ್ಯಮಿಗಳಾದ ರಮೇಶ ದೇವಾಡಿಗ, ಶ್ರೀಧರ ದೇವಾಡಿಗ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ ಹೆಬ್ಬಾರ್, ಗಂಗೊಳ್ಳಿ ಎಸ್‌ಐ ವಾಸಪ್ಪ ನಾಯ್ಕ್, ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ದೇವಾಡಿಗ ಬಿಜೂರು, ಕುಂದಾಪುರ ದೇವಾಡಿಗ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಸಂಘದ ಗೌರವಾಧ್ಯಕ್ಷ ನಾರಾಯಣ ದೇವಾಡಿಗ ಇದ್ದರು.

    ಹಿರಿಯ ವಾದನ ಕಲಾವಿದ ಶೇಷ ದೇವಾಡಿಗ ಹುಟ್ಟಿನಮನೆ ಅವರಿಗೆ ’ವರಾಹಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಭಾ ಕಾರ್ಯಕ್ರಮದ ಬಳಿಕ ದೇವಾಡಿಗ ಕಲಾವಿದರು ಯಕ್ಷಗಾನ ಪ್ರದರ್ಶಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four + 17 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.