Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚತುಷ್ಪಥ ಹೆದ್ದಾರಿ ಸರಿಪಡಿಸಲು ಆಗ್ರಹಿಸಿ ಕಾಂಗ್ರೆಸ್ ನೇತೃತ್ವಲ್ಲಿ ಪಾದಯಾತ್ರೆ
    ಊರ್ಮನೆ ಸಮಾಚಾರ

    ಚತುಷ್ಪಥ ಹೆದ್ದಾರಿ ಸರಿಪಡಿಸಲು ಆಗ್ರಹಿಸಿ ಕಾಂಗ್ರೆಸ್ ನೇತೃತ್ವಲ್ಲಿ ಪಾದಯಾತ್ರೆ

    Updated:22/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದಿ.
    ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ್ಲೂರಿನಿಂದ ಶಿರೂರು ವರೆಗಿನ ಚತುಷ್ಪಥ ಹೆದ್ದಾರಿ ಕಾಮಗಾರಿ ತೀರ ಅವ್ಯವಸ್ಥಿತವಾಗಿ ನಡೆದಿದೆ. ಅದೇ ಕಾರಣದಿಂದ ಇಷ್ಟರಲ್ಲೇ ಹತ್ತಾರು ಸಂಚಾರಿಗಳು ಜೀವತೆತ್ತಿದ್ದಾರೆ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ 14ರಂದು ಮರವಂತೆಯಿಂದ ಬೈಂದೂರು ವರೆಗೆ ಪಾದಯಾತ್ರೆ ನಡೆಸಿ ಸಂಬಂಧಿಸಿದವರ ಗಮನ ಸೆಳೆಯಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಗುರುವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಹೆದ್ದಾರಿ ಬದಿ ಸೂಕ್ತ ಚರಂಡಿ ಇಲ್ಲವಾದುದರಿಂದ ಮಳೆಗಾಲದಲ್ಲಿ ಹೆದ್ದಾರಿ ಮೇಲೆ ನೀರು ಹರಿಯುತ್ತದೆ. ಕೆಲವೆಡೆ ಕೃತಕ ನೆರೆ ಏರ್ಪಟ್ಟು ಕೃಷಿ ಭೂಮಿಗೆ, ಮನೆಗಳಿಗೆ ನುಗ್ಗಿ ಅನಾಹುತ ಸೃಷ್ಟಿಸುತ್ತಿದೆ. ಅದು ಸರಿಯಾಗಬೇಕು. ಪ್ರತೀ ಮೂರು ಕಿಲೋಮೀಟರಿಗೆ ಒಂದರಂತೆ ನಿರ್ಮಿಸಿರುವ ಯು ತಿರುವುಗಳು ರಾಷ್ಟ್ರೀಯ ಹೆದ್ದಾರಿ ವಿನ್ಯಾಸ ಹಾಗೂ ಗುಣಮಟ್ಟದವುಗಳಲ್ಲ. ಅಲ್ಲಿಯೇ ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಅವುಗಳನ್ನು ಅಪಾಯಹಿತ ಸ್ಥಿತಿಗೆ ತರಬೇಕು. ಬೈಂದೂರು-ಕೊಲ್ಲೂರು ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿತವಾಗಿದೆ. ಅದು ಹೆದ್ದಾರಿಗೆ ಸೇರುವ ಯಡ್ತರೆ ಜಂಕ್ಷನ್‌ನಲ್ಲಿ ಅಂಡರ್ ಪಾಸ್ ನಿರ್ಮಿಸದಿದ್ದರೆ ಪರಿಣಾಮವನ್ನು ಊಹಿಸಲೂ ಅಸಾಧ್ಯ. ಜನ, ಸಂಚಾರ ದಟ್ಟಣೆ ಇರುವೆಡೆ ಸಮಾನಾಂತರ ಸರ್ವೀಸ್ ರಸ್ತೆ ಬೇಕು. ಹೆದ್ದಾರಿ ಕಾಮಗಾರಿ ನಡೆಸುವಾಗ ಗ್ರಾಮ ಪಂಚಾಯಿತಿಗಳ ಕುಡಿಯುವ ನೀರಿನ ಪೈಪ್‌ಗಳನ್ನು ನಾಶಪಡಿಸಿದ್ದು, ಅವುಗಳ ದುರಸ್ತಿಯಾಗಬೇಕು ಎನ್ನುವ ಆಗ್ರಹ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

