Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ.26: ಕುಂದೇಶ್ವರದಲ್ಲಿ ದೀಪೋತ್ಸವ, ರಥೋತ್ಸವ ಸಂಭ್ರಮ
    ಕುಂದಾಪ್ರದ್ ಸುದ್ಧಿ

    ನ.26: ಕುಂದೇಶ್ವರದಲ್ಲಿ ದೀಪೋತ್ಸವ, ರಥೋತ್ಸವ ಸಂಭ್ರಮ

    Updated:25/11/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ನ.26ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ.

    Click Here

    Call us

    Click Here

    ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ ಸುತ್ತಿನಲ್ಲಿ ಶ್ರೀ ದೇವರು ಪಾಲಕಿಯನ್ನೇರಿ ಕ್ರಮಿಸುವುದು ಇಲ್ಲಿನ ವಿಶೇಷ. (ಕುಂದಾಪ್ರ ಡಾಟ್ ಕಾಂ)

    ನಂತರ ಪುರಮೆರವಣಿಗೆಯ ಆರಂಭ. ಅದು ಮುಗಿಯುವುದು ಬೆಳಗಿನ ಜಾವ ಐದರ ನಂತರ. ವೈಭವದ ಈ ಪುರಮೆರವಣಿಗೆಯಲ್ಲಿ ಪ್ರತಿವರ್ಷವೂ ಬಗೆ-ಬಗೆಯ ಆಕರ್ಷಣೆಗಳು. ನಾಗಸ್ವರವಾದನ, ಸಾಂಪ್ರದಾಯಿಕ ವಾದ್ಯ, ಜಾನಪದ ನೃತ್ಯಗಳು, ತಟ್ಟಿರಾಯ, ಬೆಂಕಿ ಆಟ, ಲಾಟಿ ತಾಲೀಮು, ಡೊಳ್ಳು ವಾದನ, ಚಂಡೆವಾದನ, ಕೀಲು ಕುದುರೆ, ಗೊಂಬೆ ಕುಣಿತ, ವೀರಗಾಸೆ, ಪಟ್ಟದ ಕುಣಿತ, ನಾಸಿಕ್ ಡೋಲು – ಹೀಗೆ ವರ್ಷದಿಂದ ವರ್ಷಕ್ಕೆ ವೈವಿಧ್ಯ; ವಿಶೇಷ ಆಕರ್ಷಣೆ. ಶ್ರೀ ದೇವರ ಉತ್ಸವ ದೇವಾಲಯದಿಂದ ಹೊರಟು, ಹೊಸ ಬಸ್‌ಸ್ಟಾಂಡ್ ಬಳಿ ತಿರುಗಿ, ಪುರಸಭೆಯ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಮೂಲಕ ಹಂಗ್ಳೂರು ಗೆಳೆಯರ ಬಳಗದವರೆಗೂ ಹೋಗಿ, ನಂತರ ಬೆಳಗಿನ ಜಾವ ದೇವಾಲಯದ ರಥಬೀದಿಯ ಕಡೆಗೆ ಆಗಮಿಸುತ್ತದೆ. ಇಡೀ ನಗರದಲ್ಲಿ ಸಂಚರಿಸುವ ಇಷ್ಟೊಂದು ದೂರವ್ಯಾಪಿ ಉತ್ಸವ ಕುಂದಾಪುರದಲ್ಲಿ ಮತ್ತೊಂದಿಲ್ಲ.

    ಕಟ್ಟೆಪೂಜೆ: ಭಕ್ತಾದಿಗಳು ಉತ್ಸವ ಕ್ರಮಿಸುವ ಮಾರ್ಗದಲ್ಲಿ ಅಲ್ಲಲ್ಲಿ ಆಕರ್ಷಕ ವೇದಿಕೆಗಳನ್ನು ನಿರ್ಮಿಸಿ, ಅಲ್ಲಿಗೆ ಶ್ರೀ ದೇವರನ್ನು ಆಹ್ವಾನಿಸಿ, ಪೂಜೆ ನೆರವೇರಿಸುತ್ತಾರೆ. ಭಕ್ತಿ ಶ್ರದ್ಧೆಯಿಂದ ಬೀಳ್ಕೊಡುತ್ತಾರೆ. ಸುಮಾರು 20 ನಿಮಿಷ ಅವಧಿಯ ಈ ಕಟ್ಟೆಪೂಜೆಯಲ್ಲಿ ಭಕ್ತಾದಿಗಳಿಗೆಲ್ಲ ಪಂಚಕಜ್ಜಾಯ ಪ್ರಸಾದ ವಿತರಣೆ ನಡೆಯುತ್ತದೆ. ಹೀಗೆ ಸುಮಾರು ಹದಿನಾರು ಕೇಂದ್ರಗಳಲ್ಲಿ ಕುಂದೇಶ್ವರನಿಗೆ ಕಟ್ಟೆಪೂಜೆ ನಡೆಯುತ್ತದೆ. (ಕುಂದಾಪ್ರ ಡಾಟ್ ಕಾಂ)

