Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಹಾಡಹಗಲೇ ಹರಿದ ನೆತ್ತರು. ಕಾರಣವಾಯ್ತೆ ಜಾಗದ ತಕರಾರು?
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಹಾಡಹಗಲೇ ಹರಿದ ನೆತ್ತರು. ಕಾರಣವಾಯ್ತೆ ಜಾಗದ ತಕರಾರು?

    Updated:17/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ.ಡಿ17: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ನೆತ್ತರು ಹರಿದ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಕಂಡ್ಲೂರು ಸಮೀಪದ ಜೋರ್‌ಮಕ್ಕಿ ನಿವಾಸಿ ಬಾಬು ಶೆಟ್ಟಿ (55) ಎಂದು ಗುರುತಿಸಲಾಗಿದೆ.

    Click Here

    Call us

    Click Here

    ಹೆಮ್ಮಾಡಿ – ಕೊಲ್ಲೂರು ರಾಜ್ಯ ಹೆದ್ದಾರಿ ಹಾಗೂ ತಲ್ಲೂರು ನೇರಳಕಟ್ಟೆ ಸಂಪರ್ಕ ರಸ್ತೆಯ ಜಾಡಿ ಕಲ್ಕಂಬ ಎಂಬಲ್ಲಿನ ಮಣ್ಣಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ದಾರಿಹೋಕರೊಬ್ಬರು ರಕ್ತಸಿಕ್ತ ದೇಹವನ್ನು ಕಂಡು ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೀವ ಶೆಟ್ಟಿ ಅವರ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.

    ಲಾರಿ ಚಾಲಕರಾಗಿರುವ ಮೃತ ಬಾಬು ಶೆಟ್ಟಿ ತಮ್ಮ ಮನೆಯಿಂದ ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ತನ್ನ ಹೀರೋ ಹೋಂಡಾ ಬೈಕಿನಲ್ಲಿ ತೆರಳಿದ್ದರು. ಇದರ ನಡುವೆಯೇ ಮಾರ್ಗಮಧ್ಯೆ ಈ ದುಷ್ಕೃತ್ಯ ನಡೆದಿದೆ. ಮೃತರ ಕುತ್ತಿಗೆ, ತಲೆ, ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಇರಿತದ ಗುರುತುಗಳು ಪತ್ತೆಯಾಗಿದ್ದು, ಹತ್ಯೆ ನಡೆಸಿರುವುದು ದೃಢವಾಗಿದೆ. ಮಣ್ಣಿನ ರಸ್ತೆಯ ತನಕವೂ ಅಟ್ಟಿಸಿಕೊಂಡು ಬಂದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಬಾಬು ಶೆಟ್ಟಿಯ ಲುಂಗಿ ಹಾಗೂ ಮೊಬೈಲ್ ನಾಪತ್ತೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಹತ್ಯೆ ಯಾವ ಕಾರಣಕ್ಕೆ ಆಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಅವರ ನಡೆಸುತ್ತಿದ್ದ ಬಡ್ಡಿ ವ್ಯವಹಾರ ಅಥವಾ ತಮ್ಮ ಕುಟುಂಬಿಕರೊಂದಿಗೆ ಇದ್ದ ಜಾಗದ ತಕರಾರು ಕೊಲೆಗೆ ಕಾರಣವಾಗಿರಬಹುದೇ ಎಂಬ ಶಂಕೆ ಇದ್ದು ತನಿಕೆ ನಡೆಸುತ್ತಿದ್ದೇವೆ ಎಂದು ಉಡುಪಿ ಎಸ್ಪಿ ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

    ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್, ವೃತ್ತ ನಿರೀಕ್ಷಕ ಮಂಜಪ್ಪ, ಠಾಣಾಧಿಕಾರಿ ರಾಜಕುಮಾರ್ ಸ್ಥಳಕ್ಕೆ ಭೇಟಿ ತನಿಕೆ ಆರಂಭಿಸಿದ್ದಾರೆ. ಶ್ವಾನದಳ, ಬೆರಳಚ್ಚು ಹಾಗೂ ಫೊರೆನ್ಸಿಕ್ ತಜ್ಞರೂ ಸ್ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಭೇಟಿ ನೀಡಿ ಪ್ರಕರಣವನ್ನು ಶೀಘ್ರ ಭೇಧಿಸುವಂತೆ ತಿಳಿಸಿದ್ದಾರೆ. ಕಂಡ್ಲೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.