Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 35ರೂ. ಬಿರಿಯಾನಿ ತಿನ್ನಲು 70ರೂ ಟೋಲ್ ನೀಡಿ ಹೋಗಬೇಕಾ?
    ಊರ್ಮನೆ ಸಮಾಚಾರ

    35ರೂ. ಬಿರಿಯಾನಿ ತಿನ್ನಲು 70ರೂ ಟೋಲ್ ನೀಡಿ ಹೋಗಬೇಕಾ?

    Updated:22/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಟೋಲ್ ಪ್ಲಾಜಾದ ಆಚೆ ಮತ್ತು ಈಚೆಗೆ ಇರುವ ಕೃಷಿ ಭೂಮಿಗೆ, ಅಕ್ಕಪಕ್ಕದ ಗ್ರಾಮಗಳಿಗೆ ತೆರಳಲು ಟೋಲ್ ನೀಡುವ ಸ್ಥಿತಿ ಇದೆ. ಸಮೀಪದ ಭಟ್ಕಳದ ಹೋಟೆಲುಗಳಿಗೆ ಕುಟುಂಬಿಕರೊಂದಿಗೆ 35ರೂ ಹಾಪ್ ಬಿರಿಯಾನಿ ತಿಂದು ಬರಲು 70ರೂ ಟೋಲ್ ನೀಡಲು ಸಾಧ್ಯವೆ? ಎಲ್ಲಿಯೂ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಸರ್ವಿಸ್ ರಸ್ತೆಗಳು ಸಮರ್ಪಕವಾಗಿಲ್ಲ. ಬಸ್ ನಿಲ್ದಾಣ ನಿರ್ಮಾಣಗೊಂಡಿಲ್ಲ. ಆದಾಗ್ಯೂ ಟೋಲ್ ಪ್ಲಾಜಾ ಮಾತ್ರಾ ತ್ವರಿತಗತಿಯಲ್ಲಿ ನಿರ್ಮಾಣವಾಗುತ್ತಿದೆ. ಇದು ಶಿರೂರು ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬುಧವಾರ ಟೋಲ್ ಚಲೋ ಪ್ರತಿಭಟನಾ ಸಭೆಯಲ್ಲಿ ಕೇಳಿಬಂದ ಮಾತುಗಳು.

    Click Here

    Call us

    Click Here

    ಈ ಸಂದರ್ಭ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಕುಂದಾಪುರ-ಶಿರೂರು ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದೆ. ಅದರೊಂದಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವ ಮುನ್ನವೇ ಶಿರೂರಿನಲ್ಲಿ ವಾಹನ ಶುಲ್ಕ ಸಂಗ್ರಹಿಸಲು ಸಿದ್ಧತೆ ನಡೆಯುತ್ತಿದೆ ಎಂಬ ಗುಮಾನಿ ಸಾರ್ವಜನಿಕರಲ್ಲಿ ಮೂಡಿದೆ. ಅದು ನಿಜವಾದರೆ ಅದಕ್ಕೆ ತಡೆಯೊಡ್ಡಲಾಗುವುದುನೆಂದು ಎಚ್ಚರಿಕೆ ನೀಡಿದರು.

