Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಪದಗ್ರಹಣ
    ಊರ್ಮನೆ ಸಮಾಚಾರ

    ಕುಂದಾಪುರ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಕುಂದಾಪುರ ವಲಯದ ಬೆಳ್ಳಿ ಹಬ್ಬದ ಸವಿ ನೆನೆಪು ಹಾಗೂ ೨೬ನೇ ಪದಗ್ರಹಣ ಸಮಾರಂಭ ಜರುಗಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಸುರೇಶ್ ಡಿ ಪಡುಕೋಣೆ ಮಾತನಾಡಿ ಛಾಯಾಗ್ರಾಹಕರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗುವ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯ. ತಮ್ಮ ಮನಸ್ಸು, ಕನಸುಗಳನ್ನು ಜನರಿಗೆ ಅರ್ಪಿಸಿ ಪ್ರಾಮಾಣಿಕ ಸೇವೆ ನೀಡುವ ಛಾಯಗ್ರಾಹಕರಿಗೆ ದೇವರು ಎಂದಿಗೂ ಒಳ್ಳೇದನ್ನೇ ಕರುಣಿಸುತ್ತಾನೆ ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್‌ಕೆಪಿಎ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತನಾಡಿ, ಹಿಂದಿನಿಂದಲೂ ಎಸ್‌ಕೆಪಿಎ ಕುಂದಾಪುರ ವಲಯ ಸಮಾಜಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಪ್ರಮೋದ್ ಚಂದನ್ ಅವರ ಮುಂದಾಳತ್ವದಲ್ಲಿ ಸಂಘವು ಅನೇಕ ಚಟುವಟಿಕೆಗಳನ್ನು ನಡೆಸಿದೆ. ನೂತನ ಅಧ್ಯಕ್ಷ ರಾಜಾ ಮಠದಬೆಟ್ಟು ನಾಯಕತ್ವದಲ್ಲಿ ಶೀಘ್ರವೇ ಈ ಭಾಗದಲ್ಲಿ ಛಾಯಾಗ್ರಾಹಕರಿಗೆ ಅಗತ್ಯವಿರುವ ಛಾಯಾ ಭವನ ನಿರ್ಮಾಣಗಳ್ಳಲಿ. ತನ್ಮೂಲಕ ಛಾಯಾಗ್ರಾಹಕರಿಗೆ ಈ ಭವನ ಚಟುವಟಿಕೆಯ ಕೇಂದ್ರವಾಗಲಿ ಎಂದ ಅವರು, ಛಾಯಾಗ್ರಾಹಕರಿಗಾಗಿಯೇ ಛಾಯಾ ಸುರಕ್ಷಾವನ್ನು ಯೋಜನೆಯನ್ನು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದೇವೆ. ಏನಾದರೂ ಆಪತ್ತುಗಳಾದಾಗ ಛಾಯಾಗ್ರಾಹಕರಿಗೆ ಈ ಯೋಜನೆ ನೆರವಾಗಲಿದೆ ಎಂದು ಶ್ರೀಧರ್ ಶೆಟ್ಟಿಗಾರ್ ತಿಳಿಸಿದರು.

