Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂತರರಾಷ್ಟ್ರೀಯ ಯೋಗೋತ್ಸವದಲ್ಲಿ ಚಿನ್ನ, ಬೆಳ್ಳಿ ಗೆದ್ದ ಮರವಂತೆಯ ಧನ್ವಿ ಪೂಜಾರಿ
    ಊರ್ಮನೆ ಸಮಾಚಾರ

    ಅಂತರರಾಷ್ಟ್ರೀಯ ಯೋಗೋತ್ಸವದಲ್ಲಿ ಚಿನ್ನ, ಬೆಳ್ಳಿ ಗೆದ್ದ ಮರವಂತೆಯ ಧನ್ವಿ ಪೂಜಾರಿ

    Updated:14/10/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಲೇಷ್ಯಾದ ಕೌಲಾಲಂಪುರದಲ್ಲಿರುವ ಎಸ್‌ಜಿಎಸ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ ಎಂಡ್ ರಿಸರ್ಚ್ ಸೆಂಟರ್‌ನಲ್ಲಿ ಅ. ೧೨, ೧೩ರಂದು ನಡೆದ ಟ್ರ್ಯಾಕ್ಸ್ ಇಂಟರ್‌ನ್ಯಾಶನಲ್ ಯೋಗ ಕಾರ್ನಿವಲ್‌ನಲ್ಲಿ ಮರವಂತೆಯ 11ರ ಹರೆಯದ ಚುರುಕಿನ ಬಾಲೆ ಧನ್ವಿ ಪೂಜಾರಿ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ವಿಕ್ರಮ ಮೆರೆದಿದ್ದಾಳೆ.

    Click Here

    Call us

    Click Here

    ಅಥ್ಲೆಟಿಕ್ ಯೋಗ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ.

    ಹತ್ತಾರು ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ, ಪ್ರಶಸ್ತಿ ಗಳಿಸಿರುವ ಧನ್ವಿ ಕಳೆದ ತಿಂಗಳ ೧೮ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್‌ನಲ್ಲಿ ನಡೆದ ಐದನೆಯ ರಾಷ್ಟ್ರೀಯ ಅಥ್ಲೆಟಿಕ್ಸ್ ಯೋಗಾಸನ ಸ್ಫರ್ಧೆಯ ೧೦-೧೨ ವಯೋವಿಭಾಗದಲ್ಲಿ ಅರ್ಹತಾ ಪತ್ರ ಗಳಿಸಿದ್ದಳು. ೨೪, ೨೫ರಂದು ಚೆನ್ನೈನಲ್ಲಿ ನಡೆದ ಜಾಗತಿಕ ಯೋಗೋತ್ಸವದಲ್ಲಿ ನಾಲ್ಕನೆಯ ಸ್ಥಾನ ಗಳಿಸುವುದರ ಜತೆಗೆ ಜಾಗತಿಕ ದಾಖಲೆ ಪ್ರಯತ್ನದಲ್ಲಿ ಒಂದೂವರೆ ನಿಮಿಷ ಕಾಲ ವೀರಭದ್ರಾಸನ ಪ್ರದರ್ಶಿಸಿ ಪ್ರಶಂಸಾಪತ್ರ ಗಿಟ್ಟಿಸಿದ್ದಳು. ಆ ಸಾಧನೆಗಳ ಆಧಾರದಲ್ಲಿ ಕೌಲಾಲಂಪುರ್ ಯೋಗೋತ್ಸವಕ್ಕೆ ಆಹ್ವಾನ ಪಡೆದಿದ್ದಳು. ಹಲವು ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ, ಅವರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚಲು ಕಾರಣರಾದ ನಾವುಂದದ ಯೋಗ ಶಿಕ್ಷಕ ಸುಬ್ಬಯ್ಯ ದೇವಾಡಿಗರಿಂದ ಯೋಗಾಭ್ಯಾಸ ಪಡೆಯುತ್ತಿರುವ ಧನ್ವಿ ಸುಮಾರು ೨೦ ಯೋಗಾಸನಗಳಲ್ಲಿ ಉತ್ಕೃಷ್ಟತೆ ಸಾಧಿಸಿಕೊಂಡಿದ್ದಾಳೆ.

