Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೌದಿ ಅರೇಬಿಯಾದಲ್ಲಿ ಹರೀಶ್ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತುರ್ತು ಸ್ಪಂದನೆ
    ಉಡುಪಿ ಜಿಲ್ಲೆ

    ಸೌದಿ ಅರೇಬಿಯಾದಲ್ಲಿ ಹರೀಶ್ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತುರ್ತು ಸ್ಪಂದನೆ

    Updated:24/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಫೇಸ್‌ಬುಕ್‌ನಲ್ಲಿ, ಸೌದಿ ದೊರೆಯ ವಿರುದ್ಧ ಪೋಸ್ಟ್ ಮಾಡಿದ ಅರೋಪದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ,  ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು.

    Click Here

    Call us

    Click Here

    ಭಾರತೀಯ ದೂತವಾಸದ ಅಧಿಕಾರಿಗಳೊಂದಿಗೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ ಬಂಗೇರಾ ಅವರ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಕೋರಿದರು. ಈ ಪ್ರಕರಣವು ಕಾನೂನು ಮೂಲಕ ಇತ್ಯರ್ಥವಾಗಬೇಕಿದ್ದು, ಸ್ವಲ್ಪ ವಿಳಂಬವಾಗಲಿದ್ದು, ಬಂಧನದಲ್ಲಿರುವ ಅವರು ಕ್ಷೇಮವಾಗಿದ್ದಾರೆ ಎಂದು ದೂತವಾಸದ ಅಧಿಕಾರಿಗಳು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.

    ಮಂಗಳವಾರ, ಹರೀಶ್ ಬಂಗೇರಾ ಅವರ ಪತ್ನಿ ಶ್ರೀಮತಿ. ಸುಮನ ಬಂಗೇರಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕಾರ್ಯದರ್ಶಿಗಳು, ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಸರ್ಕಾರವು ತಮ್ಮ ಪರವಾಗಿ ನಿಂತಿದ್ದು, ಆದಷ್ಟು ಶೀಘ್ರದಲ್ಲಿ ತಮ್ಮ ಪತಿಯ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಅವರಲ್ಲಿ ಧೈರ್ಯ ತುಂಬಿದರು.

    ನಂತರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಗೋಪಾಡಿ ಗ್ರಾಮದಲ್ಲಿನ ಹರೀಶ್ ಬಂಗೇರಾ ಅವರ ಮನೆಗೆ ಭೇಟಿ ನೀಡಿ, ಶ್ರೀಮತಿ ಸುಮನ ಬಂಗೇರಾ ಅವರನ್ನು ಭೇಟಿ ಮಾಡಿ, ಹರೀಶ್ ಬಂಗೇರ ಅವರ ಬಿಡುಗಡೆ ಕುರಿತಂತೆ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಸುಮನ ಬಂಗೇರಾ, ಬಂಧನವಾದ ಬಳಿಕ ತಮ್ಮ ಪತಿ ಹರೀಶ್ ಬಂಗೇರಾ, ಅವರು ಕೆಲಸ ಮಾಡುವ ಕಂಪನಿಯು ತಮ್ಮನ್ನು ಸಂಪರ್ಕಿಸಿ, ಒಂದು ಬಾರಿ ಮಾತನಾಡಿತ್ತು. ತದನಂತರ ಎಂಬೆಸ್ಸಿಯು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಸೌದಿ ಪೋಲೀಸ್ ಮುಖಾಂತರವೆ ಅವರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ತಮ್ಮ ಪತಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸಬೇಕಾಗಿ ಕೋರುತ್ತಾ, ಸಾಧ್ಯವಾದಲ್ಲಿ ತಮ್ಮ ಪತಿಯೊಂದಿಗೆ ಒಮ್ಮೆ ದೂರವಾಣಿಯಲ್ಲಿ ಮಾತನಾಡಿಸಲು ಅವಕಾಶ ಮಾಡಿಕೊಡುವಂತೆ ಅವರು ಕೋರಿದರು.

    Click here

    Click here

    Click here

    Call us

    Call us

    ಹರೀಶ್ ಬಂಗೇರ ಅವರು, ಕಳೆದ ಆರು ವರ್ಷಗಳಿಂದ ಅಲ್ಲೇ ಕೆಲಸ ಮಾಡುತ್ತಿದ್ದು, ಹಿಂದಿನ ವರ್ಷ ಜನವರಿಯಲ್ಲಿ ಊರಿಗೆ ಭೇಟಿ ನೀಡಿದ್ದರು. ಅವರು ಬಂಧನಕ್ಕೊಳಗಾದ ಸುದ್ದಿ ತಿಳಿಯುತ್ತಲೇ ಪ್ರಕ್ರಿಯೆಗನುಗುಣವಾಗಿ, ಉಡುಪಿ ಸೆನ್ ಪೋಲಿಸರಿಗೆ ಅರ್ಜಿ ನೀಡಿದ್ದು, ಪ್ರಕರಣವನ್ನು ಜಿಲ್ಲೆಯ ಮಾನವ ಹಕ್ಕು ಆಯೋಗದ ಗಮನಕ್ಕೂ ತರಲಾಗಿದೆ ಎಂದು ಹರೀಶ್ ಬಂಗೇರ ಅವರ ಮಾವ ಶ್ರೀನಿವಾಸ್ ಬಂಗೇರ ತಿಳಿಸಿದರು.

    ಇದನ್ನೂ ಓದಿ:
    ► ಫೆಸ್ಬುಕ್ ಖಾತೆಯಲ್ಲಿ ಅವಹೇಳನ ಆರೋಪ: ಕೋಟೇಶ್ವರ ಮೂಲದ ಸೌದಿಯ ಉದ್ಯೋಗಿ ಹರೀಶ್ ಕುಂದರ್ ಬಂಧನ – https://kundapraa.com/?p=34378

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.