Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ಆರ್ಥಿಕ ವೇದಿಕೆ ಅಧಿವೇಶನದಲ್ಲಿ ರಾಜ್ಯ ತಂಡದ ಜತೆ ಕಿರಿಮಂಜೇಶ್ವರದ ಅಪರ್ಣಾ
    ಮಹಿಳಾಮಣಿ

    ವಿಶ್ವ ಆರ್ಥಿಕ ವೇದಿಕೆ ಅಧಿವೇಶನದಲ್ಲಿ ರಾಜ್ಯ ತಂಡದ ಜತೆ ಕಿರಿಮಂಜೇಶ್ವರದ ಅಪರ್ಣಾ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಸ್ವಿಟ್ಸರ್ಲಂಡ್‌ನ ದಾವೋಸ್‌ನಲ್ಲಿ 21ರಿಂದ 24ರ ವರೆಗೆ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ೫೦ನೆ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ರಾಜ್ಯದ ತಂಡಕ್ಕೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಮೂಲದ ಅಪರ್ಣಾ ಮಾರ್ಗದರ್ಶಿ ಹುದ್ದೆ ನಿರ್ವಹಿಸುತ್ತಿದ್ದಾರೆ. ಆಕೆ ಕಿರಿಮಂಜೇಶ್ವರ ರಥಬೀದಿಯಲ್ಲಿರುವ ಶ್ಯಾನುಭಾಗ್ ಕುಟುಂಬದ ’ನಮ್ಮನೆ’ಯ ಸುಧಾಕರ ಶ್ಯಾನುಭಾಗ್ ಅವರ ಪುತ್ರಿ.

    Click Here

    Call us

    Click Here

    ಮುಂಬೈಯಲ್ಲಿ ಜನಿಸಿ ತಂದೆಯೊಂದಿಗೆ ಅಲ್ಲಿಯೇ ವಾಸವಾಗಿರುವ ಅಪರ್ಣಾ ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಗಳಿಸಿರುವರು. ಭಾರತ ಮತ್ತು ದಕ್ಷಿಣ ಏಷ್ಯಾ ಸಮುದಾಯ ಕುರಿತು ಪರಿಣತರಾಗಿರುವ ಅವರು ಮುಂಬಯಿಯ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ ಉದ್ಯೋಗದಲ್ಲಿದ್ದಾರೆ. ಎರಡು ವರ್ಷಗಳ ಅವಧಿಗೆ ವಿಶ್ವ ಆರ್ಥಿಕ ಒಕ್ಕೂಟದ ಜತೆ ಕೆಲಸ ಮಾಡಲು ನಿಯುಕ್ತರಾಗಿ, ೪ ತಿಂಗಳಿನಿಂದ ಅದರ ಜಿನೇವಾ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

    ಸುಧಾಕರ ಶ್ಯಾನುಭಾಗ್ ವಿವಿಧೆಡೆ ಉದ್ಯೋಗ ನಡೆಸಿ, ನಿವೃತ್ತಿಯ ಬಳಿಕ ಮುಂಬೈಯಲ್ಲಿ ನೆಲೆಸಿದ್ದಾರೆ. ಅಪರ್ಣಾ ಅವರ ಪತಿ ಸಾಫ್ಟ್‌ವೇರ್ ಎಂಜಿನಿಯರ್. ಈ ಎಲ್ಲ ಮಾಹಿತಿ ನೀಡಿರುವ ಸುಧಾಕರ ಶ್ಯಾನುಭಾಗ್ ಅವರ ಸಹೋದರೂ ’ನಮ್ಮನೆ’ಯ ವಾಸಿಗಳೂ ಆಗಿರುವ ಕೆ. ಸದಾಶಿವ ಶ್ಯಾನುಭಾಗ್ ಮತ್ತು ಕೆ. ಬಾಲಕೃಷ್ಣ ಶ್ಯಾನುಭಾಗ್ ತಮ್ಮ ಕುಟುಂಬದ ಕುಡಿ ಅಪರ್ಣಾ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾದ ಆಕೆಯ ಶಿಕ್ಷಣ, ಪರಿಣತಿ ಮತ್ತು ಸಾಧನೆ ತಮಗೆಲ್ಲ ಹೆಮ್ಮೆಯ ವಿಚಾರ ಎಂದಿದ್ದಾರೆ.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d