Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈ.ಸೇ.ಸ ಸಂಘ: ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ಖಂಬದಕೋಣೆ ರೈ.ಸೇ.ಸ ಸಂಘ: ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

    Updated:29/01/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಈಶ್ವರ ಹಕ್ಲತೋಡು ಆಯ್ಕೆಗೊಂಡರು.

    Click Here

    Call us

    Click Here

    ಬುಧವಾರ ಸಂಘದ ಮುಖ್ಯ ಕಛೇರಿಯಲ್ಲಿ ಜರುಗಿದ ಆಯ್ಕೆ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಚುನಾಯಿತರಾದರು. ಕೃಷಿ ಇಲಾಖೆಯ ಅಧಿಕಾರಿ ಶಂಕರ ಶೇರ್ವೆಗಾರ್ ಚುನಾವಣಾಧಿಕಾರಿ ಆಗಿದ್ದರು.

    ಈ ಸಂದರ್ಭ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ನಾಗರಾಜ ಖಾರ್ವಿ, ಮಂಜು ದೇವಾಡಿಗ, ಮೋಹನ ಪೂಜಾರಿ, ರಘುರಾಮ ಶೆಟ್ಟಿ, ಸುರೇಶ ಶೆಟ್ಟಿ, ದಿನಿತಾ ಶೆಟ್ಟಿ, ಜಲಜಾಕ್ಷಿ, ಭರತ ದೇವಾಡಿಗ, ವೀರೇಂದ್ರ ಶೆಟ್ಟಿ, ಹೂವ ನಾಯ್ಕ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ವಿಠಲ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಇದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿರ್ದೇಶಕರು ಮತ್ತು ಸಿಬ್ಬಂದಿ ಅಭಿನಂದಿಸಿದರು.

    Click here

    Click here

    Click here

    Call us

    Call us

    ರೈತರ ಸೇವೆಯೇ ಪ್ರಥಮ ಆದ್ಯತೆ:
    ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಪ್ರಕಾಶ್ಚಂದ್ರ ಶೆಟ್ಟಿ ಇಪ್ಪತ್ತೆರಡು ವರ್ಷಗಳಿಂದ ಅಧ್ಯಕ್ಷನಾಗಿದ್ದೇನೆ. ಈ ಬಾರಿ ಶೇ. 97 ಸದಸ್ಯರು ನಮಗೆ ಮತ ನೀಡಿ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ನಿರ್ದೇಶಕರು ಇನ್ನೂ ಐದು ವರ್ಷ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ನಷ್ಟದಲ್ಲಿದ್ದ ಸಂಘವನ್ನು ಎಲ್ಲರ ಸಹಕಾರದಿಂದ ಮೇಲೆತ್ತಲಾಗಿದೆ. ಈಗ ರೂ 4 ಕೋಟಿ ಲಾಭ ಗಳಿಸುತ್ತಿದೆ. ರೂ 1.5 ಕೋಟಿ ನೀಡಿ ಕೆರ್ಗಾಲು ಗ್ರಾಮದಲ್ಲಿ ಜಮೀನು ಖರೀದಿಸಲಾಗಿದೆ ಅಲ್ಲಿ ರೈತರ ಸರ್ವ ಸರಕಿನ, ಸರ್ವ ಸೇವೆಯ ಕೇಂದ್ರ ನಿರ್ಮಿಸುವುದು ನಮ್ಮ ಮುಂದಿರುವ ಆದ್ಯತೆ. ಗ್ರಾಮವಾಸಿಗಳಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಬೇಕು. ಅವರಿಗೆ ಇಲ್ಲಿಯೇ ಉದ್ಯೋಗ ದೊರೆತು, ವಲಸೆ ಹೋಗುವುದು ನಿಲ್ಲಬೇಕು ಎಂಬ ಆಶಯ ನಮ್ಮದು. ಮುಂದಿನ ಅವಧಿಯಲ್ಲಿ ಅದನ್ನು ಸಾಧಿಸಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದರು.

    ಸಂಸ್ಥೆಯಲ್ಲಿ ರಾಜಕೀಯ ಬೇಡ:
    ಮುಂದುವರಿದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಸಹಕಾರಿ ರಂಗಕ್ಕೆ ಬರುವವರು ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡವರು ಎನ್ನುವುದು ನಿಜ. ಆದರೆ ಸಂಘದ ಆಡಳಿತ ರಾಜಕೀಯ ರಹಿತವಾಗಿ ನಡೆಯಬೇಕು. ನಿರ್ದೇಶಕರ ಆಯ್ಕೆಯಲ್ಲಿ, ಸಿಬ್ಬಂದಿ ನೇಮಕದಲ್ಲಿ, ಸಂಘ ನೀಡುವ ಸೇವೆಯಲ್ಲಿ ನಾವು ಇದನ್ನು ಪಾಲಿಸಿಕೊಂಡು ಬಂದಿದ್ದೇವೆ. ಮುಂದೆಯೂ ಅದೇ ಧೋರಣೆ ಮುಂದುವರಿಯಲಿದೆ ಎಂದ ಪ್ರಕಾಶ್ಚಂದ್ರ ಶೆಟ್ಟಿ, ಈ ವರೆಗೆ ತಮಗೆ ನೆರವಿತ್ತ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಹಾಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.