Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗ ಸುರಭಿ – 2020: ಫೆ.8 ರಿಂದ 14ರ ತನಕ ಶಿಶಿರ ನಾಟಕೋತ್ಸವ
    ಎಲ್ಲಿ ಏನು

    ರಂಗ ಸುರಭಿ – 2020: ಫೆ.8 ರಿಂದ 14ರ ತನಕ ಶಿಶಿರ ನಾಟಕೋತ್ಸವ

    Updated:06/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸುರಭಿ ರಿ. ಬೈಂದೂರು ಮತ್ತು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಏಳು ದಿನಗಳ ಕಾರ್ಯಕ್ರಮ ರಂಗ ಸುರಭಿ – 2020 ’ಶಿಶಿರ ನಾಟಕೋತ್ಸವ’ ಆಯೋಜಿಸಿದೆ. ಸುರಭಿ ಸಂಸ್ಥೆಯು ವಿಂಶತಿ ಸಂಭ್ರಮದೊಂದಿಗೆ ಪ್ರತಿವರ್ಷದಂತೆ ಫೆಬ್ರವರಿ 8 ರಿಂದ ಫೆಬ್ರವರಿ 14ರ ತನಕ ಪ್ರತಿದಿನ ಸಂಜೆ 6:30ಕ್ಕೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ.

    Click Here

    Call us

    Click Here

    ಫೆಬ್ರವರಿ 08 ಶನಿವಾರ ರಂಗಾಯಣ ಮೈಸೂರು ಅಭಿನಯದ, ರಮಾನಾಥ ಎಸ್. ರಚಿಸಿ, ಚಂದ್ರಹಾಸ್ ಕೇರಳ ನಿರ್ದೇಶಿಸಿದ ನಾಟಕ ’ಆರ‍್ಕೇಡಿಯಾದಲ್ಲಿ ಪಕ್’ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 09 ರವಿವಾರ ರಂಗಾಯಣ ಮೈಸೂರು ಅಭಿನಯದ, ಗಿರೀಶ್ ಕಾರ್ನಾಡ್ ರಚನೆ, ಚಿದಂಬರ್ ರಾವ್ ಜಂಬೆ ನಿರ್ದೇಶನದ ನಾಟಕ ’ಬೆಂದಕಾಳು ಆನ್ ಟೋಸ್ಟ್’ ಪ್ರದರ್ಶನಗೊಳ್ಳಲಿದ್ದು, ಫೆಬ್ರವರಿ 10 ಸೋಮವಾರ ರಂಗಾಯಣ ಮೈಸೂರು ಅಭಿನಯದ, ಶರವಣ್ ಕುಮಾರ್ ರಚಿಸಿ, ನಿರ್ದೇಶಿಸಿದ ನಾಟಕ ’ರೆಕ್ಸ್ ಆವರ್ಸ್’ ಡೈನೋ ಏಕಾಂಗಿ ಪಯಣ ಪ್ರದರ್ಶನ ಕಾಣಲಿದೆ. ಫೆಬ್ರವರಿ 11 ಮಂಗಳವಾರ ಸ್ವಂದನ ರಿ. ಸಾಗರ ಅಭಿನಯದ, ಡಾ| ಎಂ.ಜಿ ಹೆಗ್ಡೆ ಕನ್ನಡಕ್ಕೆ ಅನುವಾದಿಸಿ, ಎಸ್.ಕೆ. ದ್ವಾರಕನಾಥ್ ವಿನ್ಯಾಸ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದಲ್ಲಿ ಮುಡಿಬಂದ ನಾಟಕ ’ಯುದ್ಧ ಬಂತು ಮನೆಯವರೆಗೆ’ (ನಾಟಕ ತ್ರಿವಳಿ) ಪ್ರದರ್ಶನಗೊಳ್ಳಿದೆ. ಫೆಬ್ರವರಿ 12ರ ಬುಧವಾರ ಆಯನ ಮಂಗಳೂರು ಅಭಿನಯದ, ಅಥೋಲ್ ಪ್ಯುಗಾಡ್ ರಚನೆಯ, ಎಸ್. ಆರ್. ರಮೇಶ್ ಅನುವಾದಿಸಿ, ಕೆ. ಪಿ. ಲಕ್ಷ್ಮಣ್ ನಿರ್ದೇಶಿಸಿದ ನಾಟಕ ’ದ್ವೀಪ’ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 13ರ ಗುರುವಾರ ಮಂದಾರ ರಿ. ಬೈಕಾಡಿ ಬ್ರಹ್ಮಾವರ ಅಭಿನಯದ, ಡಾ. ಜಿ.ಎಸ್ ಭಟ್ಟ ಸಾಗರ ರಚನೆಯ, ರೋಹಿತ್ ಎಸ್. ಬೈಕಾಡಿ ವಿನ್ಯಾಸ ಹಾಗೂ ನಿರ್ದೇಶನದ ನಾಟಕ ’ಕೊಳ್ಳಿ’ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 14ರ ಶುಕ್ರವಾರ ಪಾದುವ ರಂಗ ಅಧ್ಯಯನ ಕೇಂದ್ರ ಅಭಿನಯದ, ಎಂ.ಪಿ ರಾಜೇಶ್ ಅವರ, ಅರುಣ್‌ಲಾಲ್ ವಿನ್ಯಾಸ ಹಾಗೂ ನಿರ್ದೇಶನ ಮಾಡಿದ ನಾಟಕ ’ಕೆಂಡೋನಿಯನ್ಸ್’ ಪ್ರದರ್ಶನಗೊಳ್ಳಲಿದೆ.

    ಫೆಬ್ರವರಿ 09ರ ರವಿವಾರ ಬೆಳಿಗ್ಗೆ 9:30ಕ್ಕೆ ಪಡುವರಿ ಮಾವಿನಕುಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಭಿ ಕಲಾಗ್ರಾಮದಲ್ಲಿ ’ರಂಗಭೂಮಿಯಲ್ಲಿ ಸಂಘಟನೆಯ ಪಾತ್ರ’ ಎಂಬ ವಿಷಯದ ಕುರಿತು ರಂಗ ಸಂವಾದ ನಡೆಯಲಿದೆ.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಪ್ರತಿದಿನ ಸುರಭಿ ಮಹಿಳಾ ಚಂಡೆ ತಂಡದಿಂದ ಚಂಡೆವಾದನ, ಸಭಾ ಕಾರ್ಯಕ್ರಮದಲ್ಲಿ ವಿವಿಧ ಕಲಾವಿದರಿಗೆ ಗೌರವಾರ್ಪಣೆ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೂ ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ, ನಿರ್ದೇಶಕ ಸುಧಾಕರ ಪಿ. ಬೈಂದೂರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.