Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಎಸಿ ಎಸ್. ಎಸ್. ಮಧುಕೇಶ್ವರ್ ಮನೆ ಮೇಲೆ ಎಸಿಬಿ ದಾಳಿ
    ಊರ್ಮನೆ ಸಮಾಚಾರ

    ಕುಂದಾಪುರ ಎಸಿ ಎಸ್. ಎಸ್. ಮಧುಕೇಶ್ವರ್ ಮನೆ ಮೇಲೆ ಎಸಿಬಿ ದಾಳಿ

    Updated:19/09/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ, ಸೆ.19: ಕುಂದಾಪುರ ಕಂದಾಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗೆ ಎರಡು ದಿನದ ಹಿಂದೆ ಅಧಿಕಾರ ಹಸ್ತಾಂತರ ಮಾಡಿದ್ದ ಉಪವಿಭಾಗಾಧಿಕಾರಿ ಡಾ.ಎಸ್.ಎಸ್.ಮಧುಕೇಶ್ವರ ಮನೆಯ ಮೇಲೆ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    Click Here

    Call us

    Click Here

    ಕೆಎಎಸ್ ಶ್ರೇಣಿ ಅಧಿಕಾರಿಯಾಗಿದ್ದ ಮಧುಕೇಶ್ವರ ಮಂಗಳವಾರ ನೂತನ ಉಪವಿಭಾಗಾಧಿಕಾರಿಯಾಗಿ ಬಂದಿದ್ದ ಎ. ರಾಜು ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದರು. ಆಧಿಕಾರ ಹಸ್ತಾಂತರ ಮಾಡಿದ ಬಳಿಕವೂ ಉಪವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಮಿನಿ ವಿಧಾನಸೌಧಕ್ಕೆ ಸಮೀಪದಲ್ಲಿ ಇರುವ ಉಪವಿಭಾಗಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ವಿಲೆವಾರಿ ಮಾಡುತ್ತಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ತಂಡ ದಾಳಿ ನಡೆಸಿದೆ.

    ಎಸಿಬಿ ಡಿವೈಎಸ್‌ಪಿ ಮಂಜುನಾಥ ಕವರಿ ನೇತ್ರತ್ವದ ತಂಡ ನಡೆಸಿದ ದಾಳಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 24 ಅಧಿಕೃತ ಕಡತ ಹಾಗೂ 1.28 ಲಕ್ಷ ರೂ. ಆರಂಭದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಸಂಜೆಯವರೆಗೂ ಎಸಿಬಿ ತಂಡ ದಾಖಲೆಗಳ ಪರಿಶೀಲನೆ ಮುಂದುವರಿಸಿ ಸುಮಾರು 1,80,000 ಹಣವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

    ಈ ಹಿಂದೆಯೂ ಈ ಅಧಿಕಾರಿಯ ಮೇಲೆ ಭ್ರಷ್ಟಾಚಾರ ಆರೋಪಗಳ ಕುರಿತು ದೂರು ಅರ್ಜಿಗಳು ದಾಖಲಾಗಿತ್ತು. ಕುಂದಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಇಲಾಖೆ, ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಈ ಹಿಂದೆ ಲೋಕಾಯುಕ್ತ ಹಾಗೂ ಭ್ರಷ್ಟಾಚಾರ ನಿಗ್ರಹ ದಳಗಳು ದಾಳಿ ನಡೆಸಿರುವ ಸಾಕಷ್ಟು ಪ್ರಕರಣಗಳು ಇದ್ದರೂ, ಉಪವಿಭಾಗ ವ್ಯಾಪ್ತಿಯ ಅಧಿಕಾರ ಹೊಂದಿದ್ದ ಹಿರಿಯ ಶ್ರೇಣಿಯ ಕೆಎಎಸ್ ಆಧಿಕಾರಿಯ ಮನೆ ಮೇಲೆ ದಾಳಿ ನಡೆದಿರುವುದು ಇದೆ ಮೊದಲ ಬಾರಿ ಎನ್ನಲಾಗುತ್ತಿದೆ.

    Click here

    Click here

    Click here

    Click Here

    Call us

    Call us

    ಕಳೆದ ಆರು ತಿಂಗಳ ಹಿಂದೆ ಕುಂದಾಪುರಕ್ಕೆ ಎಸಿಯಾಗಿ ಬಂದಿದ್ದ ಡಾ.ಎಸ್.ಎಸ್.ಮಧುಕೇಶ್ವರ್ ವರ್ಗಾವಣೆಗೊಂಡಿದ್ದು, ನೂತನ ಎಸಿ ಕೆ.ರಾಜು ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರಿಸಿದ್ದರು. ಆದರೂ ಮಧುಕೇಶ್ವರ್ ಲ್ಯಾಂಡಿಗೆ ಸಂಬಂಧಿಸಿ ಪೈಲ್‌ಗಳ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ ಎನ್ನೋದು ಸಾರ್ವಜನಿಕರ ಪ್ರಶ್ನೆ. ಗುರುವಾರ ಮನೆಯಲ್ಲಿ ಫೈಲ್‌ಗಳಿಗೆ ಸಹಿ ಮಾಡಿ, ಸಂಜೆ ಬೆಂಗಳೂರಿಗೆ ಹೊರಡುವವರಿದ್ದರು ಮಧುಕೇಶ್ವರ್. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪೈಲ್‌ಗಳ ವಿಲೇವಾರಿ ಮಾಡಿ, ಬೆಂಗಳೂರು ಸೇರಿ ಬಚಾವಾಗಿತ್ತಿದ್ದರು. ಅಷ್ಟರಲ್ಲಿ ವಕೀಲರು ದೂರು ನೀಡಿದ್ದರಿಂದ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅದಲ್ಲದೆ ಹೆಮ್ಮಾಡಿ ಮೀನು ಸಂಷ್ಕರಣಾ ಘಟಕ ಅಮೋನಿಯ ಸೋರಿಕೆ ಹಿನ್ನೆಲೆಯಲ್ಲಿ ರಚಿಸಿದ ಸಮಿತಿಯಲ್ಲಿ ಎಸಿ ಮಧುಕೇಶ್ವರ್ ಮುಖ್ಯಸ್ಥರಾಗಿದ್ದು, ಮೀನು ಘಟಕದಿಂದ ಲಂಚ ಪಡೆದಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.