Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ಶೈನ್ ಶೆಟ್ಟಿಗೆ ಬಿಗ್‌ಬಾಸ್ ಸೀಸನ್ – 7 ಕಿರೀಟ
    ಊರ್ಮನೆ ಸಮಾಚಾರ

    ಕುಂದಾಪುರದ ಶೈನ್ ಶೆಟ್ಟಿಗೆ ಬಿಗ್‌ಬಾಸ್ ಸೀಸನ್ – 7 ಕಿರೀಟ

    Updated:03/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್ ಸೀಸನ್-7ರ ವಿನ್ನರ್ ಆಗಿ ಕುಂದಾಪುರ ಮೂಲದ ನಟ ಶೈನ್ ಶೆಟ್ಟಿ ಅವರು ಮೂಡಿಬಂದಿದ್ದಾರೆ. ವಿಜೇತ ಶೈನ್ ಶೆಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ರೋಫಿ ಹಾಗೂ 50 ಲಕ್ಷ ರೂ. ನಗದು ಬಹುಮಾನವನ್ನು ವಿತರಿಸಿದರು.

    Click Here

    Call us

    Click Here

    ಶೈನ್ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ತಮ್ಮ ಆಟ, ಚಟುವಟಿಕೆ, ಅವರ ಜಂಟಲ್‌ಮ್ಯಾನ್ ಅಟಿಟ್ಯೂಡ್‌ಗಳಿಂದಾಗಿ ಜನರಿಗೆ ದಿನದಿಂದ ದಿನಕ್ಕೆ ಇಷ್ಟವಾಗುತ್ತಾ ಹೋಗಿದ್ದರು. ಹಾಗಾಗಿ ಅವರನ್ನು ಕೊನೆಯವರೆಗೆ ಉಳಿಸಿಕೊಂಡು ಬಂದಿದ್ದು, ಅಂತಿಮವಾಗಿ ಜನರು ತಮ್ಮ ವೋಟಿಂಗ್ ಮೂಲಕ ಶೈನ್ ಶೆಟ್ಟಿಗೆ ಜಯ ತಂದುಕೊಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮಜಾ ಟಾಕೀಸ್ ಖ್ಯಾತಿಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ. ಪ್ರತಿಭಾವಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಅವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಬಿಗ್ ಬಾಸ್ ನಲ್ಲಿ 18 ಜನ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದರು. ಅಂತಿಮವಾಗಿ ಶೈನ್ ಶೆಟ್ಟಿ, ಕುರಿ ಪ್ರತಾಪ್, ವಾಸುಕಿ ವೈಭವ್, ದೀಪಿಕಾ ದಾಸ್ ಮತ್ತು ಭೂಮಿ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಅವರಲ್ಲಿ ಭೂಮಿ ಶೆಟ್ಟಿ ಮತ್ತು ದೀಪಿಕಾ ದಾಸ್ ಅವರು ಶನಿವಾರ ಮನೆಯಿಂದ ಹೊರಬಿದ್ದಿದ್ದರು. ಆ ಮೂಲಕ ಶೈನ್, ಪ್ರತಾಪ್ ಮತ್ತು ವಾಸುಕಿ ಬೆಸ್ಟ್ ತ್ರೀ ಸ್ಪರ್ಧಿಗಳಾಗಿ ಮೂಡಿಬಂದಿದ್ದರು. ಒಟ್ಟು 113ದಿನಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ಪ್ರತೀ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಶರಶ್ಚಂದ್ರ ಶೆಟ್ಟಿ ಹಾಗೂ ಇಂದಿರಾ ಎಸ್. ಶೆಟ್ಟಿ ದಂಪತಿಯ ಹಿರಿಯ ಪುತ್ರ. ಶೈನ್ ಶೆಟ್ಟಿ, ಮೂಲತಃ ಕುಂದಾಪುರದವರು. ಪ್ರಸ್ತುತ ಉಡುಪಿಯ ಆತ್ರಾಡಿಯಲ್ಲಿ ವಾಸವಾಗಿದ್ದಾರೆ. ಶೈನ್ ಅವರು ತಮ್ಮ ಶಿಕ್ಷಣವನ್ನು ಉಡುಪಿ ಸುತ್ತಮುತ್ತಲೇ ಪೂರೈಸಿದ್ದಾರೆ. ಬ್ರಹ್ಮಾವರದ ಲಿಟಲ್ ರಾಕ್, ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು, ಮಣಿಪಾಲದ ಎಂಪಿಎಂಸಿ, ಹೆಬ್ರಿಯ ನವೋದಯ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಯಾಗಿರುವ ಶೈನ್ ಅವರು ಬಳಿಕ ನಟನಾ ಕ್ಷೇತ್ರದಲ್ಲಿ ಅವಕಾಶವನ್ನು ಅರಸಿಕೊಂಡು ಉದ್ಯಾನ ನಗರಿ ಬೆಂಗಳೂರಿಗೆ ತೆರಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಬಹುಮುಖ ಪ್ರತಿಭೆಯು ಶೈನ್ ಶೆಟ್ಟಿ ಅವರು ಸ್ಯಾಂಡಲ್‌ವುಡ್‌ನಲ್ಲಿ ಸಾಧನೆ ಮಾಡುವ ಗುರಿ-ಛಲದೊಂದಿಗೆ ಕಳೆದ ೭ ವರ್ಷಗಳ ಹಿಂದೆ ಬೆಂಗಳೂರಿಗೆ ಪ್ರಯಾಣಿಸಿದರು. ಇವರಲ್ಲಿರುವ ನಟನಾ ಪ್ರತಿಭೆಗೆ ಆರಂಭದಲ್ಲೇ ಕಿರುತೆರೆಯಲ್ಲಿ ಅವಕಾಶಗಳು ಅರಸಿ ಬಂದವು. ‘ಮೀರಾ ಮಾಧವ’, ‘ಲಕ್ಷ್ಮೀ ಬಾರಮ್ಮ’, ‘ಮನೆದೇವ್ರು’, ‘ಕೋಗಿಲೆ’, ‘ಕನಕ’ ಮತ್ತಿತರ ಧಾರಾವಾಹಿಗಳಲ್ಲಿ ನಟಿಸಿ ಕರ್ನಾಟಕದ ಮನೆಮಾತಾದರು. ಉತ್ತಮ ಕಂಠಸಿರಿಯನ್ನೂ ಹೊಂದಿರುವ ಶೈನ್ ಅವರು ಸುವರ್ಣ ಸ್ಟಾರ್ ಸಿಂಗರ್ ಕಾರ್ಯಕ್ರಮದ ಫೈನಲ್ ಹಂತದವರೆಗೂ ತಲುಪಿದ್ದರು. ಶೈನ್ ಅವರು ‘ಒಂದು ಮೊಟ್ಟೆಯ ಕಥೆ’, ‘ಅಸ್ತಿತ್ವ’, ‘ಜೀವನ ಯಜ್ಞ’, ‘ಕ’ ಮೊದಲಾದ ಕನ್ನಡ ಚಿತ್ರಗಳಲ್ಲಿ, ‘ಕುಡ್ಲ ಕೆಫೆ’, ‘ರಂಗ್’ ಎಂಬ ಎರಡು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತುಳು ಚಿತ್ರರಂಗದಲ್ಲೂ ತಮ್ಮ ಅಭಿನಯ ಚಾತುರ್ಯವನ್ನು ಪ್ರದರ್ಶಿಸಿದ್ದಾರೆ. ಗಾಯಕರೂ, ಕಾರ್ಯಕ್ರಮ ನಿರೂಪಕರೂ ಆಗಿರುವ ಶೈನ್ ಶೆಟ್ರು ತಮ್ಮ ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡವರು. ಕಠಿಣ ಪರಿಶ್ರಮದ ಮೂಲಕ ಚಿತ್ರರಂಗದಲ್ಲಿ ತನ್ನ ಛಾಪನ್ನು ಮೂಡಿಸುತ್ತಿರುವ ಕರಾವಳಿಯ ಈ ಪ್ರತಿಭೆಯ ಮುಡಿಗೆ ಇದೀಗ ಬಿಗ್ ಬಾಸ್ ಕಿರೀಟ ಲಭಿಸಿರುವುದು ಅವರ ಪ್ರತಿಭೆಗೆ ಸಿಕ್ಕಿದ ಮನ್ನಣೆಯಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d