    ತ್ರಾಸಿಯ ಡಾನ್ ಬೋಸ್ಕೊ ಶಾಲೆಯಲ್ಲಿ 6ನೆ ತರಗತಿಯಲ್ಲಿ ಕಲಿಯುತ್ತಿರುವ ಧನ್ವಿ ಬಹುಮುಖ ಪ್ರತಿಭಾನ್ವಿತೆ. ಕಲಿಕೆಯಲ್ಲೂ ಮುಂದಿರುವುದರ ಜತೆಗೆ ನೃತ್ಯ ವೈವಿಧ್ಯಗಳಲ್ಲಿ ಕುಂದಾಪುರದ ಪ್ರವೀಣ್ ನೇತೃತ್ವದ ಮಿರಕಲ್ ಡಾನ್ಸ್ ಗ್ರೂಪ್‌ನಿಂದ ಪರಿಣತಿ ಪಡೆದು, ಪ್ರದರ್ಶನ ನೀಡಿ ಪಾರಿತೋಷಕ ಗಳಿಸಿದ್ದಾಳೆ. ತುಂಬ ಚೂಟಿಯಾಗಿರುವ ಈ ಹುಡುಗಿಗೆ ನಟನಾ ಚಾತುರ್ಯವೂ ಇದೆ. ಈಗ ಬಿಡುಗಡೆಗೊಂಡಿರುವ ರವಿ ಬಸ್ರೂರು ಅವರ ’ಗಿರ್ಮಿಟ್’ ಪಿ. ಶೇಷಾದ್ರಿ ಅವರ ’ಮೂಕಜ್ಜಿಯ ಕನಸುಗಳು’ ಚಿತ್ರಗಳಲ್ಲಿ ಕಿರುಪಾತ್ರಗಳನ್ನು, ಶಶಿಧರ ಗುಜ್ಜಾಡಿ ಅವರ ’ ನಿಧಾನ ಇಲ್ಲವೆ ನಿಧನ’ ಕಿರುಚಿತ್ರದಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದ್ದಾಳೆ.

    ಧನ್ವಿ ಮರವಂತೆಯ ಶಿವಮ್ಮಾಸ್ತಿಮನೆ ಚಂದ್ರಶೇಖರ ಪೂಜಾರಿ-ಜ್ಯೋತಿ ದಂಪತಿಯ ಪುತ್ರಿ. ಅಣ್ಣ ವೇದಾಂತ್ 9ನೆ ತರಗತಿ ವಿದ್ಯಾರ್ಥಿ. ಜ್ಯೋತಿಯ ಇಬ್ಬರು ಅಕ್ಕಂದಿರಲ್ಲಿ ಒಬ್ಬಳು ವಿಕಲ ಚೇತನಳು. ಕೂಲಿ ಮಾಡಿ ಬದುಕುವ ಬಡ ಅವಿಭಕ್ತ ಕುಟುಂಬ ಅವರದು. ಮಲೇಷ್ಯಾ ಸ್ಪರ್ಧೆಯಲ್ಲಿ ಭಾಗವಹಿಸಲು ಸಂಘಸಂಸ್ಥೆಗಳು, ದಾನಿಗಳು ನೆರವು ನೀಡಿದ್ದರು.

    Click here

    Click here

    Click here

    Call us

    Call us

    ಧನ್ವಿಯ ಸಾಧನೆಯ ಸುದ್ದಿ ತಿಳಿಯುತ್ತಿದ್ದಂತೆ ಮರವಂತೆಯಲ್ಲಿ ಸಂಭ್ರಮ ಮನೆಮಾಡಿದೆ. ಸಾರ್ವಜನಿಕ ನೆಲೆಯಲ್ಲಿ ಅವಳನ್ನು ಅದ್ದೂರಿಯಾಗಿ ಸ್ವಾಗತಿಸಿ, ಅಭಿನಂದಿಸಲು ಸಿದ್ಧತೆಗಳು ನಡೆದಿವೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.