ಸೌದಿ ಅರೇಬಿಯಾದಲ್ಲಿ ಹರೀಶ್ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತುರ್ತು ಸ್ಪಂದನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಫೇಸ್‌ಬುಕ್‌ನಲ್ಲಿ, ಸೌದಿ ದೊರೆಯ ವಿರುದ್ಧ ಪೋಸ್ಟ್ ಮಾಡಿದ ಅರೋಪದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ,  ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು.

Call us

Click Here

ಭಾರತೀಯ ದೂತವಾಸದ ಅಧಿಕಾರಿಗಳೊಂದಿಗೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ ಬಂಗೇರಾ ಅವರ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಕೋರಿದರು. ಈ ಪ್ರಕರಣವು ಕಾನೂನು ಮೂಲಕ ಇತ್ಯರ್ಥವಾಗಬೇಕಿದ್ದು, ಸ್ವಲ್ಪ ವಿಳಂಬವಾಗಲಿದ್ದು, ಬಂಧನದಲ್ಲಿರುವ ಅವರು ಕ್ಷೇಮವಾಗಿದ್ದಾರೆ ಎಂದು ದೂತವಾಸದ ಅಧಿಕಾರಿಗಳು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.

ಮಂಗಳವಾರ, ಹರೀಶ್ ಬಂಗೇರಾ ಅವರ ಪತ್ನಿ ಶ್ರೀಮತಿ. ಸುಮನ ಬಂಗೇರಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕಾರ್ಯದರ್ಶಿಗಳು, ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಸರ್ಕಾರವು ತಮ್ಮ ಪರವಾಗಿ ನಿಂತಿದ್ದು, ಆದಷ್ಟು ಶೀಘ್ರದಲ್ಲಿ ತಮ್ಮ ಪತಿಯ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಅವರಲ್ಲಿ ಧೈರ್ಯ ತುಂಬಿದರು.

ನಂತರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಗೋಪಾಡಿ ಗ್ರಾಮದಲ್ಲಿನ ಹರೀಶ್ ಬಂಗೇರಾ ಅವರ ಮನೆಗೆ ಭೇಟಿ ನೀಡಿ, ಶ್ರೀಮತಿ ಸುಮನ ಬಂಗೇರಾ ಅವರನ್ನು ಭೇಟಿ ಮಾಡಿ, ಹರೀಶ್ ಬಂಗೇರ ಅವರ ಬಿಡುಗಡೆ ಕುರಿತಂತೆ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಸುಮನ ಬಂಗೇರಾ, ಬಂಧನವಾದ ಬಳಿಕ ತಮ್ಮ ಪತಿ ಹರೀಶ್ ಬಂಗೇರಾ, ಅವರು ಕೆಲಸ ಮಾಡುವ ಕಂಪನಿಯು ತಮ್ಮನ್ನು ಸಂಪರ್ಕಿಸಿ, ಒಂದು ಬಾರಿ ಮಾತನಾಡಿತ್ತು. ತದನಂತರ ಎಂಬೆಸ್ಸಿಯು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಸೌದಿ ಪೋಲೀಸ್ ಮುಖಾಂತರವೆ ಅವರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ತಮ್ಮ ಪತಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸಬೇಕಾಗಿ ಕೋರುತ್ತಾ, ಸಾಧ್ಯವಾದಲ್ಲಿ ತಮ್ಮ ಪತಿಯೊಂದಿಗೆ ಒಮ್ಮೆ ದೂರವಾಣಿಯಲ್ಲಿ ಮಾತನಾಡಿಸಲು ಅವಕಾಶ ಮಾಡಿಕೊಡುವಂತೆ ಅವರು ಕೋರಿದರು.

Click here

Click here

Click here

Click Here

Call us

Call us

ಹರೀಶ್ ಬಂಗೇರ ಅವರು, ಕಳೆದ ಆರು ವರ್ಷಗಳಿಂದ ಅಲ್ಲೇ ಕೆಲಸ ಮಾಡುತ್ತಿದ್ದು, ಹಿಂದಿನ ವರ್ಷ ಜನವರಿಯಲ್ಲಿ ಊರಿಗೆ ಭೇಟಿ ನೀಡಿದ್ದರು. ಅವರು ಬಂಧನಕ್ಕೊಳಗಾದ ಸುದ್ದಿ ತಿಳಿಯುತ್ತಲೇ ಪ್ರಕ್ರಿಯೆಗನುಗುಣವಾಗಿ, ಉಡುಪಿ ಸೆನ್ ಪೋಲಿಸರಿಗೆ ಅರ್ಜಿ ನೀಡಿದ್ದು, ಪ್ರಕರಣವನ್ನು ಜಿಲ್ಲೆಯ ಮಾನವ ಹಕ್ಕು ಆಯೋಗದ ಗಮನಕ್ಕೂ ತರಲಾಗಿದೆ ಎಂದು ಹರೀಶ್ ಬಂಗೇರ ಅವರ ಮಾವ ಶ್ರೀನಿವಾಸ್ ಬಂಗೇರ ತಿಳಿಸಿದರು.

ಇದನ್ನೂ ಓದಿ:
► ಫೆಸ್ಬುಕ್ ಖಾತೆಯಲ್ಲಿ ಅವಹೇಳನ ಆರೋಪ: ಕೋಟೇಶ್ವರ ಮೂಲದ ಸೌದಿಯ ಉದ್ಯೋಗಿ ಹರೀಶ್ ಕುಂದರ್ ಬಂಧನ – https://kundapraa.com/?p=34378

Leave a Reply