Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ಷತಾ ಕೊಲೆ ಪ್ರಕರಣ: ಸಮಗ್ರ ತನಿಕೆಗೆ ಆಗ್ರಹ, ಬೈಂದೂರು ಬಂದ್
    ಬೈಂದೂರು

    ಅಕ್ಷತಾ ಕೊಲೆ ಪ್ರಕರಣ: ಸಮಗ್ರ ತನಿಕೆಗೆ ಆಗ್ರಹ, ಬೈಂದೂರು ಬಂದ್

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಅಕ್ಷತಾ ಕೊಲೆ ಪ್ರಕರಣದ ಸಮಗ್ರ ತನಿಕೆಯಾಗಲಿ.

    Click Here

    Call us

    Click Here

    ಹೇನಬೇರು ಸೇರಿದಂತೆ ಬೈಂದೂರು ಭಾಗದ ಮೂಲಭೂತ ಸೌಕರ್ಯಗಳು ಅಭಿವೃದ್ಧಿಗೊಳ್ಳಲಿ.

    ಬೈಂದೂರು ಬಂದ್, ಪ್ರತಿಭಟನಾ ಸಭೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ಊರವರು.

    ಬೈಂದೂರು: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವಿನ ಪ್ರಕರಣದ ಸಮಗ್ರ ತನಿಕೆಗೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೈಂದೂರು ವಿಧಾನಸಭಾ ವ್ಯಾಪ್ತಿಯ ಬಂದ್ ಹಾಗೂ ಬೃಹತ್ ಪ್ರತಿಭಟನಾ ಸಭೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ನಡೆಯಿತು.

    ಬೈಂದೂರು ಅಕ್ಷತಾ ದೇವಾಡಿಗ ಕಗ್ಗೋಲೆ ಪ್ರಕರಣ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಒಕ್ಕೊರಲಿನಿಂದ ನಿರ್ಣಯಗಳನ್ನು ಕೈಗೊಂಡು ಬೈಂದೂರಿನ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಲಾಯಿತು.

    Click here

    Click here

    Click here

    Call us

    Call us

    ಬೈಂದೂರಿನ ಕುಗ್ರಾಮವಾದ ಹೇನಬೇರುವಿಗೆ ಸಮರ್ಪಕವಾದ ಸಂಪರ್ಕ ರಸ್ತೆ, ಬಸ್ಸಿನ ವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿಯ ಹೇನಬೇರು ತಿರುವಿನಲ್ಲಿ ಸರಕಾರಿ ಬಸ್ ನಿಲುಗಡೆ ಸೌಲಭ್ಯ ಹಾಗೂ ಅಲ್ಲಿಯೇ ಅಕ್ಷತಾ ಹೆಸರಿನಲ್ಲಿ ಬಸ್ ನಿಲ್ದಾಣ ವ್ಯವಸ್ಥೆ,  ಹೇನುಬೇರು ಹಾಗೂ ಇತರೆಡೆ ಹೇರಳವಾಗಿ ಬೆಳೆದಿರುವ ಅಕೇಶಿಯಾ ಗಿಡಗಳನ್ನು ತೆರವುಗೊಳಿಸುವುದು, ಬೈಂದೂರು ಪರಿಸರದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕಕಾಲದ ಸಮಯವನ್ನು ಪಾಲಿಸುವಂತೆ ಇಲಾಖೆ ಕ್ರಮ ಕೈಗೊಳ್ಳುವುದು, ಅಕ್ಷತಾ ಸಾವಿನಲ್ಲಿ ರಾಜಕೀಯ ಮಾಡದೇ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವುದು ಹಾಗೂ ಅಕ್ಷತಾ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ನಿರತರು ಸಂಬಂಧಿಸಿದ ಇಲಾಖೆಗೆ ಮನವಿ ಸಲ್ಲಿಸಿದರು.

    ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ದೇವಾಡಿಗ ಸಂಘಟನೆಯ ಮುಖಂಡರುಗಳಾದ ರಾಜು ದೇವಾಡಿಗ, ಶಂಕರ ಅಂಕದಕಟ್ಟೆ, ರಾಘವೇಂದ್ರ ಮಣಿಪಾಲ, ಎಸ್.ಡಿ. ಹೇನಬೇರು, ಸುಬ್ಬ ದೇವಾಡಿಗ, ಚರಣ್ ಬೈಂದೂರು, ಹಿರಿಯ ನಾಗರೀಕರ ವೇದಿಕೆಯ ವಸಂತ ಹೆಗ್ಡೆ, ಹೋಲಿಕ್ರಾಸ್ ಇಗರ್ಜಿಯ ಉಪಾಧ್ಯಕ್ಷ ರೋಬರ್ಟ್ ರೆಬೆಲ್ಲೊ, ಕಾರ್ಯದರ್ಶಿ ಶಿಶಿಲಿಯೋ ರೆಬೆರೋ, ಬೈಂದೂರು ಮಹಿಳಾ ಮಿತ್ರದ ಅಧ್ಯಕ್ಷೆ ದೇವಿ, ಲಾವಣ್ಯ ಬೈಂದೂರಿನ ಗಣೇಶ್ ಕಾರಂತ್, ಬಿಲ್ಲವ ಸಂಘದ ಅಧ್ಯಕ್ಷ ಶ್ರೀನಿವಾಸ ಉಬ್ಬೇರಿ, ವಿಶ್ವಕರ್ಮ ಸಂಘದ ಅಧ್ಯಕ್ಷ ನಾರಾಯಣ ಆಚಾರಿ, ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ, ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಗೋಪಾಲ ನಾಯ್ಕ್, ಖಾರ್ವಿ ಯಾನೆ ಹರಿಕಾಂತ್ ಮಹಾಜನ್ ಸಂಘದ ಅಧ್ಯಕ್ಷ ನವೀನ್ ಚಂದ್ರ ಉಪ್ಪುಂದ, ಚೈತ್ರಾ, ವಿಲಾಸ್ ಕುಮಾರ್ ನಿಟ್ಟೆ ಮೊದಲಾದವರು ಭಾಗವಹಿಸಿದ್ದರು.

    ಪ್ರತಿಭಟನೆಯಲ್ಲಿ ನೂರಾರು ಪ್ರತಿಭಟನಾಕಾರರು ಭಾಗವಹಿಸಿದ್ದರು. ಕಾಲೇಜು ವಿದ್ಯಾರ್ಥಿಗಳು ಬೈಂದೂರು ಬೈಪಾಸ್ ನಿಂದ ಮೆರವಣಿಗೆಯಲ್ಲಿ ಸಾಗಿ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಗಿರೀಶ್ ಬೈಂದೂರು ಪ್ರತಿಭಟನಾ ಸಭೆಯನ್ನು ಸಂಘಟಿಸಿದ್ದರು.

    ಇದನ್ನೂ ಓದಿ:-

    * ಬೈಂದೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು. ಕೊಲೆ ಶಂಕೆ

    * ವಿದ್ಯಾರ್ಥಿನಿ ಅಕ್ಷತಾ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

    * ಅಕ್ಷತಾ ಸಾವು: ಎರಡನೇ ದಿನವೂ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ

    * ವಿದ್ಯಾರ್ಥಿನಿ ಅಕ್ಷತಾ ಕೊಲೆ ಆರೋಪಿ ಬಂಧನ

    _MG_8267 _MG_8325 _MG_8334 _MG_8338 _MG_8346 _MG_8354 _MG_8368 _MG_8379

    Akshatha Devadiga Murder
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಉಡುಪಿ ಜಿಲ್ಲಾ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ರಿಷಿಕಾ ದೇವಾಡಿಗ ಆಯ್ಕೆ

    13/12/2025

    ಬೈಂದೂರು ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.