Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶೈಕ್ಷಣಿಕ ಜಾಗೃತಿಯಿಂದ ಸಮಾಜ ಅಭಿವೃದ್ಧಿ
    ಊರ್ಮನೆ ಸಮಾಚಾರ

    ಶೈಕ್ಷಣಿಕ ಜಾಗೃತಿಯಿಂದ ಸಮಾಜ ಅಭಿವೃದ್ಧಿ

    Updated:18/09/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಂದಿನ ಕಾಲಘಟ್ಟದಲ್ಲಿ ಕೇವಲ ಬುದ್ದಿವಂತನಾದರೆ ಮಾತ್ರ ಸಾಲದು ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡಾ ವಿದ್ಯಾವಂತನಾಗಬೇಕು. ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಪ್ರಜ್ಞೆ, ಪ್ರಾಮಾಣಿಕತೆಯಿದ್ದರೆ ಮಾತ್ರ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

    Click Here

    Call us

    Click Here

    ಉಳ್ಳೂರು ಗ್ರಾಮದ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೈಂದೂರು ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವಕರ್ಮ ಸಮುದಾಯವು ಕಲೆ ಮತ್ತು ನಿರ್ಮಾಣ ಕೌಶಲ್ಯವನ್ನು ಪರಂಪರಾನುಗತವಾಗಿ ರೂಢಿಸಿಕೊಂಡು ಬಂದಿದೆ. ಎಲ್ಲ ವರ್ಗದ ಜನರಿಗೂ ಅನಿವಾರ್ಯವೆನಿಸಿದ ಕಾರಣದಿಂದ ಸಮಾಜದ ಪ್ರಧಾನ ಅಂಗಗಳಲ್ಲಿ ಒಂದಾಗಿರುವ ವಿಶ್ವಕರ್ಮ ಸಮುದಾಯ ಇನ್ನಷ್ಟು ಸಂಘಟಿತವಾಗಿ, ಅಭಿವೃದ್ಧಿ ಸಾಧಿಸಿ, ತನ್ನ ಹಿರಿಮೆ ಮೆರೆಯಬೇಕು ಎಂದ ಶಾಸಕರು, ವಿಶ್ವಕರ್ಮರು ತಮ್ಮ ಕುಲಕಸುಬನ್ನು ಅನುಸರಿಸುತ್ತಿರುವುದು ಒಳ್ಳೆಯದೆ. ಆದರೆ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯವಾಗುವುದರಿಂದ ಮಕ್ಕಳ ಶಿಕ್ಷಣವನ್ನು ಕಡೆಗಣಿಸದೆ ಸಮುದಾಯ ಹೊಂದಿರುವ ಸಾಮರ್ಥ್ಯದ ಸಂಪೂರ್ಣ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಯಾವುದೇ ಸಮಾಜ ಶೈಕ್ಷಣಿಕವಾಗಿ ಜಾಗೃತವಾದಾಗ ಮಾತ್ರ ಅಭಿವೃದ್ಧಿ ಸಾಧ್ಯವಿದೆ ಎಂದು ಸಲಹೆ ನೀಡಿದರು.

    ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರಿ ಅವರ ಅಧ್ಯಕ್ಷತೆವಹಿಸಿದ್ದರು. ಶಂಕರಪುರದ ಶಿಲ್ಪಿ ಬಿಳಿಯಾರು ಗಣಪತಿ ಆಚಾರ್ಯ ವಿಶ್ವಕರ್ಮ ಜಯಂತಿಯ ವಿಶೇಷ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಶ್ಯಾಮಲಾ ಕುಂದರ್, ಬೈಂದೂರು ತಾಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ಹೇರೂರು ಗ್ರಾಪಂ ಅಧ್ಯಕ್ಷೆ ಅಕ್ಕಯ್ಯ ಶೆಟ್ಟಿ, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಬಡಾಕೆರೆ ಮಂಜುನಾಥ ಆಚಾರ್ಯ, ಎರಡನೇ ಮೊಕ್ತೇಸರ ನೀರ‍್ಕೆರೆ ಬಾಬು ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಳಿ ಚಂದ್ರಯ್ಯ ಆಚಾರ್ಯ, ಬೈಂದೂರು ವಿಶ್ವಕರ್ಮ ಸಮಾಜ ಸೇವ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ ಉಪಸ್ಥಿತರಿದ್ದರು.

    ಕಳವಾಡಿ ಸಂಜೀವ ಆಚಾರ್ಯ ಸ್ವಾಗತಿಸಿ, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಳದ ಮೂರನೇ ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ ಪ್ರಾಸ್ತಾವಿಸಿದರು. ಕೊಡ್ಲಾಡಿ ಪ್ರಭಾಕರ ಆಚಾರ್ಯ ನಿರೂಪಿಸಿ, ಆಲೂರು ಶ್ರೀಧರ ಆಚಾರ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.