ಸುರಭಿ ಜೈಸಿರಿ 2020 – ಆಮಂತ್ರಣ ಪತ್ರಿಕೆ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಮಂಗಳವಾರ ವಿಂಶತಿ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಸಂಸ್ಥೆಯು ಫೆ.2 ರಿಂದ ಫೆ.4ರ ತನಕ ಆಯೋಜಿಸಿರುವ ’ಸುರಭಿ ಜೈಸಿರಿ’ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಜೀವ ವಿಮಾದ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್. ಬಿಡುಗಡೆಗೊಳಿಸಿದರು.

Call us

Click Here

ಬಳಿಕ ಅವರು ಮಾತನಾಡಿ ಬದುಕಿನಲ್ಲಿ ಗುರಿ ತಲುಪಲು ಹಲವು ಅಡೆತಡೆಗಳು ಎದುರಾಗುತ್ತವೆ. ಆದರೆ ಎಲ್ಲವನ್ನೂ ಸಮಚಿತ್ತದಿಂದ ಎದುರಿಸುತ್ತಾ ಮುನ್ನುಗ್ಗಿದಾಗ ಸಾಧನೆ ಸಾಧ್ಯವಿದೆ. ಯಾವುದೇ ಸಂಘಟನೆಯಲ್ಲಿ ಪ್ರತಿಯೊಬ್ಬರ ತೊಡಗಿಸಿಕೊಳ್ಳುವಿಕೆ ಇದ್ದಾಗ ಅದು ಯಶಸ್ಸಿನತ್ತ ಸಾಗುತ್ತದೆ ಎಂದರು.

ಸುರಭಿ ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆನಂದ ಮದ್ದೋಡಿ, ಸಲಹೆಗಾರರಾದ ಜಿ. ತಿಮ್ಮಪ್ಪಯ್ಯ, ನಿರ್ದೇಶಕ ಸುಧಾಕರ ಪಿ., ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.

Leave a Reply