    ತೆಪ್ಪೋತ್ಸವ: ಕುಂದೇಶ್ವರ ಕೆರೆಯಲ್ಲಿ ಎರಡು ದೋಣಿಗಳನ್ನು ಸೇರಿಸಿ ಮಾಡಿದ ವಿಶೇಷ ತೆಪ್ಪದಲ್ಲಿ ಶ್ರೀ ದೇವರು ತಂತ್ರಿಗಳು, ಅರ್ಚಕರು ಮತ್ತು ದೀವಟಿಗೆಯವರೊಡನೆ ಮೂರು ಸುತ್ತು ಬರುವ ಆ ಸಂಭ್ರಮ ಭಕ್ತಾದಿಗಳ ಮನಸ್ಸಿಗೆ ಮುದ ಕೊಡುತ್ತದೆ. ಕೆರೆಯ ಸುತ್ತಲೂ ಹಚ್ಚುವ ಹಣತೆ ದೀಪದ ಬೆಳಕು ಕೆರೆಯಲ್ಲಿ ಪ್ರತಿಫಲನಗೊಂಡು ಒಂದು ಹೊಸ ಬೆಳಕಿನ ಲೋಕವನ್ನೇ ಸೃಷ್ಟಿಸುತ್ತದೆ.

    Click here

    Click here

    Click here

    Call us

    Call us

    ನಂತರ ದೇವಾಲಯದ ಅಶ್ವತ್ಥಕಟ್ಟೆಯಲ್ಲೊಂದು ಪೂಜೆ; ಅಷ್ಟಾವಧಾನ ಸೇವೆ. ದೇವಾಲಯದ ಹೊರ ಸುತ್ತಿನಲ್ಲಿ ಮತ್ತೊಂದು ಕಟ್ಟೆಪೂಜೆ. ಪ್ರದಕ್ಷಿಣ ಪಥದಲ್ಲಿರುವ ಈಡುಗಲ್ಲಿಗೆ ಸಂಪ್ರದಾಯದಂತೆ ತೆಂಗಿನ ಕಾಯಿಗಳನ್ನು ಕುಟ್ಟಿ ಒಡೆಯುವುದು; ಅದನ್ನು ಮಡಿವಾಳ ಕುಟುಂಬದವರು ಪ್ರಸಾದವೆಂದು ಶ್ರದ್ಧೆಯಿಂದ ಹೆಕ್ಕಿಕೊಳ್ಳುವುದು – ಇವೆಲ್ಲ ಈ ದೀಪೋತ್ಸವದ ಕಟ್ಟುಕಟ್ಟಳೆಗಳು; ವಿಧಿ – ವಿಧಾನಗಳು.

    ಇದನ್ನೆಲ್ಲ ಮುಗಿಸಿ, ಹೊರಪ್ರಾಕಾರದಲ್ಲಿ ಒಂದು ಪ್ರದಕ್ಷಿಣೆ ಬಂದು ಶ್ರೀದೇವರ ಉತ್ಸವ ಮೂರ್ತಿ ಗರ್ಭಗುಡಿ ಸೇರುತ್ತದೆ. ನಂತರ ಮಂಗಳಾರತಿ; ಮಂತ್ರಾಕ್ಷತೆ; ತಂತ್ರಿಗಳಿಂದ ರಾಷ್ಟ್ರಾಶೀರ್ವಾದ; ಪ್ರಸಾದ ವಿತರಣೆ; ಉತ್ಸವದಲ್ಲಿ ಸೇವೆಸಲ್ಲಿಸಿದವರಿಗೆ ಶ್ರೀದೇವರ ಅನುಗ್ರಹ ರೂಪದ ಸಂಭಾವನೆ. ಇದು ಈ ಲಕ್ಷ ದೀಪೋತ್ಸವದ ವಿಧಿ – ವಿಧಾನ. (ಕುಂದಾಪ್ರ ಡಾಟ್ ಕಾಂ)

    ಶ್ರೀ ಕುಂದೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಹಾಗೂ ರಥೋತ್ಸವ ಹಿನ್ನೆಲೆಯಲ್ಲಿ ನಗರದ ಬೀದಿಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ಅಂಗವಾಗಿ ದೇವಳದಲ್ಲಿ ಸಂಜೆ 5ರಿಂದ ನೃತ್ಯಸಿಂಚನ, ನಗರದ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಲಿವೆ.

    Kundeshwara deeotsava12

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.