    ಈ ಹಿಂದೆ ಸಂಸದ ಆಸ್ಕರ್ ಫೆರ್ನಾಂಡೀಸ್ ಶಿರೂರು ಮತ್ತು ಬೈಂದೂರಿನಲ್ಲಿ ನಡೆಸಿದ ಸಭೆಗಳಲ್ಲಿ ಹೆದ್ದಾರಿ ಪ್ರಾಧಿಕಾರದ ಹಾಗೂ ಗುತ್ತಿಗೆದಾರ ಸಂಸ್ಥೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದರು. ಎಲ್ಲವನ್ನು ನಿರ್ಲಕ್ಷಿಸಿ ಹಾಗೂ ಹೆದ್ದಾರಿ ಸಂಚಾರಿಗಳು, ಹೆದ್ದಾರಿ ಹಾದುಹೋಗುವ ಊರುಗಳ ನಾಗರಿಕರು ಅನುಭವಿಸುತ್ತಿರುವ ಬವಣೆಯನ್ನು ನಿರ್ಲಕ್ಷಿಸಿ ಈಗ ಕಾಮಗಾರಿ ಮುಕ್ತಾಯಗೊಳಿಸಿ ಶಿರೂರಿನಲ್ಲಿ ಶುಲ್ಕ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆಗಿವೆ. ಇವೆಲ್ಲವನ್ನು ವಿರೋಧಿಸಿ ಮತ್ತು ಇವುಗಳನ್ನು ಸಮರ್ಪಕಗೊಳಿಸಿದ ಬಳಿಕವೇ ಶುಲ್ಕ ಸಂಗ್ರಹ ಆರಂಭಿಸಬೇಕೆಂದು ಆಗ್ರಹಿಸಿ ಈ ಶಾಂತಿಯುತ ಹೋರಾಟ ನಡೆಯಲಿದೆ. ಬೈಂದೂರು, ವಂಡ್ಸೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ವಿವಿಧ ಸಂಘಟನೆಗಳು, ಗ್ರಾಮ ಪಂಚಾಯಿತಿಗಳು, ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ಹೋರಾಟದ ಪ್ರಥಮ ಹಂತವಾಗಿದ್ದು, ಬೇಡಿಕೆ ಈಡೇರದಿದ್ದರೆ ಹೆದ್ದಾರಿ ಬಂದ್, ಶುಲ್ಕ ಸಂಗ್ರಹ ತಡೆಯಂತಹ ಗಂಭೀರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ ಗೋಪಾಲ ಪೂಜಾರಿ, ಹೆದ್ದಾರಿ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪೊಲೀಸ್ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರೂ ಇವುಗಳತ್ತ ಗಮನ ಹರಿಸಬೇಕು ಎನ್ನುವುದು ಹೋರಾಟದ ಇನ್ನೊಂದು ಉದ್ದೇಶ ಎಂದರು. 14ರ ಪಾದಯಾತ್ರೆ ಹಾಗೂ ಅದರ ಕೊನೆಯಲ್ಲಿ ಬೈಂದೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಕ್ಷ ಕಾರ್ಯಕರ್ತರು ಮತ್ತು ಸಾರ್ವಜನಿಕರು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿದರು.

    ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಪ್ರಮುಖರಾದ ಎಸ್. ರಾಜು ಪೂಜಾರಿ, ಗೌರಿ ದೇವಾಡಿಗ, ಜಗದೀಶ ದೇವಾಡಿಗ, ನಾಗರಾಜ ಶೆಟ್ಟಿ, ನಾಗರಾಜ ಗಾಣಿಗ, ಮೋಹನ ಪೂಜಾರಿ, ಶೇಖರ ಪೂಜಾರಿ, ನಾರಾಯಣ ಅಳ್ವೆಗದ್ದೆ ಇದ್ದರು.

     

    Click here

    Click here

    Click here

    Call us

    Call us

    NH66
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ

    14/01/2026

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026
    Leave A Reply Cancel Reply

    11 + 12 =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.