Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ಕ್ಷೇತ್ರದಲ್ಲಿ ಸರ್ವರ ಉನ್ನತಿ: ವಿನಯಕುಮಾರ್ ಸೊರಕೆ
    ಊರ್ಮನೆ ಸಮಾಚಾರ

    ಸಹಕಾರಿ ಕ್ಷೇತ್ರದಲ್ಲಿ ಸರ್ವರ ಉನ್ನತಿ: ವಿನಯಕುಮಾರ್ ಸೊರಕೆ

    Updated:27/11/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಮಾಜ ಪ್ರಗತಿಯನ್ನು ಸಾಧಿಸಲು ಆರ್ಥಿಕ ವ್ಯವಸ್ಥೆ ಮುಂಚೂಣಿಯಲ್ಲಿ ಇರಬೇಕು. ಇಂದು ಸಹಕಾರಿ ಕ್ಷೇತ್ರವೂ ಬೆಳೆದಿದೆ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು ಹಾಗೂ ಅದರ ಉಪಯೋಗ ಪಡೆದವರ ಉನ್ನತಿಯೂ ಆಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

    Click Here

    Call us

    Click Here

    ಅವರು ಶಿರೂರು ಮೇಲ್‌ಪೇಟೆಯಲ್ಲಿ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ೭ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಕ್ಷೇತ್ರ ಕೃಷಿಕರು, ಕಾರ್ಮಿಕರ ವರ್ಗಕ್ಕೆ ರಕ್ಷಣಾ ಕವಚವಾಗಿ ಸಹಕಾರಿ ಕ್ಷೇತ್ರ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಆರ್ಥಿಕ ಮುಗ್ಗಟ್ಟಿರುವ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಗ ಮೇಲೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರ ಮತ್ತಷ್ಟು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದರು.

    ಭಟ್ಕಳದ ಮಾಜಿ ಶಾಸಕ ಜೆ.ಡಿ. ನಾಯ್ಕ್ ಕಂಪ್ಯೂಟರ್ ಉದ್ಘಾಟನೆ ಮಾಡಿದರು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಹೆಗ್ಡೆ ಭದ್ರತಾ ಕೊಠಡಿ ಉದ್ಘಾಟಿಸಿದರು.

    ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ನಮ್ಮ ಸಂಸ್ಥೆಯ ಪ್ರಸ್ತುತ ಏಳನೇ ಶಾಖೆಯನ್ನು ತೆರೆಯುತ್ತಿದೆ. ಮುಂದಿಯೂ ಹಂತ ಹಂತವಾಗಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗುತ್ತದೆ. ಸಂಸ್ಥೆಯ ಪ್ರಗತಿಯಲ್ಲಿ ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಸಿಬ್ಬಂಧಿ ವರ್ಗದ ಕೊಡುಗೆ ದೊಡ್ಡದಿದ್ದು, ಸಂಘಟಿತ ಪ್ರಯತ್ನದಿಂದ ಯಶಸ್ವಿಯಾಗಿದ್ದೇವೆ ಎಂದರು.

    Click here

    Click here

    Click here

    Click Here

    Call us

    Call us

    ದ.ಕ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ದಸ್ತಗೀರ್ ಸಾಹೇಬ್, ಪುಪ್ಪರಾಜ ಶೆಟ್ಟಿ, ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಲ್‌ಸಾದ್ ಬೇಗಂ, ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿಯ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ, ಶಿರೂರು ಮಾಜಿ ಮಂಡಲ ಪ್ರಧಾನ ನಾರಾಯಣ ಅಳ್ವೆಗದ್ದೆ, ಉದ್ಯಮಿ ರಾಮ ಮೇಸ್ತ, ಕಟ್ಟಡ ಮಾಲಿಕರಾದ ಸತೀಶ್ ಪ್ರಭು ಅತಿಥಿಗಳಾಗಿದ್ದರು. ಸೊಸೈಟಿಯ ನಿರ್ದೇಶಕರುಗಳಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಭಾಸ್ಕರ್, ಪುಟ್ಟ ಎಮ್. ಬಿಲ್ಲವ, ಶೇಖರ ಪೂಜಾರಿ, ಯು. ಕೇಶವ ಪೂಜಾರಿ, ಉದಯ ಜಿ. ಪೂಜಾರಿ ಉಪಸ್ಥಿತರಿದ್ದರು.

    ಈ ಸಂದರ್ಭ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತರಾದ ಎಸ್. ರಾಜು ಪೂಜಾರಿ ಹಾಗೂ ಕಟ್ಟಡ ಮಾಲಿಕರಾದ ಸತೀಶ್ ಪ್ರಭು ಅವರನ್ನು ಸನ್ಮಾನಿಸಲಾಯಿತು.

    ಸೊಸೈಟಿಯ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ, ನಿರ್ದೇಶಕ ಚಿಕ್ಕು ಪೂಜಾರಿ ವಂದಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಟ ಬಿಲ್ಲವ ಪ್ರಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.