    ಎಸ್‌ಕೆಪಿಎ ಕುಂದಾಪುರ ವಲಯ ನಿಕಟಪೂರ್ವ ಅಧ್ಯಕ್ಷರಾದ ಪ್ರಮೋದ್ ಚಂದನ್ ನೂತನ ಅಧ್ಯಕ್ಷ ರಾಜಾ ಮಠದಬೆಟ್ಟು ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳಿಗೆ ಹೂವು ನೀಡುವುದರ ಮೂಲಕ ಪದಪ್ರದಾನ ಮಾಡಲಾಯಿತು. ವಿವಿಧ ಭಾಗಗಳಿಂದ ಆಗಮಿಸಿದ ಎಸ್‌ಕೆಪಿಎನ ಪದಾಧಿಕಾರಿಗಳು ನೂತನ ಅಧ್ಯಕ್ಷ ರಾಜಾ ಮಠದಬೆಟ್ಟು ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾ ಪತ್ರಕರ್ತ ಸಂತೋಷ್ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸಮಿತಿಯಲ್ಲಿ ದುಡಿದ ವಿಠಲ್ ಚೌಟ ಹಾಗೂ ಕುಂದಾಪುರ ವಲಯದ ನಿಕಟಪೂರ್ವ ಅಧ್ಯಕ್ಷ ಪ್ರಮೋದ್ ಚಂದನ್ ಅವರನ್ನು ಇದೇ ವೇಳೆಯಲ್ಲಿ ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಅತಿಥಿಗಳಾಗಿದ್ದ ಕೆಜಿಎಫ್ ಸಿನೆಮಾ ಸಂಗೀತ ನಿರ್ದೇಶಕ ರವಿ ಬಸ್ರೂರು, ಪತ್ರಕರ್ತ ಜಾನ್ ಡಿಸೋಜಾ, ಎಸ್‌ಕೆಪಿಎನ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ, ಎಸ್‌ಕೆಪಿಎ ಶ್ರೀಧರ ಹೆಗ್ಡೆ ಮಾತನಾಡಿದರು. ಉದ್ಯಮಿ ಗಣೇಶ್ ಕಿಣಿ, ಚಂದ್ರಶೇಖರ್ ಶೆಟ್ಟಿ ಕೈಲಾಡಿ, ರಾಬರ್ಟ್ ಡಿಸೋಜಾ, ನಾಗರಾಜ ರಾಯಪ್ಪನಮಠ, ಹರೀಶ್ ಅಡ್ಯಾರ್, ವಾಸುದೇವ್ ರಾವ್, ಗಿರೀಶ್ ಜಿಕೆ, ಅಧ್ಯಕ್ಷ ರಾಜಾ ಮಠದಬೆಟ್ಟು, ಕಾರ್ಯದರ್ಶಿ ಅಮೃತ್ ಬೀಜಾಡಿ, ಕೋಶಾಧಿಕಾರಿ ಗೋಪಾಲ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಸುರೇಶ್ ಜಮದಗ್ನಿ, ಚಂದ್ರಶೇಖರ್, ಪ್ರಕಾಶ್ ಕುಂದೇಶ್ವರ್ ಮೊದಲಾಸವರು ಉಪಸ್ಥಿತರಿದ್ದರು.

    ಪ್ರಮೋದ್ ಚಂದನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಚಂದ್ರಕಾಂತ್(ಚೆನ್ನ) ಧನ್ಯವಾದವಿತ್ತರು. ಸುರೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

    ಪದಪ್ರದಾನ ಸಮಾರಂಭದ ಬಳಿಕ ಕನ್ನಡಕೋಗಿಲೆ ಖ್ಯಾತಿಯ ಟ್ಯಾಗ್ ಸ್ಟಾರ್ ಅರ್ಜುನ್ ಇಟಗಿ ಅವರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಇಂಟರ್‌ನ್ಯಾಶನಲ್ ರಿಯಾಲಿಟಿ ಶೋ ವಿನ್ನರ್ ಸೀಜಲಿಂಗ್ ಗೈಸ್ ತಂಡದವರಿಂದ ವಿಶೇಷ ನೃತ್ಯ ಕಾರ್ಯಕ್ರಮ ಹಾಗೂ ವಿಶೇಷ ಆಹ್ವಾನಿತ ತಂಡಗಳಿಂದ ಕಾಮಿಡಿ ಮಜಾ ವಾರ್ ನಡೆಯಿತು. ರಂಗಕರ್ಮಿ ಜಯಶೇಖರ್ ಮಡಪ್ಪಾಡಿ, ಕನಸು ಕಾರ್ತಿಕ್, ವಿಶಾಲ ಯೋಗೀಶ್ ಆಚಾರ್ಯ ಕಾಮಿಡಿ ವಾರ್‌ಗೆ ತೀರ್ಪುಗಾರರಾಗಿ ಸಹಕರಿಸಿದರು. ಶಿವಶಕ್ತಿ ಕಲಾತಂಡ ಕನ್ನುಕೆರೆ ಪ್ರಥಮ, ಕಲಾಸ್ಪೂರ್ತಿ ದ್ವಿತೀಯ ಹಾಗೂ ಕಲಾಶಕ್ತಿ ಕಲಾತಂಡ ತೃತೀಯ ಸ್ಥಾನ ಪಡೆದುಕೊಂಡಿತು. ವಿಜೇತ ತಂಡಕ್ಕೆ ನಗದು ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d