Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಬು ಶೆಟ್ಟಿ ಕೊಲೆ ಪ್ರಕರಣ: ಸಂಬಂಧಿ ಸೇರಿದಂತೆ 6 ಮಂದಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಬಾಬು ಶೆಟ್ಟಿ ಕೊಲೆ ಪ್ರಕರಣ: ಸಂಬಂಧಿ ಸೇರಿದಂತೆ 6 ಮಂದಿ ಬಂಧನ

    Updated:26/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ, ಡಿ.26: ತಾಲೂಕಿನ ಕನ್ಯಾನ ಕಲ್ಕಂಬ ಎಂಬಲ್ಲಿ ಡಿ.17ರಂದು ಹಗಲು ಹೊತ್ತಿನಲ್ಲಿಯೇ ನಡೆದ ಜೋರ್ಮಕ್ಕಿ ಬಾಬು ಶೆಟ್ಟಿಯವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕುಂದಾಪುರ ಉಪವಿಭಾಗದ ಎಎಸ್‌ಪಿ ಹರಿರಾಂ ಶಂಕರ್ ನೇತ್ರತ್ವದ ಪೊಲೀಸರ ತಂಡ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

    Click Here

    Call us

    Click Here

    ಬಾಬು ಶೆಟ್ಟಿ ಕೊಲೆ ಪ್ರಕರಣಕ್ಕೆ ವೈಯುಕ್ತಿಕ ದ್ವೇಷವೇ ಕಾರಣ. ಈ ಹಿಂದೆ ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರಳಕಟ್ಟೆ ನಿವಾಸಿ ತೇಜಪ್ಪ ಶೆಟ್ಟಿ ಹಾಗೂ ಬಾಬು ಶೆಟ್ಟಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಬಾಬು ಶೆಟ್ಟಿಯನ್ನು ಕೊಲ್ಲಬೇಕು ಎಂದು ತೀರ್ಮಾನಿಸಿದ ತೇಜಪ್ಪ ಶೆಟ್ಟಿ ಸಂಚು ರೂಪಿಸಿದ್ದರು. ಕೊಲೆ ನಡೆದ ದಿನ ಮಧ್ಯಾಹ್ನ ಬಾಬು ಶೆಟ್ಟಿಗೆ ಕರೆ ಮಾಡಿದ ಆರೋಪಿಗಳು ಗೊಬ್ಬರ ಸಾಗಾಟ ಮಾಡಬೇಕಿದ್ದು ಅದನ್ನು ತೋರಿಸುತ್ತೇವೆ ಕರೆಸಿ, ಬೈಕಿನಲ್ಲಿ ಬಂದ ಬಾಬು ಶೆಟ್ಟಿಯನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದರು. ಆರೋಪಿಗಳನ್ನು ಒಂಬತ್ತು ದಿನದಲ್ಲಿ ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

    ಬಾಬು ಶೆಟ್ಟಿಯ ಸಂಬಂಧಿಕ ತೇಜಪ್ಪ ಶೆಟ್ಟಿ (68), ಶೆಟ್ರಕಟ್ಟೆ ನಿವಾಸಿ ಉದಯರಾಜ್ ಶೆಟ್ಟಿ(55), ಕೆಂಚನೂರು ನಿವಾಸಿ ರಮೇಶ್ ಪೂಜಾರಿ(25), ಆನಗಳ್ಳಿ ನಿವಾಸಿ ಪ್ರವೀಣ್ ಪೂಜಾರಿ(25), ಬಸ್ರೂರು ನಿವಾಸಿ ಸಚಿನ್ ಪೂಜಾರಿ(21) ಹಾಗೂ ಆನಗಳ್ಳಿ ನಿವಾಸಿ ರಾಘವೇಂದ್ರ ಪೂಜಾರಿ(24) ಕೊಲೆ ಆರೋಪಿಗಳು.

    Click here

    Click here

    Click here

    Click Here

    Call us

    Call us

    ಉಡುಪಿ ಎಸ್ಪಿ ನಿಶಾ ಜೇಮ್ಸ್ ಮಾರ್ಗದರ್ಶನದಲ್ಲಿ, ಎಎಸ್ಪಿ ಹರಿರಾಂ ಶಂಕರ್, ಡಿಸಿಐಬಿ ಇನ್ಸ್‌ಪೆಕ್ಟರ್ ಕಿರಣ್, ಕುಂದಾಪುರ ವೃತ್ತನಿರೀಕ್ಷಕ ಡಿ. ಆರ್ ಮಂಜಪ್ಪ, ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ರಾಜಕುಮಾರ್, ಶಂಕರನಾರಾಯಣ ಠಾಣೆ ಪಿಎಸ್‌ಐ ಶ್ರೀಧರ್ ನಾಯ್ಕ್, ಕುಂದಾಪುರ ಪಿಎಸ್‌ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    ಇದನ್ನೂ ಓದಿ:
    ► ಕುಂದಾಪುರ: ಹಾಡಹಗಲೇ ಹರಿದ ನೆತ್ತರು – https://kundapraa.com/?p=34281

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.