    ಕಾಮಗಾರಿ ನಡೆಯುತ್ತಿದ್ದ ವಿವಿಧ ಹಂತಗಳಲ್ಲಿ ಸಾರ್ವಜನಿಕರೂ, ಜನಪ್ರತಿನಿಧಿಗಳೂ ನೀಡಿದ ಸಲಹೆ, ಎಚ್ಚರಿಕೆಗಳನ್ನು ಗುತ್ತಿಗೆದಾರ ಕಂಪನಿ ಐಆರ್‌ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ‍್ಸ್ ನಿರ್ಲಕ್ಷಿಸಿದೆ. ಅದರ ಪರಿಣಾಮವಾಗಿ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಜನರು ತಾಳ್ಮೆ ಕಳೆದುಕೊಳ್ಳುವ ಮೊದಲೇ ಚರಂಡಿ, ಸರ್ವಿಸ್ ರಸ್ತೆ, ಕಡಿದು ಹಾಕಿದ ಸಂಪರ್ಕ ರಸ್ತೆಗಳ ದುರಸ್ತಿ, ಬಸ್ ನಿಲ್ದಾಣ, ಒದಗಿಸಬೇಕು. ಸ್ಥಳೀಯರ ಬೇಡಿಕೆಯಂತೆ ಶಿರೂರು ಟೋಲ್ ಸಂಗ್ರಹ ಕೇಂದ್ರದಿಂದ ೧೦ ಕಿಮೀ ವ್ಯಾಪ್ತಿಯ ವಾಹನ ಸಂಚಾರಿಗಳಿಗೆ ಸುಂಕ ವಿನಾಯಿತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಹೆದ್ದಾರಿ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ಕೆಲಸ ಪೂರ್ಣಗೊಳ್ಳುವ ಮೊದಲೇ ಟೋಲ್ ಆರಂಭಿಸುವುದು ಸರಿಯಾದ ಕ್ರಮವಲ್ಲ. ಮಳೆಗಾಲದಲ್ಲಿ ಚಿಂತಾಜನಕ ಸ್ಥಿತಿ ಎದುರಿಸುವಂತಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆ ಮಾತು ಕೊಟ್ಟಂತೆ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಆರಂಭಿಸಿದರೆ ತೀವ್ರ ಸ್ವರೂಪದ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

    ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಹಾಲಿ ಸದಸ್ಯ ಸುರೇಶ ಬಟವಾಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪುಷ್ಪರಾಜ ಶೆಟ್ಟಿ, ರೈತ ಸಂಘದ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಸ್ಥಳೀಯ ಮುಖಂಡ ಜಿಫ್ರಿ ಸಾಹೇಬ್ ಭಟ್ಕಳದ ಕೃಷ್ಣ ನಾಯ್ಕ್, ಬೆಳ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಹೆದ್ದಾರಿ ಕರಾವಳಿ ಗ್ರಾಮಗಳ ಜೀವನಾಡಿ. ಅಸಮರ್ಪಕ ಕಾಮಗಾರಿಯ ಫಲವಾಗಿ ಈ ಭಾಗದಲ್ಲಿ ಹಲವು ವಾಹನ ಅಪಘಾತಗಳು ಸಂಭವಿಸಿವೆ; ಜೀವಹಾನಿ ಆಗಿದೆ. ಅದಕ್ಕೆ ಕಾರನವಾಗುತ್ತಿರುವ ತೊಡಕುಗಳನ್ನು ನಿವಾರಿಸಿದ ಬಳಿಕವೇ ಟೋಲ್ ಸಂಗ್ರಹಿಸಬೇಕು ಮತ್ತು ಬೈಂದೂರಿನಿಂದ ಭಟ್ಕಳದ ವರೆಗಿನ ಸಂಚಾರಿಗಳಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

    Click here

    Click here

    Click here

    Call us

    Call us

    ಸಮಿತಿ ಅಧ್ಯಕ್ಷ ಸತೀಶಕುಮಾರ್ ಶೆಟ್ಟಿ ವಂದಿಸಿದರು. ಪತ್ರಕರ್ತ ಅರುಣಕುಮಾರ ಶಿರೂರು ನಿರೂಪಿಸಿದರು. ಹೆದ್ದಾರಿ ಪ್ರಾಧಿಕಾರದ ಸೈಟ್ ಮ್ಯಾನೇಜರ್ ನವೀನ್ ಅವರಿಗೆ ಬೇಡಿಕೆ ಪತ್ರ ಸಲ್ಲಿಸಲಾಯಿತು. ಇದೇ ವೇಳೆ ಬೈಂದೂರು ತಾಲ್ಲೂಕು ಸಿಐಟಿಯು ಪರವಾಗಿಯೂ ಬೇಡಿಕೆ ಪತ್ರ ಹಸ್ತಾಂತರಿಸಲಾಯಿತು. ವಿವಿಧ ಜನಪ್ರತಿನಿಧಿಗಳು, ಪಕ್ಷಗಳ ಮುಖಂಡರು, ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    Like this:

    Like Loading...

    Related

    NH66
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d