ಬೇಳೂರು ಸರಕಾರಿ ಶಾಲೆಗೆ ರೋಬೋಸಾಫ್ಟ್‌ನಿಂದ ದೇಣಿಗೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲ್ಯಾಣಪುರದ ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯಿಂದ ಸಾಂಸ್ಥಿಕ ಸಾಮಾಜಿಕ ಜವಾಜ್ದಾರಿ ಕಾರ್ಯಕ್ರಮದಡಿಯಲ್ಲಿ ಶನಿವಾರ ಅಗತ್ಯ ಸಲಕರಣೆಗಳನ್ನು ವಿತರಿಸಲಾಯಿತು.

Call us

Click Here

ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಬೋಸಾಫ್ಟ್ ಪ್ರತಿನಿಧಿ ನಿರಂಜನ್ ಭಟ್ ಕ್ರೀಡಾ ಸಾಮಾಗ್ರಿ, ಪ್ರಿಂಟರ್, ಮಿಕ್ಸಿ, ಚಿಕ್ಕ ಯುಪಿಎಸ್‌ನ್ನು ಹಸ್ತಾಂತರಿಸಿದರು.

ಬೇಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯೆ ಪ್ರಭಾವತಿ ಶೆಟ್ಟಿ, ಪ್ರಭಾವತಿ ಟಿ. ಶೆಟ್ಟಿ, ಉಷಾ ಕೊಠಾರಿ, ಊರಿನ ಪ್ರಮುಖರಾದ ಸುರೇಶ್ ಮೊಗವೀರ, ಸತೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ವಿನಯ ಹೆಗ್ಡೆ, ರೇಣುಕಾ ಶೆಟ್ಟಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ, ಸದಸ್ಯೆ ದಯಾಮತಿ, ಕೇದೂರು ಕ್ಲಸ್ಟರ್‌ನ ಸಂಗೀತಾ, ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಧ್ಯಾಯಿನಿ ಉಷಾ ಸ್ವಾಗತಿಸಿದರು. ಶಿಕ್ಷಕ ರಮೇಶ್ ಶೆಟ್ಟಿ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ro

Click here

Click here

Click here

Click Here

Call us

Call us

Leave a Reply