ರಾಷ್ಟ್ರೀಯ ಯುವ ದಿನದ ಅಂಗವಾಗಿ ಸೈಕಲ್ ರ‍್ಯಾಲಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ಸಮ್ಮಿಲನ ರಿ. ಯಳಜಿತ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನದ ಅಂಗವಾಗಿ ಶನಿವಾರ ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಸೈಕಲ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು.

Call us

Click Here

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಭಟ್ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯರಾದ ಜನಾರ್ದನ್, ಸಮ್ಮಿಲನ ರಿ. ಯಳಜಿತದ ಅಧ್ಯಕ್ಷರಾದ ರಂಗು ಮರಾಠಿ, ಕಾರ್ಯದರ್ಶಿ ವೆಂಕಟರಮಣ ಮರಾಠಿ, ಹಿರಿಯ ಶಿಕ್ಷಕರುಗಳಾದ ಮುಕ್ತ, ನಾರಾಯಣ ದೇವಾಡಿಗ, ವೀಣಾ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ನೆಹರು ಯುವ ಕೇಂದ್ರ ಸುನಿಲ್ ಹೆಚ್. ಜಿ ಸೈಕಲ್ ರ‍್ಯಾಲಿಯ ಉದ್ದೇಶವನ್ನು ವಿವರಿಸಿದರು. ಬೈಂದೂರು ಸರಕಾರಿ ಜ್ಯೂನಿಯರ್ ಕಾಲೇಜು ಹಾಗೂ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ರ‍್ಯಾಲಿಯಲ್ಲಿ ಭಾಗವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

Leave a Reply